ಕುಂದಾಣ ನಾಡ ಕಚೇರಿಗೆ ಬೇಕು ಕಾಯಕಲ್ಪ

ಪಶುಪಾಲನಾ ಇಲಾಖೆಯಲ್ಲಿ ನಾಡಕಚೇರಿ ಸಿಬ್ಬಂದಿ ಕಾರ್ಯನಿರ್ವಹಣೆ  ಸುಸಜ್ಜಿತ ಕಟ್ಟಡ, ಬಸ್‌ ಸೌಲಭ್ಯ ಇಲ್ಲ

Team Udayavani, Oct 7, 2021, 12:58 PM IST

ಕುಂದಾಣ ನಾಡ ಕಚೇರಿಗೆ ಬೇಕು ಕಾಯಕಲ್ಪ copy

ದೇವನಹಳ್ಳಿ: ತಾಲೂಕಿನ ಕುಂದಾಣ ನಾಡಕಚೇರಿ ಕಟ್ಟಡವು ಶಿಥಿಲಾವಸ್ಥೆಗೆ ತಲುಪಿದ್ದು, ನೂತನ ಕಟ್ಟಡ ಇಲ್ಲದೆ, ಪಶುಪಾಲನಾ ಇಲಾಖೆ ಕಚೇರಿಯಲ್ಲೇ ಅಧಿಕಾರಿಗಳು, ಸಿಬ್ಬಂದಿ ಕಾರ್ಯನಿರ್ವಹಿಸಬೇಕಾಗಿದೆ.

ಇಲ್ಲಿನ ಗ್ರಾಮಠಾಣೆ ಸಂಖ್ಯೆ 278/ ಸರ್ವೆ ನಂ. 300ರಲ್ಲಿ 55×55 ಅಡಿ ಜಾಗದಲ್ಲಿ ನಾಡಕಚೇರಿಯ ಕಲ್ಲಿನ ಕಟ್ಟಡವಿದೆ. ಆದರೆ, ಈ ಕಟ್ಟಡ ಸಂಪೂರ್ಣ ಶಿಥಿಲವಾಗಿದೆ. ಯಾವುದೇ ಸಮಯದಲ್ಲಿ ಬೀಳುವಂತಹ ಸ್ಥಿತಿಯಲ್ಲಿದೆ. ಕಟ್ಟಡದ ಸುತ್ತಲೂ ಗಿಡಗಂಟಿಗಳು ದಟ್ಟವಾಗಿ ಬೆಳೆದು ನಿಂತಿದ್ದು, ಸಂಜೆ ಆಗುತ್ತಿದ್ದಂತೆ ಮದ್ಯವಸನಿಗಳು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾಡಿಕೊಂಡಿದ್ದಾರೆ.

ಸರ್ಕಾರದ ಇ-ಆಡಳಿತ ಕಾರ್ಯಕ್ರಮದ ಪ್ರಕಾರ, ನಾಡಕಚೇರಿ ಪ್ರಾರಂಭಿಸಲಾಗಿದೆ. ಇದರಿಂದ ಪ್ರಮಾಣ ಪತ್ರಗಳನ್ನು ಸುಲಭವಾಗಿ ಪಡೆಯಲು ಜನರಿಗೆ ಸಹಾಯ ಮಾಡುತ್ತದೆ. ಆದರೆ, ಇಲ್ಲಿ ಸ್ವಂತ ಕಟ್ಟಡವೇ ಇಲ್ಲದೆ, ಸಾಕಷ್ಟು ಸೌಲಭ್ಯಗಳನ್ನು ಪಡೆ ಯಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ;– ಮತ್ತೆ ತೆರೆದ ಶಿರಡಿ ಸಾಯಿಬಾಬಾ ದೇಗುಲ; ಪಾಸ್ ಇದ್ದವರಿಗೆ ಮಾತ್ರ ಅವಕಾಶ

ಪಶುಪಾಲನಾ ಕಚೇರಿಯಲ್ಲಿ ಕಾರ್ಯ: ಸರ್ಕಾರದ ಸೌಲಭ್ಯಗಳು ರೈತರ ಮನೆ ಬಾಗಿಲಿಗೆ ತಲುಪಬೇಕು,ಯಾವ ರೈತರು ತಮ್ಮ ಕೆಲಸ ಕಾರ್ಯಗಳಿಗಾಗಿ ತಾಲೂಕು ಕಚೇರಿಗೆ ಅಲೆದಾಡಬಾರದು. ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಪ್ರತಿ ಸೌಲಭ್ಯ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವ ಉದ್ದೇಶದಿಂದ ಹೋಬಳಿಗೊಂದು ನಾಡಕಚೇರಿ ತೆರೆಯಲಾಗಿದೆ. ಕುಂದಾಣ ಹೋಬಳಿಯಲ್ಲಿ ನಾಡಕಚೇರಿ ಇದ್ದರೂ ಸ್ವಂತ ಕಟ್ಟಡವಿಲ್ಲದೆ ಪಶು ಇಲಾಖೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುವಂತಾಗಿದೆ.

ಸೌಲಭ್ಯ ಪಡೆಯಲು ಆಗುತ್ತಿಲ್ಲ: ಕುಂದಾಣ ಹೋಬಳಿಯಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ತೆರಿಗೆ ಸಂದಾಯವಾಗುತ್ತಿದೆ. ಸಾಕಷ್ಟು ಕಂಪನಿಗಳು, ಕಲ್ಲುಗಣಿಗಾರಿಕೆ ನಡೆಸುತ್ತಿರುವವರು, ಹಲವು ವಿಧಗಳಲ್ಲಿ ಸಿಎಸ್‌ಆರ್‌ ನಿಧಿಯಡಿ ಅನುದಾನ ಸಂಗ್ರಹವಾಗುತ್ತಿದ್ದರೂ ಸದ್ಬಳಕೆ ಮಾಡಿಕೊಂಡು ನಾಡಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಿಕ್ಕೆ ಸಾಧ್ಯವಾಗಿಲ್ಲ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಸಿಬ್ಬಂದಿ ಕೊರತೆ: ನಾಡಕಚೇರಿಯ ವ್ಯಾಪ್ತಿಯಲ್ಲಿ ಒಬ್ಬರು ಉಪತಹಶೀಲ್ದಾರ್‌, ಒಬ್ಬ ರಾಜಸ್ವ ನಿರೀಕ್ಷಕ, ನಾಲ್ಕು ಮಂದಿ ಗ್ರಾಮ ಲೆಕ್ಕಾಧಿಕಾರಿಗಳು, ಒಬ್ಬರು ಕಂಪ್ಯೂಟರ್‌ ಆಪರೇಟರ್‌ ಹೊರತುಪಡಿಸಿ, ಬೇರೆ ಸಿಬ್ಬಂದಿಯಿಲ್ಲ. 8 ಕಂದಾಯ ಪಂಚಾಯಿತಿಗಳು ಇವೆ. ಎರಡು ಪಂಚಾಯ್ತಿಗಳಿಗೆ ಒಬ್ಬೊಬ್ಬ ಗ್ರಾಮ ಲೆಕ್ಕಾಧಿಕಾರಿ ಇದ್ದಾರೆ. ಸರ್ಕಾರವೂ ಕೂಡಾ ಅನೇಕ ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳದೇ ಇರುವುದು ಸಿಬ್ಬಂದಿಯ ಕೊರತೆಗೆ ಕಾರಣವಾಗಿದೆ.

ಸಿಬ್ಬಂದಿಗೆ ಮೂಲ ಸೌಕರ್ಯದ ಕೊರತೆ: ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ, ಗ್ರಾಮೀಣ ಜನರು ನಾಡಕಚೇರಿಗೆ ಬರಲು ಬಸ್‌ ವ್ಯವಸ್ಥೆ ಇಲ್ಲ. ಮಧ್ಯಾಹ್ನದ ಊಟಕ್ಕೂ ಪರದಾಡುವಂತಹ ಸ್ಥಿತಿಯಿದೆ. ಸರಿಯಾದ ರಸ್ತೆಗಳ ಸಂಪರ್ಕವೂ ಇಲ್ಲದೆ ಸಿಬ್ಬಂದಿ ಪರದಾಡುವಂತಾಗಿದೆ. ಇಲ್ಲಿ ಕಾರ್ಯನಿರ್ವಹಿಸಲಿಕ್ಕೆ ಅಧಿಕಾರಿಗಳು ಹಿಂದೇಟು ಹಾಕುವಂತಾಗಿದೆ. ಈಗಲಾದರೂ ಅಧಿಕಾರಿಗಳು ಗಮನಹರಿಸಿ, ಸುಸಜ್ಜಿತ ನಾಡಕಚೇರಿ ಕಟ್ಟಡ ನಿರ್ಮಾಣ ಮಾಡಿಕೊಟ್ಟು, ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

“ನಾಡಕಚೇರಿ ಶಿಥಿಲಗೊಂಡಿದೆ. ಹೊಸ ಕಟ್ಟಡ ಅಗತ್ಯವಿದೆ. ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ನಾಡಕಚೇರಿಯ ಜಾಗ, ಕಾಮಗಾರಿ ವೆಚ್ಚವನ್ನು ಲಗತ್ತಿಸಿ, ನೂತನ ಕಟ್ಟಡಕ್ಕಾಗಿ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ.”

ಚೈತ್ರಾ, ಉಪ ತಹಶೀಲ್ದಾರ್‌,

ಕುಂದಾಣ ನಾಡಕಚೇರಿ.

 “ನಾಡಕಚೇರಿಗೆ ಸುತ್ತಮುತ್ತಲಿನಗ್ರಾಮಸ್ಥರು ಬರುತ್ತಾರೆ. ನಾಡಕಚೇರಿಯು ಒಂದು ಕಡೆಯಿದ್ದು, ರಾಜಸ್ವ ನಿರೀಕ್ಷಕರ ಕಚೇರಿ ಮತ್ತೂಂದುಕಡೆಯಿದೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ಮೇಲಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ.”

 ನಾಗರಾಜ್‌, ಕಾರ್ಯದರ್ಶಿ,

 ತಾಲೂಕು ರೈತ ಸಂಘ

“ಕುಂದಾಣ ನಾಡಕಚೇರಿ ನಿರ್ಮಾಣಕ್ಕೆ ಡೀಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರು, ವಯಸ್ಸಾದವರಿಗೆ, ಅಂಗವಿಕಲರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಬೇಕು. ಡೀಸಿ ಕಚೇರಿಯಲ್ಲಿಇತ್ತೀಚೆಗೆ ನಡೆದ ಪ್ರಾದೇಶಿಕ ಆಯುಕ್ತರ ಸಭೆಯಲ್ಲೂ ಗಮನಕ್ಕೆ ತರಲಾಗಿದೆ.”

ಅನಿಲ್‌ಕುಮಾರ್‌ ಅರೋಲಿಕರ್‌,

ತಹಶೀಲ್ದಾರ್‌, ದೇವನಹಳ್ಳಿ

● ಎಸ್‌.ಮಹೇಶ್‌

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.