ಭವಿಷ್ಯಕ್ಕಾಗಿ “ಮತ್ತೆ ಕಲ್ಯಾಣ ಅನಿವಾರ್ಯ’


Team Udayavani, Aug 12, 2019, 3:00 AM IST

bhavishya

ನೆಲಮಂಗಲ: ಭಾರತದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರು ಖಾಲಿ ಚೀಲವಿದ್ದಂತೆ, ಚೀಲಕ್ಕೆ ಮೌಲ್ಯಯುತ ನೈತಿಕತೆ ಮತ್ತು ಅರಿವು ತುಂಬುವ ಕೆಲಸ ಪೋಷಕರು ಮತ್ತು ಶಿಕ್ಷಕರಿಂದಾಗಬೇಕು. ಪ್ರತಿ ಮಗುವಿನಲ್ಲಿರುವ ಸಾಮಾಜಿಕ ಪ್ರಜ್ಞೆ ಮತ್ತು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಪಟ್ಟಣದ ಪವಾಡಬಸವಣ್ಣ ದೇವರಮಠದಲ್ಲಿ ಸಹಮತ ವೇದಿಕೆಯಿಂದ ಆಯೋಜಿಸಲಾಗಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿ ಮಾತನಾಡಿದರು.

ಗಳಿಸುವುದಕ್ಕಿಂತ ಉಳಿಸುವುದ ಕಲಿಸಿ: ಸಮಾಜದ ಜನರು 12ನೇ ಶತಮಾನದಲ್ಲಿ ಸಾಮರಸ್ಯದಿಂದ ಬಾಳಲು ಬಸವಣ್ಣನವರ ಕಲ್ಯಾಣ ಕಾರ್ಯ ರಕ್ಷಣೆಯಾಗಿತ್ತು. ವಿದ್ಯಾರ್ಥಿಗಳು ಭವಿಷ್ಯದ ಶಕ್ತಿಗಳಾಗಲು ಮತ್ತೆ ಕಲ್ಯಾಣ ಅನಿವಾರ್ಯವಾಗಿದೆ. ವಿದ್ಯಾರ್ಥಿಗಳಲ್ಲಿನ ಸಂಸ್ಕಾರ ಬೆಳೆದರೆ ಮಾತ್ರ ನಾಡಿನ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ. ಮನುಷ್ಯನಲ್ಲಿ ಸಂಸ್ಕಾರ ಮೂಡಬೇಕಾದರೆ ಮತ್ತೆ ಕಲ್ಯಾಣದ ಅವಶ್ಯವಿದೆ. ಮಕ್ಕಳಿಗೆ ಕೇವಲ ಶಿಕ್ಷಣ ಕಲಿಸುವುದಕ್ಕಿಂತ ಸಂಸ್ಕಾರ, ಸಂಸ್ಕೃತಿ ಕಲಿಸಿ, ಗಳಿಸುವುದಕ್ಕಿಂತ ಉಳಿಸುವುದನ್ನು ಕಲಿಸಿ. ಭಾರತದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಶಿಕ್ಷಣ ದೊರೆಯುವಂತಾಗಬೇಕು ಎಂದು ಹೇಳಿದರು.

ಶರಣರದ್ದು ಮತಾಂತರವಲ್ಲ: 12ನೇಯ ಶತಮಾನದಲ್ಲಿ ಶರಣರು ಮತಾಂತರವಾಗಲಿಲ್ಲ. ಅನಿಷ್ಠ ಜಾತಿ ಪದ್ಧತಿಯಿಂದ ಹೊರಬಂದು, ತುಳಿತಕ್ಕೆ ಒಳಗಾದವರಿಗೆ ಅರಿವು ಮೂಡಿಸಿದರು. ನರಜನ್ಮ ತೊಡೆದು ಲಿಂಗಧಾರಣೆ ಮಾಡಿ ಹರಜನ್ಮ ಪಡೆದರು. ಲಿಂಗಧಾರಣೆ ಬಲವಂತವಾಗಿರಲಿಲ್ಲ. ಆಗಿದ್ದರೆ ಮಾತ್ರ ಮತಾಂತರ. ಸ್ವಯಂ ಲಿಂಗಧಾರಣೆ ಮಾಡಿಕೊಳ್ಳುವುದು ಮತಾಂತರವಲ್ಲ ಎಂದು ಮಹಿಳೆಯೊಬ್ಬರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸಿದ ಪವಾಡ ಬಸವಣ್ಣ ದೇವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮಠಗಳು ಒಂದು ಜಾತಿಗೆ ಸಿಮೀತವಾಗದೇ ಬಸವಣ್ಣನವರ ತತ್ವಗಳಿಗನುಗುಣವಾಗಿ ನಡೆದುಕೊಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿಯೇ ಮತ್ತೆ ಕಲ್ಯಾಣ ಕಾರ್ಯಕ್ರಮವನ್ನು ನಮ್ಮ ಮಠದ ಅಂಗಳದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ಜತೆಗೆ ಮಠಗಳಲ್ಲಿ ಮಹಿಳೆಯರಿಗೆ ಮುಕ್ತ ಅವಕಾಶಗಳಿವೆ. ಪ್ರಾಧ್ಯಾನ್ಯತೆ ಇಲ್ಲ ಎಂಬುದು ಸುಳ್ಳು ಎಂದರು.

ವಿದ್ಯಾರ್ಥಿಗಳಿಂದ ಸಂವಾದ: ಮುಕ್ತ ಸಂವಾದದಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 12 ನೇ ಶತಮಾನದಿಂದ 21 ನೇ ಶತಮಾನದವರಗೆನ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳು ಪ್ರಶ್ನೆ ಕೇಳಿದರು. ಹೆಚ್ಚಾಗಿ ಲಿಂಗಾಯಿತ ಧರ್ಮದ ಗೊಂದಲದ ವಿಚಾರ ವಿದ್ಯಾರ್ಥಿಗಳಿಂದ ಪ್ರತಿಧ್ವನಿಸಿತು. ಬಸವಣ್ಣನವರ 2 ಮದುವೆ, ಕಲ್ಯಾಣ ಅನಿವಾರ್ಯವೇ?, ಮತ್ತೆ ಕಲ್ಯಾಣದ ಉದ್ದೇಶ, ಲಿಂಗಾಯತ ಜಾತಿಯೋ ಧರ್ಮವೋ? ವಿಷಯಗಳ ಕುರಿತು ಸ್ವಾಮೀಜಿಗಳು ಸ್ಪಷ್ಟನೆ ನೀಡಿದರು. ವಚನ ಗಾಯನ, ಪ್ರಬಂಧ, ವಚನಕಂಠಪಾಠ , ಭಾಷಣ, ಪ್ರಬಂಧ ಮುಂತಾದ ಸ್ಪರ್ಧೆಗಳಲ್ಲಿ ವಿಜೇತರಾದ 130 ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರಸಲಾಯಿತು.

ಸಾಮರಸ್ಯ ನಡಿಗೆ: ಪಟ್ಟಣದ ಪವಾಡ ಶ್ರೀಬಸವಣ್ಣದೇವರ ಮಠದಲ್ಲಿ ಸಿರಿಗೆರೆ ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಗಳು ಮತ್ತು ಬಸವಣ್ಣದೇವರಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಸಾಮರಸ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಗಾಸೆ, ಪಠಕುಣಿತ, ಡೊಳ್ಳುಕುಣಿತ ಮತ್ತಿತರ ಜನಪದ ಕಲಾತಂಡಗಳು ಸಾಮರಸ್ಯ ನಡಿಗೆಗೆ ಮೆರಗು ತಂದು ಸಾರ್ವಜನಿಕರನ್ನು ಆಕರ್ಷಿಸಿದವು.

ರಾಜ್ಯ ಸಭೆ ಸದಸ್ಯ ಡಾ.ಎಲ್‌.ಹನುಮಂತಯ್ಯ, ಕಲಾವಿದರಾದ ಶ್ರೀನಿವಾಸ್‌ ಕಪ್ಪಣ್ಣ, ಸಹಮತ ವೇದಿಕೆ ಸಂಯೋಜಕ ಅನಂತ ನಾಯಕ, ಕೆನಡಾದ ಪ್ರತಿನಿಧಿ ಜ್ಯೋತಿ, ಕಂಚಗಲ್‌ ಬಂಡೇ ಮಠದ ಬಸವಲಿಂಗ ಸ್ವಾಮೀಜಿ, ಖಾನಿಮಠದ ಶ್ರೀಬಸವರಾಜ ಸ್ವಾಮೀಜಿ, ವಿಜಯಪುರ ಬಸವಕಲ್ಯಾಣ ಮಠದ ಶ್ರೀಮಹದೇವ ಸ್ವಾಮೀಜಿ, ರಂಗ ಶಿಕ್ಷಣ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿ. ಸಿದ್ದರಾಜು, ಪುರಸಭೆ ಸದಸ್ಯ ಪೂರ್ಣಿಮಾ ಸುಗ್ಗರಾಜು, ಸುಧಾ ಕೇಶವಮೂರ್ತಿ, ಪ್ರದೀಪ್‌, ರಂಗಭೂಮಿ ಕಲಾವಿದರ ಸಂಘದ ಗೌರವಾಧ್ಯಕ್ಷ ತಿಮ್ಮರಾಜು, ಅಧ್ಯಕ್ಷ ರುದ್ರಪ್ಪ, ರೈತಹಿತರಕ್ಷಣಾಸಮಿತಿ ಕಾಯದರ್ಶಿ ಲಕ್ಷ್ಮೀವೆಂಕಟೇಶ್‌,ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.