ಏರ್ಪೋರ್ಟ್ನಲ್ಲಿ ಶರ್ಟ್ ತೆಗೆಯಲು ಒತ್ತಾಯ: ಸುಳ್ಳು ಆರೋಪ; ಯುವತಿ ಮೇಲೆ ಕ್ರಮಕ್ಕೆ ಮುಂದಾದ ಸಿಐಎಸ್ಎ
Team Udayavani, Jan 5, 2023, 6:27 AM IST
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆಯಲ್ಲಿ ತನ್ನ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದರೆಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ಈ ಆರೋಪ ಸುಳ್ಳು ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎ) ಮೂಲಗಳು ತಿಳಿಸಿವೆ.
ಸುಳ್ಳು ಆರೋಪ ಮಾಡಿರುವ ಯುವತಿಯ ಮೇಲೆ ಕಾನೂನು ಕ್ರಮಕ್ಕೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮೇಲಧಿಕಾರಿಗಳು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಘಟನೆ ಇತ್ತೀಚೆಗೆ ನಡೆದಿದೆ ಎನ್ನಲಾಗಿದೆ. ಕೃಷಾನಿ ಗಾದ್ವಿ ಎಂಬ ಯುವತಿ ಭದ್ರತಾ ತಪಾಸಣೆಯ ವೇಳೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದಾಗಿ ಆರೋಪ ಮಾಡಿದ್ದು, ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ವಿಟರ್ ಖಾತೆಗೆ ಟ್ಯಾಗ್ ಸಹ ಮಾಡಿದ್ದರು.
ಕೃಷಾನಿ ಗಾದ್ವಿ ಟ್ವೀಟ್ನಲ್ಲಿ ಭದ್ರತಾ ತಪಾಸಣೆ ವೇಳೆ ತನಗೆ ಶರ್ಟ್ ತೆಗೆಯುವಂತೆ ಸೂಚಿಸಿದ್ದರು. ಸಿಬಂದಿಯ ವರ್ತನೆಯಿಂದ ನನಗೆ ಬಹಳ ಮುಜುಗರ ಹಾಗೂ ಅವಮಾನವಾಗಿದೆ. ಭದ್ರತಾ ತಪಾಸಣೆ ಕೇಂದ್ರದಲ್ಲಿ ನಿಂತು ಮಹಿಳೆಯರಿಗೆ ಕಿರಿಕಿರಿ ಉಂಟು ಮಾಡುವ ವರ್ತನೆಗಳನ್ನ ಎದುರಿಸುವುದು ಅವಮಾನಕರ ಸಂಗತಿಯಾಗಿದೆ. ಭದ್ರತಾ ತಪಾಸಣೆ ವೇಳೆ ಮಹಿಳೆಯರು ಏಕೆ ಶರ್ಟ್ ತೆಗೆಯಬೇಕು ಎಂದು ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.