ಅನೈತಿಕ ಚಟುವಟಿಕೆಗಳ ತಾಣವಾದ ಮಾರುಕಟ್ಟೆ


Team Udayavani, Jun 19, 2023, 1:38 PM IST

ಅನೈತಿಕ ಚಟುವಟಿಕೆಗಳ ತಾಣವಾದ ಮಾರುಕಟ್ಟೆ

ದೇವನಹಳ್ಳಿ: ದಳ್ಳಾಳಿಗಳ ಹಾವಳಿ ಇಲ್ಲದೆ ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಪುರಸಭೆ ಸಹಯೋಗ ದೊಂದಿಗೆ 48 ಲಕ್ಷ ವೆಚ್ಚದಲ್ಲಿ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆ ಮಾಡಿ ದೇವನಹಳ್ಳಿ ಪುರಸಭೆಗೆ ಹಸ್ತಾಂತರಿಸಿ ಒಂದು ವರ್ಷ ಕಳೆದರು ಇದು ವರೆಗೂ ಬಳಕೆಯಾಗದೆ ಕುಡುಕರು, ಅನಾಥರು, ಜೂಜುಕೋರರ ತಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಿ ರೈತರು ಬೆಳೆದ ಬೆಳೆಗಳನ್ನು ಮುಕ್ತವಾಗಿ ಮಾರಾಟ ಮಾಡಲು ಅನುಕೂಲ ಮಾಡಿಕೊಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಅಧಿಕಾರಿಗಳಿಗಿಲ್ಲ ಇಚ್ಚಾಶಕ್ತಿ: ಕೃಷಿ ಉತ್ಪನ್ನ ಮಾರು ಕಟ್ಟೆ ದೇವನಹಳ್ಳಿ ಪುರಸಭೆಗೆ ಹಸ್ತಾಂತರ ವಾಗಿ ಒಂದು ವರ್ಷ ಕಳೆದಿದ್ದು ಹರಾಜು ಮೂಲಕ ರೈತರು ಅಥವಾ ಬೀದಿ ಬದಿ ವ್ಯಾಪಾರಿ, ಹೂ ಹಾಗೂ ತರಕಾರಿ ಹಣ್ಣು ವ್ಯಾಪಾರಸ್ಥರನ್ನು ಮಾರು ಕಟ್ಟೆಗೆ ಸ್ಥಳಾಂತರಿಸಬಹುದಿತ್ತು ಆದರೆ ಅಧಿಕಾರಿ ಗಳು ತಲೆಕೆಡಿಸಿಕೊಳ್ಳುತ್ತಿಲ್ಲವೆಂದು ಕೆಲ ವ್ಯಾಪಾರಸ್ಥರು ದೂರುತ್ತಿದ್ದಾರೆ.

ಅನೈತಿಕ ಚಟುವಟಿಕೆಗಳ ತಾಣ: ಸಂಜೆ ಯಾಗುತ್ತಿದ್ದಂತೆ ಮಾರುಕಟ್ಟೆ ಅಕ್ಕಪಕ್ಕದಲ್ಲೆ ವೈನ್‌ ಶಾಪ್‌ಗ್ಳಿದ್ದು ಕುಡುಕರು ಮಾರುಕಟ್ಟೆಯಲ್ಲಿ ಕುಳಿತು ಕುಡಿದು ಅಲ್ಲೇ ಮಲಮೂತ್ರ ವಿಸರ್ಜನೆ, ಮಾಡಿ ಗಬ್ಬುನಾರುತ್ತಿದೆ, ಜೂಜುಕೋರರು ಜೂಜಾಡಲು ಬಳಸಿಕೊಳ್ಳುತ್ತಿದ್ದಾರೆ. ಕೆಲ ಅನಾಥರು ಮಾರುಕಟ್ಟೆಯನ್ನೇ ಮನೆಯನ್ನಾಗಿಸಿ ಕೊಂಡು ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು ಈಗಾಗಲೇ ಅನಾಥರೊಬ್ಬರು ಮಾರುಕಟ್ಟೆಯಲ್ಲಿ ಸತ್ತಿ ರುವ ಘಟನೆ ಸಹ ನಡೆದಿದೆ. ಪಟ್ಟಣದ ಹಳೇ ಬಸ್‌ ನಿಲ್ದಾಣದ ಇಂದಿರಾ ಕ್ಯಾಂಟಿನ್‌ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ 42 ಮುಚ್ಚು ಹರಾಜು ಮಾರುಕಟ್ಟೆಗಳಿದ್ದು, ರೈತರು ಬೆಳೆದ ತರಕಾರಿಗಳನ್ನು ಮಾರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ, ರೈತರ ಮುಕ್ತ ಮಾರುಕಟ್ಟೆಗೆ ಅನುಕೂಲಕ್ಕಾಗಿ ಮಾರುಕಟ್ಟೆ ನಿರ್ಮಾಣ ಮಾಡಿದೆ ಯಾದರು ಅದು ಉಪಯೋಗಕ್ಕೆ ಬಾರದಂತಾಗಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಬೀದಿಬದಿ ವ್ಯಾಪಾರಿಗಳಿಗೆ ಹರಾಜು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವಂತೆ ಅನೇಕ ಬಾರಿ ತಿಳಿಸಿದ್ದೇವೆ, ಯಾರು ಅಲ್ಲಿ ಬಂದು ವ್ಯಾಪಾರ ಮಾಡಲು ಸಿದ್ಧರಿಲ್ಲ, ಮಾರುಕಟ್ಟೆ ಎದುರಿನಲ್ಲೇ ಸಂತೆ ನಡೆಯುತ್ತದೆ, ಬೀದಿ ಬದಿ ವ್ಯಾಪಾರಿಗಳು ಮಾರುಕಟ್ಟೆಗೆ ಬಂದರೆ ಅಲ್ಲಿ ವ್ಯಾಪಾರ ಆಗುವುದಿಲ್ಲ, ಬೀದಿಬದಿಯಲ್ಲಿದ್ದರೆ ವ್ಯಾಪಾರವಾಗುತ್ತದೆ ಎನ್ನುತ್ತಾರೆ. ● ದೊಡ್ಡಮಲವಯ್ಯ, ಮುಖ್ಯಾಧಿಕಾರಿ ಪುರಸಭೆ ದೇವನಹಳ್ಳಿ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.