
ಮನೆಯಿಂದ ಸಿಎಂ ಹೊರಗೆ ಕಾಲಿಡದಂತೆ ಮಾಡುವೆ!
Team Udayavani, Jan 15, 2018, 6:50 AM IST

ಸರ್ಜಾಪುರ: “ಬಿಜೆಪಿ ಹಿರಿಯ ಮುಖಂಡರು ನನಗೆ ಅವಕಾಶ ನೀಡಿದರೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದೇ ತರುತ್ತೇನೆ’ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ದೊಮ್ಮಸಂದ್ರದಲ್ಲಿ ಬಿಜೆಪಿ ರೈತ ಮೋರ್ಚಾ ಭಾನುವಾರ ಏರ್ಪಡಿಸಿದ್ದ ಸಂಕ್ರಾಂತಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಯಿಂದ ಹೊರಗೆ ಹೆಜ್ಜೆ ಕೂಡ ಇಡದಂತೆ ಮಾಡುತ್ತೇನೆ’ ಎಂದು ಸವಾಲು ಹಾಕಿದರು.
“ನಾನು 43 ತಿಂಗಳ ಕಾಲ ಜೈಲುವಾಸ ಅನುಭವಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ನ ಇತರ ಪ್ರಮುಖ, ದುಷ್ಟ ಮುಖಂಡರೇ ಕಾರಣ. ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನಾನು ಸರ್ಕಾರದ ಒಂದು ಲಕ್ಷ ಕೋಟಿ ರೂ. ಹಣ ಲೂಟಿ ಮಾಡಿದ್ದೇನೆಂದು ಆರೋಪಿಸಿ, ನನ್ನ ಮೇಲೆ ಇಲ್ಲಸಲ್ಲದ 116 ಮೊಕದ್ದಮೆಗಳನ್ನು ದಾಖಲಿಸಿ ಜೈಲಿಗೆ ಕಳಿಸಿದರು.
ಆದರೆ, ನನ್ನಿಂದ ಒಂದು ರೂಪಾಯಿ ಕೂಡ ವಸೂಲಿ ಮಾಡಲು ಸಾಧ್ಯವಾಗಲಿಲ್ಲ. ನನ್ನನ್ನು ಪತ್ನಿ ಮತ್ತು ಮಕ್ಕಳಿಂದ ದೂರ ಮಾಡಿದ ಕಾಂಗ್ರೆಸ್ಸಿಗರಿಗೆ ತಕ್ಕ ಶಾಸ್ತಿ ಆಗಲಿದೆ’ ಎಂದು ಹಿಡಿ ಶಾಪ ಹಾಕಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.