ಜಾತಿ ಮುಕ್ತ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಶ್ರಮ


Team Udayavani, Dec 8, 2019, 3:00 AM IST

jaati-mukta

ಆನೇಕಲ್‌: ಜಾತಿ ಮುಕ್ತ ಸಮಾಜ ನಿರ್ಮಾಣ ವಾಗಬೇಕೆಂದು ಅಂಬೇಡ್ಕರ್‌ ಕನಸು ಕಂಡಿದ್ದರು. ಆದರೆ, ಕನಸು ಇಂದಿಗೂ ನನಸಾಗಿಲ್ಲ ಎಂದು ಹೋರಾಟಗಾರ ಬಿ.ಗೋಪಾಲ್‌ ಬೇಸರ ವ್ಯಕ್ತ ಪಡಿಸಿದರು.

ತಾಲೂಕಿನ ಜಿಗಣಿಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜೈ ಭೀಮ್‌ ಅಂಬೇಡ್ಕರ್‌ ಯುವಕರ ಸಂಘದ ಸಹಯೋಗದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ 63ನೇ ಪರಿನಿರ್ವಾಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೆಣ್ಣು ಮಕ್ಕಳು ಸೇರಿ ಎಲ್ಲಾ ವಯಸ್ಕರಿಗೂ ಮತದಾನ ಹಕ್ಕು ದೊರೆತಿದ್ದು ಅಂಬೇಡ್ಕರ್‌ ಹೋರಾಟದ ಫ‌ಲವೇ ಹೊರೆತು ಗಾಂಧಿ ಮತ್ತು ಭಗವಂತನ ಕೃಪೆಯಿಂದ ಅಲ್ಲ ಎಂದರು.

ಕೆರೆ ನೀರು ಸೇವನೆಗೆ, ಅಸ್ಪೃಶ್ಯತೆ ನಿರ್ಮೂಲನೆ ಸೇರಿದಂತೆ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದವರು ಯಾವುದೇ ಭಗವಂತನಲ್ಲ ಅವರೇ ಅಂಬೇಡ್ಕರ್‌. ಅವರು ಕೇವಲ ದಲಿತ ಸಮುದಾಯಕ್ಕೆ ಮಾತ್ರ ಮೀಸಲಾತಿ ನೀಡಿಲ್ಲ, ಹಿಂದುಳಿದ ಸಮುದಾಯಕ್ಕೂ ಸಮಾನ ಹಕ್ಕು ಕೊಟ್ಟಿದ್ದಾರೆ ಎಂಬುದನ್ನು ಅರಿಯಬೇಕಿದೆ ಎಂದರು.

ದೇಶದ ಆಡಳಿತವನ್ನು ಶೋಷಿತ ಸಮುದಾಯ ನಡೆಸಬೇಕು ಎಂಬುದು ಅಂಬೇಡ್ಕರ್‌ ಕನಸಾಗಿತ್ತು. ಆದರೆ, ಆ ಕನಸೂ ಇಂದಿಗೂ ನೆರವೇರಲಿಲ್ಲ. ಅಂಬೇಡ್ಕರ್‌ ರಥವನ್ನು ಅಂಬೇಡ್ಕರ್‌ ವಾದಿಗಳು ಮುಂದೆ ಎಳೆದುಕೊಂಡು ಹೋಗುವ ಕೆಲಸವಾಗಬೇಕಿದೆ. ಸಂವಿಧಾನ ಯಥಾಸ್ಥಿತಿಯಾಗಿ ಜಾರಿಗೆಗೊಳಿಸಿದರೆ ಈ ದೇಶದಲ್ಲಿ ಬಡವರು ಇರುವುದಿಲ್ಲ. ಆದರೆ ಇಂದು ಶತ್ರುಗಳ ಕೈಯಲ್ಲಿ ಸಂವಿಧಾನ ಸಿಲುಕಿಕೊಂಡಿದೆ.

ಸಂವಿಧಾನ ಜಾರಿ ಮಾಡುವ ಹಂತಕ್ಕೆ ನಮ್ಮವರು ಬರಬೇಕಿದೆ. ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಅಧಿಕಾರ ಪಡೆಯುವ ದೃಷ್ಟಿಕೋನ ಬೆಳೆಸಿಕೊಳ್ಳಬೇಕೆಂದರು. ನಮ್ಮ ದಲಿತ ಸಮುದಾಯಗಳಲ್ಲಿ ಒಗ್ಗಟ್ಟು ಮತ್ತು ಅರಿವಿನ ಕೊರತೆಯಿಂದ ಅಧಿಕಾರ ಪಡೆಯಲು ಸಾಧ್ಯವಾಗುತ್ತಿಲ್ಲ, ಬೇಡುವುದನ್ನು ಬಿಟ್ಟು ಆಳುವ ಸಮಾಜವಾಗಬೇಕಿದೆ ಎಂದು ಯುವಕರಿಗೆ ಸ್ಪೂರ್ತಿ ತುಂಬಿದರು.

ಹೋರಾಟಗಾರ ಜಿಗಣಿ ವಿನೋದ್‌, ಅಂಬೇಡ್ಕರ್‌ ನೀಡಿರುವ ಸಂವಿಧಾನದ ಭಿಕ್ಷೆಯಲ್ಲಿ ನಾವು ಬದುಕುತ್ತಿದ್ದು ನಿರಾಶ್ರಿತರಿಗೆ ನಮ್ಮ ಕೈಲಾದ ಸೇವೆ ಮಾಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡೋಣ. ಪ್ರತಿ ಮನೆ-ಮನದಲ್ಲಿ ಅಂಬೇಡ್ಕರ್‌ ಅವರ ಆಶಯಗಳನ್ನು ಭಿತ್ತಿ ಬುದ್ಧ ಭಾರತ ನಿರ್ಮಾಣ ಮಾಡೋಣ ಎಂದರು. ಹಾಗೆಯೇ ಮತವನ್ನು ಹಣ- ಆಮಿಷಗಳಿಗೆ ಮಾರಾಟ ಮಾಡದೆ ಉತ್ತಮ ವ್ಯಕ್ತಿಗಳಿಗೆ ಮತ ಹಾಕುವ ಮುಖೇನ ನಮ್ಮ ಅಭಿವೃದ್ಧಿಯನ್ನು ನಾವೇ ಕಾಣಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.