ನಕಲಿ ದಾಖಲೆ ಸೃಷ್ಟಿಸಿ ಗ್ರಾಮದ ಜಾಗ ಮಾರಾಟ ಆರೋಪ


Team Udayavani, Sep 24, 2019, 3:00 AM IST

nakali

ಆನೇಕಲ್‌: ನಕಲಿ ದಾಖಲೆಗಳನ್ನು ಸೃಷ್ಠಿಸಿ ಗ್ರಾಮದ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ, ಪಟ್ನಗೆರೆ ಗೊಲ್ಲಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು. ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ನಗೆರೆ ಗೊಲ್ಲಹಳ್ಳಿ ಗ್ರಾಮದ ಹೊರವಲಯದ ಜಾಗದಲ್ಲಿ 200 ವರ್ಷದಿಂದ ವಾಸವಿರುವ ಕುಟುಂಬಗಳನ್ನು ಏಕಾಏಕಿ ಖಾಲಿ ಮಾಡುವಂತೆ ಕ್ರಯದರರೊಬ್ಬರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಗೊಲ್ಲಹಳ್ಳಿ ಗ್ರಾಮ ನೂರಾರು ವರ್ಷಗಳ ಇತಿಹಾಸ ಹೊಂದಿದ್ದು, ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಗ್ರಾಮಕ್ಕೆ ನೀಡಲಾಗಿದೆ. ಆದರೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿನೆ ಮಾಡದೇ, ನಕಲಿ ದಾಖಲೆ ಸೃಷ್ಟಿ ಮಾಡಿ ಗ್ರಾಮವನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಗ್ರಾಪಂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಕಲಿ ದಾಖಲೆ ಸೃಷ್ಠಿಸಿ ಮಾಡಿ ಎಸ್‌.ಶಂಕರ್‌ ಎಂಬುವವರಿಗೆ ಖಾತೆ ಮಾಡಿದ ಆರೋಪ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಮೇಲಿದ್ದು, ಅವರು ಬಂದು ಮಾಹಿತಿ ನೀಡುವವರೆಗೆ ಪ್ರತಿಭಟನೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.  ಇನ್ನೂರು ವರ್ಷದಿಂದ 80 ಮನೆಗಳಲ್ಲಿ ಸಾವಿರಾರು ಜನ ಗ್ರಾಮದಲ್ಲಿ ವಾಸವಿದ್ದು, ಇದ್ದಕಿದ್ದಂತೆ ಬಂದು ಗ್ರಾಮ ಖಾಲಿ ಮಾಡುವಂತೆ ಕ್ರಯದಾರರು ಒತ್ತಡ ಹಾಕುತ್ತಿದ್ದಾರೆ.

ನಕಲಿ ಸೃಷ್ಟಿ ಮಾಡಿರುವ ವಣಕನಹಳ್ಳಿ ಪಂಚಾಯಿತಿ ಅಧಿಕಾರಿಗಳು, ಬಲಾಡ್ಯರೊಂದಿಗೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ಹೋರಾಟಗಾರ ಪ್ರಕಾಶ್‌, ರಗ್ಗೇಶ್‌, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ತಾಲೂಕು ಅಧ್ಯಕ್ಷ.ಎಂ.ಸಿ ಹಳ್ಳಿ ವೇಣು, ಸಿಪಿಎಂ ಯುವ ಮುಖಂಡ ಮಧು, ಕುಮಾರ್‌, ರಾಜು, ಅಣ್ಣಯ್ಯ ,ಗುಡ್ನಳ್ಳಿ ರವಿ, ಮುನಿವೀರಪ್ಪ,ಮುನಿಯಪ್ಪ, ಕಾವೇರಪ್ಪ, ರಾಮಚಂದ್ರ, ಮತ್ತಿತರರು ಇದ್ದರು.

ನೂರಾರು ವರ್ಷಗಳ ಹಿಂದೆ ನಮ್ಮ ತಾತ ಮುತ್ತಾತಂದಿರು ಇದೇ ಗ್ರಾಮದಲ್ಲಿ ವಾಸವಿದ್ದರು.ಈಗ ಏಕಾಏಕಿ ಗ್ರಾಮಕ್ಕೆ ಭೇಟಿ ನೀಡುತ್ತಿರುವ ಕೆಲವರು ನಮ್ಮನ್ನು ಊರನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಎಲ್ಲಿಗೆ ಹೋಗಬೇಕು ಎಂದು ತೋಚುತ್ತಿಲ್ಲ ನಮಗೆ ನ್ಯಾಯ ದೊರಕಿಸಿಕೊಡಿ.
-ಮುನಿಯಮ್ಮ, ಗ್ರಾಮಸ್ಥೆ

ಗ್ರಾಮ ಪಂಚಾಯಿತಿಯಿಂದಲೇ ಅಲ್ಲಿನ ಸ್ಥಳೀಯರಿಗೆ ಖಾತೆ ಮಾಡಿಕೊಡಲಾಗಿದೆ ಗ್ರಾಮವನ್ನು ಖಾಲಿ ಮಾಡಿಕೊಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಇದನ್ನು ಇಲ್ಲಿನ ಅಧಿಕಾರಿಗಳು ಹೇಗೆ ಮಾಡಿದ್ದಾರೆ ಎನ್ನುವುದನ್ನು ಚರ್ಚಿಸಿ ಸ್ಥಳೀಯರಿಗೆ ನ್ಯಾಯ ಒದಗಿಸಲು ಒಂದಾಗುತ್ತೇವೆ.
-ಆರ್‌.ದೇವರಾಜು, ಗ್ರಾಪಂ ಉಪಾಧ್ಯಕ್ಷ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.