Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ
Team Udayavani, Sep 21, 2023, 12:24 PM IST
ಆನೇಕಲ್: ಬನ್ನೇರುಘಟ್ಟ ಪಾರ್ಕ್ನಲ್ಲಿ ಚಿರತೆ ಬಳಿಕ ಈಗ ಜಿಂಕೆ ಸಾವನ್ನಪ್ಪಿದೆ. ಬೆಕ್ಕಿನಿಂದ ಹರಡುವ ಫೆಲೈನ್ ಫ್ಯಾನ್ ಲ್ಯುಕೋಪೆನಿಯಾ ಎಂಬ ವೈರಸ್ ಕಾಣಿಸಿಕೊಂಡು 7 ಚಿರತೆ ಮರಿಗಳ ಸಾವಿಗೀಡಾದ ಬೆನ್ನಲ್ಲೇ 15 ಜಿಂಕೆಗಳು ಮೃತಪಟ್ಟಿವೆ.
ಸೇಂಟ್ ಜಾನ್ ಆಸ್ಪತ್ರೆ ಬಳಿ ಸಾಕಲಾಗಿದ್ದ ಜಿಂಕೆಗಳನ್ನು ಸೂಕ್ತ ಪೋಷಣೆ ಇಲ್ಲವೆಂದು ಬನ್ನೇರುಘಟ್ಟ ಪಾರ್ಕ್ಗೆ ತರಲಾಗಿತ್ತು. 37 ಜಿಂಕೆಗಳಲ್ಲಿ ಈಗಾಗಲೇ 15 ಜಿಂಕೆಗಳು ಸಾವನ್ನಪ್ಪಿವೆ. ಬೇರೆಡೆಯಿಂದ ತಂದ ಪ್ರಾಣಿಗಳನ್ನು ಕನಿಷ್ಠ ಒಂದು ತಿಂಗಳು ಕ್ವಾರಂಟೈನ್ ಮಾಡಬೇಕಿತ್ತು. ಆರೋಗ್ಯ ಸೇರಿದಂತೆ, ಆಹಾರ, ಔಷಧೋಪಚಾರ ಬಗ್ಗೆ ನಿಗಾ ವಸಬೇಕಾಗಿತ್ತು. ಆದರೆ, ಜಿಂಕೆಗಳ ಬಗ್ಗೆ ಕಾಳಜಿ ವಹಿಸದ ಕಾರಣ ಒಂದಕ್ಕೊಂದು ಕಿತ್ತಾಡಿಕೊಂಡು ಜತೆಗೆ ಸರಿಯಾದ ಆಹಾರ ಜಿಂಕೆಗಳಿಗೆ ಸಿಗದ ಹಿನ್ನೆಲೆಯಲ್ಲಿ ಕರುಳಿನ ಮೇಲೆ ಹೆಚ್ಚಿನ ಪ್ರಭಾವ ಬೀರಿ ಜಿಂಕೆಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬನ್ನೇರುಘಟ್ಟ ಪಾರ್ಕ್ ನಿರ್ದೇಶಕ ಸೂರ್ಯಸೇನ್, ಬೆಂಗಳೂರಿನ ಸೆಂಟ್ ಜೋನ್ಸ್ ಬಳಿ ಇದ್ದ ಜಿಂಕೆಗಳನ್ನು ಬನ್ನೇರುಘಟ್ಟಕ್ಕೆ ತರಲಾಗಿತ್ತು. ಎರಡು ಜಿಂಕೆಗಳು ಇಲ್ಲಿಗೆ ಬರುವ ಸಂದರ್ಭದಲ್ಲಿ ಸಾವನ್ನಪ್ಪಿದ್ದವು. ಉಳಿದ ಜಿಂಕೆಗಳನ್ನು ಬನ್ನೇರುಘಟ್ಟದ ಸಸ್ಯಹಾರಿ ಕೇಂದ್ರದ ಬಳಿ ಬಿಡಲಾಗಿತ್ತು. ಈ ವೇಳೆ ಕೆಲ ಜಿಂಕೆಗಳು ಒಂದಕ್ಕೊಂದು ಕಿತ್ತಾಡಿಕೊಂಡು ಮೃತಪಟ್ಟಿವೆ. ಜತೆಗೆ ಬೆಂಗಳೂರಿನಲ್ಲಿ ಅವುಗಳು ಪ್ರತಿದಿನ ಬೇರೆ ರೀತಿಯ ಆಹಾರಗಳನ್ನು ಸೇವಿಸುತ್ತಿದ್ದವು. ಇಲ್ಲಿ ಕಾಡಿನಲ್ಲಿನ ಆಹಾರಕ್ಕೆ ಹೊಂದಿಕೊಳ್ಳದೆ ಈ ಅವಘಡ ಆಗಿರುವ ಸಾಧ್ಯತೆ ಇದೆ. ಈಗಾಗಲೇ ಮೃತಪಟ್ಟ ಜಿಂಕೆಗಳ ಸ್ಯಾಂಪಲ್ ಪಶು ವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ.
ಪಾರ್ಕ್ನಲ್ಲಿ ವೈರಸ್ನಿಂದ 7 ಚಿರತೆಗಳು ಸಾವನ್ನಪ್ಪಿರುವುದು ಗೊತ್ತಾಗಿದೆ. ಈಗ 15 ಜಿಂಕೆ ಸಾವನ್ನಪ್ಪಿವೆ. ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಬೆಂಗಳೂರಿನಿಂದ ಜಿಂಕೆಗಳನ್ನು ಬನ್ನೇರುಘಟ್ಟಕ್ಕೆ ಕಳುಹಿಸಲಾಗಿತ್ತು. ಅವುಗಳಲ್ಲಿ 15 ಜಿಂಕೆಗಳು ಮೃತಪಟ್ಟಿದ್ದು, ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ. -ಈಶ್ವರ ಖಂಡ್ರೆ, ಅರಣ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.