ಸಿಎಂ ಬಹುಮತ ಸಾಬೀತು ಪಡಿಸಲಿದ್ದಾರೆ


Team Udayavani, Jul 15, 2019, 3:00 AM IST

cm-bahuma

ದೇವನಹಳ್ಳಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಸುಭದ್ರವಾಗಿಯೇ ಇದೆ. ಐದು ವರ್ಷ ಪೂರ್ಣಗೊಳಿಸುತ್ತದೆ. ಬಹುಮತ ಸಾಬೀತು ಪಡಿಸುವಲ್ಲಿ ಕುಮಾರಸ್ವಾಮಿ ಯಶಸ್ಸು ಸಾಧಿಸುತ್ತಾರೆ ಎಂದು ಜೆಡಿಎಸ್‌ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕೋಡಗುರ್ಕಿ ಸಮೀಪದಲ್ಲಿರುವ ಪ್ರಸ್ಟೀಜ್‌ ಗಾಲ್ಫ್ಶೈರ್‌ ರೆಸಾರ್ಟ್‌ಗೆ ತೆರಳುವ ವೇಳೆ ಹಲವು ಶಾಸಕರು ಮಾಧ್ಯಮದವರೊಂದಿಗೆ ಮಾತನಾಡಿ, ವಿಷಯ ಸ್ಪಷ್ಟಪಡಿಸಿದರು.

ಅತೃತ್ಪರ ಮನವೊಲಿಕೆ ವಿಶ್ವಾಸವಿದೆ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್‌ ಮಾತನಾಡಿ, ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆಯುತ್ತಿದೆ. ಎರಡೂ ಪಕ್ಷಗಳ ನಾಯಕರು ಅತೃಪ್ತರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಉಸ್ತುವಾರಿ ಮುರಳಿಧರ್‌, ಈಶ್ವರಪ್ಪ ಭೇಟಿ ಆಕಸ್ಮಿಕವಾದುದು. ಇದಕ್ಕೆ ರಾಜಕೀಯ ಲೇಪನ ಬಳಿಯುವುದು ಸರಿಯಲ್ಲ.

ಅಲ್ಲದೆ ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜತೆಗೆ ಕೆಲ ಶಾಸಕರು ಇನ್ನೂ ನಾವು ಜನತಾದಳದಲ್ಲಿಯೇ ಇದ್ದೇವೆ. ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗುವ ಉದ್ದೇಶದಿಂದಲೇ ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಜತೆಗೆ ಸೋಮವಾರ ಅಧಿವೇಶನವಿದ್ದು, ಎಲ್ಲರೂ ಹಾಜರಾಗುತ್ತೇವೆ ಎಂದು ಹೇಳಿದರು.

ಸರ್ಕಾರ 5 ವರ್ಷ ಪೂರೈಸುತ್ತದೆ: ವಿಧಾನ ಪರಿಷತ್‌ ಸದಸ್ಯ ಶರವಣ ಮಾತನಾಡಿ, ಸರ್ಕಾರ ಸುಭದ್ರವಾಗಿಯೇ ಇದೆ. ಮೈತ್ರಿ ಸರ್ಕಾರ, 5 ವರ್ಷ ಪೂರ್ಣಗೊಳಿಸುತ್ತದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಹುಮತ ಸಾಬೀತು ಮಾಡಲಿದ್ದಾರೆ. ಎಲ್ಲವೂ ಶುಭ ಸೂಚಕವಾಗಿಯೇ ಇದೆ. ಕುಮಾರಸ್ವಾಮಿ ಬಹುಮತ ಸಾಬೀತಿನಲ್ಲಿ ಜಯಶೀಲರಾಗುತ್ತಾರೆ.

ಭಗವಂತನ ಆಶೀರ್ವಾದದಿಂದ ಈ ಸರ್ಕಾರ ರಚನೆ ಆಗಿದೆ. ಈ ಸರ್ಕಾರ ಉಳಿಯುತ್ತೆ, ಜನರಿಗೆ ಉತ್ತಮ ಕೆಲಸ ಮಾಡಿಕೊಡುತ್ತದೆ. ಸುಧಾಕರ್‌ ಸೇರಿದಂತೆ ಯಾರ ನಡೆ ಬಗ್ಗೆ ನಾನು ಈಗ ಮಾತನಾಡೋದಿಲ್ಲ, ನಿಮಗೆಲ್ಲ ಶುಭ ಸೂಚನೆ ಸಿಗುತ್ತದೆ ಎಂದು ಹೇಳಿದರು.

ಶಾಸಕರ ಸಮನ್ವಯದ ಕೊರತೆ: ಮಳವಳ್ಳಿ ಶಾಸಕ ಅನ್ನದಾನಿ ಮಾತನಾಡಿ, ಆಯಾ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಸಹಜ. ಹಿಂದೆ ಸೋನಿಯಾ ಗಾಂಧಿ, ಗುಲಾಂ ನಬೀ ಅಜಾದ್‌ ನಿರ್ಧರಿಸಿದಂತೆ ಎಚ್‌.ಡಿ. ಕುಮಾರಸ್ವಾಮಿ 5 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಎರಡು ಪಕ್ಷಗಳು ಸೇರಿ ಮೈತ್ರಿ ಸರ್ಕಾರ ನಡೆಸುವಾಗ ಭಿನ್ನಮತ ಸರ್ವೇ ಸಾಮಾನ್ಯ.

ಎಲ್ಲವೂ ಬಗೆಹರಿಸುವ ಸಾಮಾರ್ಥಯ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗಿದೆ. ಅವರೊಂದಿಗೆ ನಾವಿದ್ದೇವೆ. ಸರ್ಕಾರದ ಸಚಿವರ ಖಾತೆಗಳಲ್ಲಿ ಎಚ್‌.ಡಿ.ರೇವಣ್ಣ ಹಸ್ತಕ್ಷೇಪ ಆರೋಪ, ಕೆಎಎಸ್‌ ಮತ್ತು ಐಎಎಸ್‌ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಡುವಿನ ಸಮನ್ವಯ ಕೊರತೆ ಇದೆ.

ಭಿನ್ನಮತೀಯರ ಎಲ್ಲ ಬೇಡಿಕೆಗಳನ್ನು ಆಲಿಸಿ, ಹಿರಿಯ ನಾಯಕರು ಕ್ರಮಕೈಗೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಶ್ರವಣಬೆಳಗೋಳ ಶಾಸಕ ಬಾಲಕೃಷ್ಣ ಮಾತನಾಡಿ, ಮೋಜು ಮಸ್ತಿಗಾಗಿ ಶಾಸಕರು ರೆಸಾರ್ಟ್‌ ವಾಸ್ತವ್ಯ ಮಾಡ್ತಿಲ್ಲ. 14 ತಿಂಗಳು ಯಶಸ್ವಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ ಆಡಳಿತ ನಡೆಸಿದೆ.

5 ವರ್ಷ ಆಡಳಿತ ನಡೆಸುವುದು ಖಚಿತ. ಕೆಲ ಶಾಸಕರು ಸ್ವಾರ್ಥಕ್ಕಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್‌ ಸೇರಿ, ಎಂಟಿಬಿ ಮನವೊಲಿಸಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸಮತಯಾಚನೆ ದಿನಾಂಕ ನಿಗದಿ ಮಾಡುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಸಾರ್ವಜನಿಕರ ಹಣ ಬಳಸುತ್ತಿಲ್ಲ: ರೆಸಾರ್ಟ್‌ನ ಎಲ್ಲ ಖರ್ಚನ್ನು ಸ್ವಂತ ಹಣದಲ್ಲಿ ನಿಭಾಯಸುತ್ತಿದ್ದೇವೆ. ನಮಗೆ ವ್ಯವಸಾಯ, ಉದ್ದಿಮೆ ಸೇರಿದಂತೆ ಆದಾಯವಿದೆ. ಅದರಲ್ಲೇ ಎಲ್ಲ ಖರ್ಚುಗಳನ್ನು ಭರಿಸುತ್ತಿದ್ದೇವೆ. ಆ ಸಾಮರ್ಥ್ಯ ನಮಗಿದೆ. ರೆಸಾರ್ಟ್‌ನ ಒಂದು ವಿಲ್ಲಾಗೆ 30 ಸಾವಿರ ಇದ್ದು, 5 ಮಂದಿ ವಾಸ್ತವ್ಯ ಮಾಡಬಹುದು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಣ ಬಳಸುತ್ತಿಲ್ಲ ಎಂದು ಶಾಸಕರು ತಿಳಿಸಿದರು. ಆದರೆ ಇತ್ತ ಜನರ ಕುಂದುಕೊರತೆ ಆಲಿಸದ ಶಾಸಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.