ಪ್ರೇಯಸಿ ಕೊಂದು ನೇಣಿಗೇರಿಸಲು ಯತ್ನಿಸಿದ


Team Udayavani, Jun 7, 2023, 3:20 PM IST

ಪ್ರೇಯಸಿ ಕೊಂದು ನೇಣಿಗೇರಿಸಲು ಯತ್ನಿಸಿದ

ಬೆಂಗಳೂರು: ಪ್ರಿಯಕರನೇ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಲೆಗೈದು, ಬಳಿಕ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಪರಾರಿಯಾಗಿರುವ ಘಟನೆ ಜೀವನ್‌ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೈದರಾಬಾದ್‌ ಮೂಲದ ಆಕಾಂಕ್ಷಾ (23) ಕೊಲೆಯಾದವರು.

ಕೃತ್ಯ ಎಸಗಿದ ಆಕೆಯ ಪ್ರಿಯಕರ, ದೆಹಲಿ ಮೂಲದ ಅರ್ಪಿತ್‌ ಗುರಿಜಾಲ (28) ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಆರೋಪಿ ಅರ್ಪಿತ್‌ ಎಂಬಿಎ ವ್ಯಾಸಂಗ ಮಾಡಿದ್ದು, ಆಕಾಂಕ್ಷಾ ಬಿ.ಕಾಂ ಪದವೀಧರೆ. ಎರಡು ವರ್ಷಗಳ ಹಿಂದೆ ಇಬ್ಬರು ಬೆಂಗಳೂರಿಗೆ ಬಂದಿದ್ದು, ಮಾರ್ಕೆಟಿಂಗ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರು ಪರಸ್ಪರ ಪರಿಚಯವಾಗಿದ್ದು, ಕೆಲ ದಿನಗಳ ಬಳಿಕ ಪ್ರೇಮಾಂಕುರವಾಗಿದೆ. ಆ ಬಳಿಕ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಇತ್ತೀಚೆಗೆ ಅರ್ಪಿತ್‌ಗೆ ಹೈದರಾಬಾದ್‌ನಲ್ಲಿ ಕೆಲಸ ಸಿಕ್ಕಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಇನ್ನು ಆಕಾಂಕ್ಷಾ ಕೋಡಿಹಳ್ಳಿಯ 6ನೇ ಕ್ರಾಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು. ಈ ಮಧ್ಯೆಯೂ ಆಕಾಂಕ್ಷ ಮತ್ತು ಅರ್ಪಿತ್‌ ನಡುವೆ ಫೋನ್‌ನಲ್ಲಿ ಪದೇ ಪದೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಬ್ಬರು ಪ್ರತ್ಯೇಕವಾಗಲು ನಿರ್ಧರಿಸಿದ್ದರು. ಆ ಬಳಿಕವೂ ಎರಡ್ಮೂರು ದಿನಗಳಿಗೊಮ್ಮೆ ಇಬ್ಬರು ಕರೆ ಮಾಡಿ ಮಾತನಾಡುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಕೊಂದು, ಆತ್ಮಹತ್ಯೆ ಕಥೆ ಕಟ್ಟಲು ಯತ್ನ: ಹೈದರಾಬಾದ್‌ನಲ್ಲಿದ್ದ ಅರ್ಪಿತ್‌ ಭಾನುವಾರವೇ ಬೆಂಗಳೂರಿಗೆ ಬಂದಿದ್ದು, ಪ್ರೇಯಸಿ ಮನೆಯಲ್ಲಿಯೇ ವಾಸವಾಗಿದ್ದ. ಸೋಮವಾರ ಇಬ್ಬರು ಒಟ್ಟಿಗೆ ಹೊರಗಡೆ ಸುತ್ತಾಡಿ, ಮಧ್ಯಾಹ್ನ ಮನೆಗೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಇಬ್ಬರ ನಡುವೆ ವೈಯಕ್ತಿಕ ವಿಚಾರಗಳಿಗೆ ಜಗಳ ನಡೆದಿರುವ ಸಾಧ್ಯತೆಯಿದೆ. ಅದರಿಂದ ಆಕ್ರೋಶಗೊಂಡ ಆರೋಪಿ ಆಕಾಂಕ್ಷಳ ಉಸಿರುಗಟ್ಟಿಸಿ ಕೊಲೆ ಗೈದಿದ್ದಾನೆ. ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು, ಆಕೆಯ ವೇಲ್‌ನಿಂದಲೇ ಕುತ್ತಿಗೆ ಬಿಗಿದು ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಬಿಂಬಿಸಲು ಯತ್ನಿಸಿದ್ದಾನೆ. ಸಾಧ್ಯವಾಗದೆ, ನೆಲದ ಮೇಲೆಯೇ ಮೃತದೇಹ ಇಟ್ಟು ಪರಾರಿಯಾಗಿದ್ದಾನೆ. ಸಂಜೆ 7ಗಂಟೆ ಸುಮಾರಿಗೆ ಆಕಾಂಕ್ಷಳ ಸ್ನೇಹಿತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಕೂಡಲೇ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜೆ.ಬಿ.ನಗರ ಠಾಣೆ ಪೊಲೀಸರಿಗೆ, ಘಟನಾ ಸ್ಥಳ ಪರಿಶೀನೆ ಮತ್ತು ಪ್ರಾಥಮಿಕ ತನಿಖೆಯಿಂದ ಕೊಲೆ ಎಂಬುದು ಗೊತ್ತಾಗಿದೆ.

ಇನ್ನು ಅಪಾರ್ಟ್‌ಮೆಂಟ್‌ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮತ್ತು ಆಕಾಂಕ್ಷ ಸ್ನೇಹಿತೆ ಹೇಳಿಕೆ ಆಧರಿಸಿ ತನಿಖೆ ನಡೆಸಿದಾಗ ಅರ್ಪಿತ್‌ ಕೊಲೆಗೈದಿರುವ ಸಾಧ್ಯತೆ ಇದೆ. ಕೃತ್ಯದ ಬಳಿಕ ಆತ ಗಾಬರಿಗೊಂಡು ಅಪಾರ್ಟ್‌ಮೆಂಟ್‌ನಿಂದ ಹೊರಹೋಗುತ್ತಿರುವ ದೃಶ್ಯ ಸೆರೆಯಾಗಿದ್ದು, ಆತನ ಪತ್ತೆಗಾಗಿ ಒಂದು ತಂಡ ದೆಹಲಿಗೆ ತೆರಳಿದೆ ಎಂದು ಪೊಲೀಸರು ಹೇಳಿದರು.

ಜೆ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.