ಪಟಾಕಿ ರಹಿತ ದೀಪಾವಳಿ ಆಚರಿಸಿ: ಚಂದ್ರಶೇಖರ್‌


Team Udayavani, Oct 26, 2019, 3:00 AM IST

pataki

ದೇವನಹಳ್ಳಿ: ಮನುಷ್ಯನ ಅಂಗಾಗಗಳು ಅತೀ ಮುಖ್ಯಾವಾದದ್ದು, ಕೆಲವರಿಗೆ ಹುಟ್ಟಿನಿಂದಲೇ ದೃಷ್ಠಿ ದೋಷ ವಿರುತ್ತದೆ. ವಿಪರ್ಯಾಸವೆಂದರೆ ಕೆಲವರು ಪಟಾಕಿ ಹಚ್ಚಿ ಕಣ್ಣು ಕಳೆದುಕೊಳ್ಳುತ್ತಾರೆ ಎಂದು ನಂದಿ ರೂರಲ್‌ ಎಜುಕೇಷನ್‌ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ವೈ.ಕೆ ಚಂದ್ರಶೇಖರ್‌ ಬೇಸರ ವ್ಯಕ್ತಪಡಿಸಿದರು.

ನಗರದ ಶಾಂತಿನಗರ ಬಡಾವಣೆಯಲ್ಲಿರುವ ಶಾಂತಿ ನಿಕೇತನ್‌ ಪಬ್ಲಿಕ್‌ ಶಾಲೆ ಆವರಣದಲ್ಲಿ ನಡೆದ ಪಟಾಕಿ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀಪಾವಳಿ ದೀಪದಿಂದ ದೀಪ ಹಚ್ಚಿ ಕತ್ತಲಿನಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬವೇ ಹೊರತು ಪಟಾಕಿ ಸಿಡಿಸುವುದಲ್ಲ.

ಶಬ್ಧ ಮಾಲಿನ್ಯ ಉಂಟು ಮಾಡುವ ಪಟಾಕಿ ಸಿಡಿತದಿಂದ ರಕ್ತದೊತ್ತಡ, ಹೃದಯ ಸಂಬಂಧಿ ರೋಗಿಗಳಿಗೆ ತೊಂದರೆ ಯಾಗುತ್ತದೆ. ದುಬಾರಿ ಪಟಾಕಿ ಖರೀದಿಸುವ ಬದಲಿಗೆ ಹೊಸ ಉಡುಗೆ ಖರೀದಿಸಿ. ಸಂಭ್ರಮ ಮತ್ತು ಪ್ರಶಾಂತತೆಯ ಹಬ್ಬಕ್ಕೆ ಪಟಾಕಿಯಿಂದ ಭಂಗ ತರುವುದು ಬೇಡ. ಪಟಾಕಿ ಹಚ್ಚದಂತೆ ನೆರೆಹೊರೆಯವರಿಗೆ ಅರಿವು ಮೂಡಿಬೇಕು ಎಂದರು.

ಶಾಲೆಯ ಆಡಳಿತಾಧಿಕಾರಿ ಚೇತನ್‌ ಯಾದವ್‌ ಮಾತನಾಡಿ, ಪಟಾಕಿಯಲ್ಲಿನ ರಾಸಾಯಿನಿಕ ವಿಷಯುಕ್ತ ವಸ್ತುಗಳು ಆಮ್ಲಜನಕದೊಂದಿಗೆ ಸೇರಿ ಮನುಷ್ಯ ಮತ್ತು ಪ್ರತಿಯೊಂದು ಜೀವ ಸಂಕುಲದ ಮೇಲೆ ಪರಿಣಾಮ ಬೀರಿ ಅನಾರೋಗ್ಯಕರ ವಾತವರಣಕ್ಕೆ ಅವಕಾಶ ಮಾಡಿಕೊಡುತ್ತದೆ.

ಅಪ್ರಾಪ್ತ ಮಕ್ಕಳು ವಯೋವೃದ್ಧರು ರೋಗಿಗಳ ಮೇಲೆ ವ್ಯಕ್ತಿರಿಕ್ತ ತ್ತ ಪರಿಣಾಮ ಬೀರುವುದು. ಯಾವುದೇ ಕಾರಣಕ್ಕೂ ಪಟಾಕಿ ಸಿಡಿಸಲು ಮಂದಾಗಬಾರದು. ಪರಿಸರಕ್ಕೆ ಮಾರಕ ವಾಗಿರುವ ಪಟಾಕಿ ಸಿಡಿಸದೆ. ನೈಸರ್ಗಿಕ ಮಣ್ಣಿನ ಹಣತೆ ಹಚ್ಚಿ ದೀಪಾವಳಿ ಆಚರಿಸಿ ಎಂದು ಸಲಹೆ ನೀಡಿದರು.

ಮುಖ್ಯ ಶಿಕ್ಷಕಿ ಕನಕ ದುರ್ಗ ಮಾತನಾಡಿ, ಮಣ್ಣಿನ ಹಣತೆ ಹಚ್ಚುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರಾದಾಯವಾಗಿದ್ದು, ಮಕ್ಕಳು ಪಟಾಕಿಗಳನ್ನು ಸಾಂಕೇತಿಕವಾಗಿ ಸಿಡಿಸಬೇಕು. ಜೊತೆಗೆ ಜಾಗೃತಿ ವಹಿಸಬೇಕು. ಹಲವು ಮಂದಿ ಪಟಾಕಿ ಹಚ್ಚುವ ವೇಳೆ ತಮ್ಮ ಕಣ್ಣು ಕಳೆದುಕೊಂಡಿರುವ ಅನೇಕ ಉದಾರಣೆಗಳು ಇವೆ ಎಂದು ಎಚ್ಚರಿಸಿದರು.

“ಪಟಾಕಿ ಬಿಡಿ ಬಡ ಮಕ್ಕಳಿಗೆ ಒಪ್ಪೋತ್ತು ಊಟ ಕೊಡಿ’ ಎಂಬ ಘೋಷಣೆಯೊಂದಿಗೆ ಹಲವಾರು ಭಿತ್ತಿಪತ್ರಗಳನ್ನು ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಪಟಾಕಿಯ ದುಷ್ಟಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಈ ವೇಳೆ ಹಿರಿಯ ಶಿಕ್ಷಕರಾದ ಕೆ.ಆರ್‌ ಗೀತಾ, ಕೆ.ಆರ್‌ ರಮೇಶ್‌, ಕೆ.ಬಿ ಪ್ರಶಾಂತ್‌, ಮತ್ತಿತರರು ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.