ಲಾಕ್ ವೇಳೆ 11 ಸಾವಿರಕ್ಕೆ ದತ್ತು ಕೊಟ್ಟಿದ್ದ ಮಗು ತಾಯಿ ಮಡಲಿಗೆ

ಲಾಕ್‌ಡೌನ್‌ ವೇಳೆ 11 ಸಾವಿರ ಪಡೆದು ಶಿರಾ ಮೂಲದವರಿಗೆ ಮಗು ದತ್ತು ನೀಡಿದ್ದ ತಾಯಿ

Team Udayavani, Aug 30, 2020, 11:42 AM IST

ಲಾಕ್ ವೇಳೆ 11 ಸಾವಿರಕ್ಕೆ ದತ್ತು ಕೊಟ್ಟಿದ್ದ ಮಗು ತಾಯಿ ಮಡಲಿಗೆ

ನೆಲಮಂಗಲ: ಕೋವಿಡ್‌ನಿಂದ ಸರ್ಕಾರ ಲಾಕ್‌ ಡೌನ್‌ ವಿಧಿಸಿದ್ದ ಸಂದರ್ಭದಲ್ಲಿ ಮಗುವನ್ನು ಸಾಕಲಾರದೇ 11 ಸಾವಿರ ರೂ.ಹಣ ಪಡೆದು ಹೆಣ್ಣು ಮಗುವನ್ನು ದತ್ತು ನೀಡಿದ್ದ ತಾಯಿ, ಮತ್ತೆ ಮಗುವನ್ನು ಪೊಲೀಸರ ಸಮ್ಮುಖದಲ್ಲಿ ವಾಪಸ್‌ ಪಡೆದುಕೊಂಡಿದ್ದಾರೆ.

ತಾಲೂಕಿನ ಬಸವನಹಳ್ಳಿ ನಿವಾಸಿ ಆಗಿರುವ ನಾಗಲಕ್ಷ್ಮೀ ತನ್ನ ಮೂರೂವರೆ ವರ್ಷದ ಹೆಣ್ಣು ಮಗುವಿಗೆ ಲಾಕ್‌ಡೌನ್‌ ಸಮಯದಲ್ಲಿ ಊಟ ತಿಂಡಿ, ಬಟ್ಟೆ ನೀಡಲು ಸಾಧ್ಯವಾಗದ ಕಾರಣ, ತುಮಕೂರು ಜಿಲ್ಲೆಯ ಶಿರಾ ಮೂಲದ ವ್ಯಕ್ತಿಗೆ ದತ್ತು ನೀಡಿ ಹಣ ಪಡೆದುಕೊಂಡಿದ್ದರು. ಮನವಿ ಮಾಡಿದ್ದರು: ಲಾಕ್‌ಡೌನ್‌ ಮುಕ್ತಾಯವಾಗಿ ವ್ಯಾಪಾರ ವಹಿ ವಾಟು ಪುನಾರಂಭವಾದ ನಂತರ ನಾಗಲಕ್ಷ್ಮೀ, ತನ್ನ ಮಗು ಬೇಕು ವಾಪಸ್‌ ನೀಡಿ ಎಂದು ದತ್ತು ಪಡೆದ ವ್ಯಕ್ತಿಯನ್ನು ಕೇಳಿದ್ದಾಳೆ. ಆದರೆ, ದತ್ತು ಪಡೆದಿರುವುದಾಗಿ ಪತ್ರಕ್ಕೆ ಸಹಿ ಹಾಕಿದ್ದ ಹಿನ್ನೆಲೆ ನೆಲಮಂಗಲ ಪೊಲೀಸರಿಗೆ ಮಗುವನ್ನು ವಾಪಸ್‌ ಕೊಡಿಸುವಂತೆ ಮನವಿ ಮಾಡಿದ್ದರು. ಹೀಗಾಗಿ ವೃತ್ತ ನಿರೀಕ್ಷಕ ಶಿವಣ್ಣ ನೇತೃತ್ವದ ತಂಡ ದತ್ತು ಪಡೆದುಕೊಂಡಿದ್ದ ವ್ಯಕ್ತಿಗಳನ್ನು ಪತ್ತೆ ಮಾಡಿ ಮಗುವನ್ನು ಶುಕ್ರವಾರ ರಾತ್ರಿ ನಾಗಲಕ್ಷ್ಮೀ ಅವರಿಗೆ ವಾಪಸ್‌ ಕೊಡಿಸಿದರು.

ಮಗು ಸಾಕಲು ಅಸಾಧ್ಯವಾಗಿತ್ತು:ತಾಯಿ ನಾಗಲಕ್ಷ್ಮೀ ಪ್ರತಿಕ್ರಿಯಿಸಿ, ಲಾಕ್‌ಡೌನ್‌ ಸಂದರ್ಭದಲ್ಲಿ ಮಗುವನ್ನು ಸಾಕಲು ಸಾಧ್ಯವಾಗದ ಕಾರಣ ಕೃಷ್ಣಮೂರ್ತಿ ಎಂಬವರಿಗೆ ಪತ್ರಕ್ಕೆ ಸಹಿ ಹಾಕಿ ತಾನೇ ಮಗುವನ್ನು ನೀಡಿದ್ದೆ. ಆ ಸಂದರ್ಭದಲ್ಲಿ 11 ಸಾವಿರ ಹಣ ನೀಡಿದ್ದರು. ತನ್ನ ಮಗಳನ್ನು ಮರೆ ಯಲು ಸಾಧ್ಯವಾಗಲಿಲ್ಲ. ಪೊಲೀಸರ ಸಹಾಯದಿಂದ ಮತ್ತೆ ಮಗುವನ್ನು ಪಡೆದುಕೊಂಡಿದ್ದೇನೆಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.