ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು


Team Udayavani, Mar 20, 2019, 7:23 AM IST

parikshege.jpg

ತುಮಕೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆಯಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮಂಗಳವಾರ ವಿದ್ಯಾರ್ಥಿಗಳ ಪ್ರವೇಶ ಪತ್ರ ನಂಬರ್‌ಗಳನ್ನು ಡೆಸ್ಕ್ಗಳ ಮೇಲೆ ಬರೆಯಲಾಯಿತು. ಈ ಬಾರಿ ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ಮಾ.21ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.

141 ಪರೀಕ್ಷಾ ಕೇಂದ್ರ: ತುಮಕೂರು 83, ಮಧುಗಿರಿ 58 ಸೇರಿ ಜಿಲ್ಲೆಯ 141 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಮಾ.21ರಿಂದ ಏ.4ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತುಮಕೂರು ಶೈಕ್ಷಣಿಕ ಜಿಲ್ಲೆಯಿಂದ 13156 ಬಾಲಕರು, 10595 ಬಾಲಕಿಯರು ಸೇರಿ 23751 ವಿದ್ಯಾರ್ಥಿಗಳು, ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ 12445 ಬಾಲಕರು-6572, ಬಾಲಕಿಯರು-5873 ಸೇರಿ ಒಟ್ಟು 36,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯ 141 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 62 ಕ್ಲಸ್ಟರ್‌ ಸಹಿತ, 76 ಕ್ಲಸ್ಟರ್‌ ರಹಿತ ಹಾಗೂ 3 ಖಾಸಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತುಮಕೂರು ನಗರದ ವಿದ್ಯಾನಿಕೇತನ ಶಾಲೆ, ಎಸ್‌ಐಟಿ ವಾಸವಿ ಪ್ರೌಢಶಾಲೆ ಹಾಗೂ ಮಧುಗಿರಿ ಜ್ಯೂಪಿಟರ್‌ ಪಬ್ಲಿಕ್‌ ಶಾಲೆ ಸೇರಿ 3 ಖಾಸಗಿ ಕೇಂದ್ರಗಳಲ್ಲಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಮೂಲಭೂತ ವ್ಯವಸ್ಥೆ: ಪರೀಕ್ಷಾ ಅಕ್ರಮಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ 141 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುವಾಗುವಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಮತ್ತಿತರ ಮೂಲಭೂತ ಸೌಕರ್ಯ ಒದಗಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಿಗೂ ತಲಾ ಒಬ್ಬ ಆರೋಗ್ಯ ಸಹಾಯಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕು ಹಂತಗಳಲ್ಲಿ ಜಾಗೃತ ದಳಗಳನ್ನು ರಚಿಸಲಾಗಿದೆ.  ಅಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಸ್ಥಾನಿಕ ಜಾಗೃತ ದಳಗಳನ್ನು ನಿಯೋಜಿಸಲಾಗಿದೆ ಎಂದು ಡಿಡಿಪಿಐ ಎಂ.ಆರ್‌.ಕಾಮಾಕ್ಷಿ ತಿಳಿಸಿದ್ದಾರೆ.  

ಮೊಬೈಲ್‌ ಬಳಕೆಗೆ ಅವಕಾಶವಿಲ್ಲ:  ಪರೀಕ್ಷಾ ಅವಧಿಯಲ್ಲದೆ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ಪ್ರಶ್ನೆ ಪತ್ರಿಕೆ ಓದಿ ಅಂಕಗಳನ್ನು ಆಧರಿಸಿ ಉತ್ತರ ಬರೆಯಬೇಕು. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಯಾರೊಬ್ಬರಿಗೂ ಮೊಬೈಲ್‌ ಬಳಕೆಗೆ ಅವಕಾಶವಿಲ್ಲ. ಸ್ಮಾರ್ಟ್‌ ವಾಚ್‌ ಅಥವಾ ಎಲೆಕ್ಟ್ರಾನಿಕ್‌ ಕೈಗಡಿಯಾರವನ್ನು  ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ ಎಂದು ಹೇಳಿದರು.

ಏ.10ರಿಂದ ಮೌಲ್ಯಮಾಪನಾ ಕಾರ್ಯ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮುಗಿದ ನಂತರ ನಗರದ 6 ಕೇಂದ್ರಗಳಲ್ಲಿ ಏ.10 ರಿಂದ ಮೌಲ್ಯಮಾಪನ ನಡೆಯಲಿದ್ದು ಸುಮಾರು 2500 ಶಿಕ್ಷಕರನ್ನು ನಿಯೋಜಿಸಲಾಗಿದೆ. ಮೌಲ್ಯ ಮಾಪನ ಕೇಂದ್ರದಲ್ಲಿ ಈ ಬಾರಿ ಆನ್‌ಲೈನ್‌ ಪೋರ್ಟಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ 15 ಲ್ಯಾಪ್‌ಟಾಪ್‌ ಅಳವಡಿಸಲಾಗುವುದು. ಮೌಲ್ಯ ಮಾಪನದ ಪ್ರತಿ ದಿನದ ಮಾಹಿತಿಯನ್ನು ಆನ್‌ಲೈನ್‌ ಪೋರ್ಟಿಂಗ್‌ ಮೂಲಕ ಮಂಡಳಿಗೆ ನೀಡಲಾಗುವುದು ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ: ಜಿಲ್ಲೆಯಲ್ಲಿ ಮಾ.21ರಿಂದ ಏ.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪ್ರಥಮ ಭಾಷೆ ಕನ್ನಡ, ಉರ್ದು, ಇಂಗ್ಲಿಷ್‌, ಸಂಸ್ಕೃತ ವಿಷಯಗಳು, ಮಾ.23ರಂದು ಅರ್ಥಶಾಸ್ತ್ರ, ಮಾ.25ರಂದು ಗಣಿತ ಹಾಗೂ ಸಮಾಜಶಾಸ್ತ್ರ, ಮಾ.27ರಂದು ದ್ವಿತೀಯ ಭಾಷೆ ಕನ್ನಡ, ಇಂಗ್ಲಿಷ್‌, ಮಾ.29ರಂದು ಸಮಾಜ ವಿಜ್ಞಾನ, ಏ.2ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ಏ.4ರಂದು ತೃತೀಯ ಭಾಷೆ ಹಿಂದಿ,

ಕನ್ನಡ, ಸಂಸ್ಕೃತ ಪರೀಕ್ಷೆ ಹಾಗೂ ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ವಿಷಯದಲ್ಲಿ ಎನ್‌ಎಸ್‌ಕ್ಯೂಎಫ್, ನ್ಯಾಷನಲ್‌ ಸ್ಕಿಲ್‌ ಕ್ವಾಲಿಫಿಕೇಷನ್‌ ಫ್ರೆàಮ್‌ ವರ್ಕ್‌ ಪರೀಕ್ಷೆಗಳು ನಡೆಯಲಿವೆ. ತೃತೀಯ ಭಾಷೆ ಬದಲಿಗೆ ಎನ್‌ಎಸ್‌ಕ್ಯೂಎಫ್ ಪರೀಕ್ಷೆ ಬರೆಯುವವರಿಗಾಗಿ ತುಮಕೂರು ನಗರದ ಎಂಪ್ರಸ್‌ ಹಾಗೂ ಸರ್ಕಾರಿ ಜ್ಯೂನಿಯರ್‌ ಕಾಲೇಜು, ತಿಪಟೂರು ತಾಲೂಕಿನ ನೊಣವಿನಕೆರೆ ಸರ್ಕಾರಿ ಜ್ಯೂನಿಯರ್‌ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ಎಂ.ಆರ್‌.ಕಾಮಾಕ್ಷಿ ತಿಳಿಸಿದ್ದಾರೆ.

ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಿಷೇಧಾಜ್ಞೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಿಷೇಧಾಜ್ಞೆ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಜಾರಿಯಲ್ಲಿರುತ್ತದೆ. ಈ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್‌ ಹಾಗೂ ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು.

ನಿಷೇಧಿತ ಪ್ರದೇಶದೊಳಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳು ಕಂಡು ಬಂದಲ್ಲಿ ದಂಡ ಪ್ರಕ್ರಿಯೆ ಸಂಹಿತೆ 1963 ಸೆಕ್ಷನ್‌ 107, 110 ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ.

ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ. ನಿರಂತರ ವಿದ್ಯುತ್‌ ಕಲ್ಪಿಸಲು ಬೆಸ್ಕಾಂ ಸಂಸ್ಥೆಗೆ ಮನವಿ ಮಾಡಲಾಗಿದೆ. ವಿಕಲಚೇತನ ಮಕ್ಕಳಿಗೆ ನೆಲಹಂತದಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. 
-ಕಾಮಾಕ್ಷಿ, ಡಿಡಿಪಿಐ

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.