ಉತ್ಪಾದಕರ – ನೌಕರರ ಹಿತ ಕಾಯಲಿದೆ ಬಮುಲ್‌


Team Udayavani, Dec 27, 2019, 11:48 AM IST

br-tdy-1

ದೇವನಹಳ್ಳಿ: ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು ನೌಕರರ ಹಾಗೂ ಹಾಲು ಉತ್ಪಾದಕರ ಹಿತ ಕಾಯುವ ಕೆಲಸವನ್ನು ಒಕ್ಕೂಟ ಮಾಡುತ್ತಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ ನಿದೇರ್ಶಕ ಬಿ.ಶ್ರೀ ನಿವಾಸ್‌ ತಿಳಿಸಿದರು.

ನಗರದ ಪುಟ್ಟಪ್ಪನ ಗುಡಿ ಬೀದಿಯ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ವಾರ್ಷಿಕ ಕ್ಯಾಲೆಂಡರ್‌ ಬಿಡುಗಡೆ ಮಾಡಿ ಮಾತನಾಡಿದರು.

ಅನುಕೂಲವಾಗಲಿದೆ: ನೌಕರರ ನಿವೃತ್ತಿ ನಂತರ ಪ್ರೋತ್ಸಾಹ ಧನ 50 ಸಾವಿರ ದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ನೌಕರರಿಗೆ ಮಾಸಿಕ ವೇತನವಿಲ್ಲ. ಸಹಕಾರ ಸಂಘದಲ್ಲಿ ಸಂಗ್ರಹವಾಗುವ ಹಾಲಿನ ಪ್ರಮಾಣ ಆಧರಿಸಿ ಗೌರವ ಧನ ಪಡೆಯುತ್ತಿದ್ದಾರೆ. ನೌಕರರಿಗೆ ಸೇವಾ ಭದ್ರತೆ ನೀಡಬೇಕು ಎಂಬ ಚಿಂತನೆ ಒಕ್ಕೂಟದಲ್ಲಿದ್ದರೂ ಸಮರ್ಪಕ ಚರ್ಚೆಯಾಗಿಲ್ಲ. ನೌಕರರ ಅನೇಕ ಬೇಡಿಕೆ ಇದೆ.ಇಂದೇ ಬಗೆಹರಿಸಲು ಸಾಧ್ಯವಿಲ್ಲ. ಇತ್ತೀಚಿಗಷ್ಟೇ ಕನಕ ಪುರದಲ್ಲಿ ಮೆಗಾ ಡೇರಿ ಕಾರ್ಯಾರಂಭ ಮಾಡಿದೆ ಮುಂದೆ ಅನುಕೂಲವಾಗಲಿದೆ ಎಂಬ ವಿಶ್ವಾಸ ವಿದೆ ಎಂದರು.

70 ಲಕ್ಷ ರೂ.ವೆಚ್ಚ: ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಚನ್ನಕೇಶವ, ಸಂಘ ನೋಂದಣಿ ಆದ ನಂತರ ನೂತನ ಪದಾಧಿಕಾರಿಗಳು ನೇಮಕಗೊಂಡು ಸಂಘದಲ್ಲಿ ಯಾವುದೇ ಸಂಪನ್ಮೂಲವಿಲ್ಲದೆ ನಿವೇಶನ ಖರೀದಿ ಮತ್ತು ಭವನ ನಿರ್ಮಾಣಕ್ಕೆ ಸುಮಾರು 70 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಇದು ನಿರಂತರ ಒಂದು ವರ್ಷದ ಶ್ರಮ ವಾಗಿದೆ. ಈ ಹಿಂದಿನ ಶಾಸಕ ಪಿಳ್ಳ ಮುನಿಶಾಮಪ್ಪ ಮತ್ತು ಹಾಲಿ ಶಾಸಕ ನಾರಾಯಣಸ್ವಾಮಿ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್‌ ಸಹಕಾರ ಅತಿ ಮುಖ್ಯಾವಾಗಿದೆ ಎಂದು ತಿಳಿಸಿದರು.

ಕುಂದುಕೊರತೆ ಚರ್ಚಿಸಲು ಅನುಕೂಲ: ತಾಲೂಕಿನಲ್ಲಿರುವ 181 ಹಾಲು ಉತ್ಪಾದಕರ ಸಹಕಾರ ಸಂಘಗಳು ಬೆಂಬಲಿಸಿ ಹಣ ನೀಡಿವೆ. ಕೆಲ ದಾನಿಗಳು ವೈಯಕ್ತಿಕವಾಗಿ ಧನ ಸಹಾಯ ಮಾಡಿದ ಪರಿಣಾಮ ಒಂದು ಶಾಶ್ವತ ಭವನ ನಿರ್ಮಾಣ ಮಾಡಿ ನೌಕರರ ಕುಂದು ಕೊರತೆ ಚರ್ಚಿಸಲು ಅನುಕೂಲವಾಗಿದೆ ಎಂದು ಹೇಳಿದರು.

ದೇವನಹಳ್ಳಿ ಹಾಲು ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗಂಗಯ್ಯ, ಸಹಾಯಕ ವ್ಯವ ಸ್ಥಾಪಕ ಮುನಿರಾಜೇಗೌಡ, ಪಿ ಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಸಿ.ಮುನಿರಾಜು, ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾ ಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್‌. ಲೋಕೇಶ್‌, ಖಜಾಂಚಿ ರಮೇಶ್‌, ಸಂಘಟನಾ ಕಾರ್ಯದರ್ಶಿ ಬಿ.ರಾಜಣ್ಣ, ಐಸಿ ವಿಜಯ್‌ ಕುಮಾರ್‌, ನಿರ್ದೇಶಕರಾದ ಕೆ.ಸಿ.ಉಮಾ, ಅಶ್ವತ್ಥ ನಾರಾಯಣಸ್ವಾಮಿ, ಜಯರಾಮಯ್ಯ ಇದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.