ರಸ್ತೆ ತುಂಬಾ ಧೂಳು, ಕೇಳ್ಳೋರಿಲ್ಲ ವಾಹನ ಸವಾರರ ಗೋಳು 


Team Udayavani, May 25, 2022, 2:31 PM IST

Untitled-1

ದೇವನಹಳ್ಳಿ: ತಾಲೂಕಿನ ಚಪ್ಪರಕಲ್ಲು ಸರ್ಕಲ್‌ ನಿಂದ ತಿಂಡ್ಲು ಮಾರ್ಗವಾಗಿ ನಡೆಯುತ್ತಿರುವರಸ್ತೆ ಅಗಲೀಕರಣ ಮತ್ತು ಡಾಂಬರೀಕರಣಕಾಮಗಾರಿ ಕುಂಠಿತ ಆಗಿದ್ದು, ರಸ್ತೆಯುದ್ದಕ್ಕೂ ಜೆಲ್ಲಿ ಪೌಡರ್‌ ಹಾಕಿರುವುದರಿಂದ ಭಾರೀವಾಹನಗಳು ಹೋಗುವುದರಿಂದಧೂಳಿನಲ್ಲಿಯೇ ದ್ವಿಚಕ್ರ ವಾಹನ ಸವಾರರು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೇಳಿ, ಕೇಳಿ ರಸ್ತೆಯು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಯೇ ಹಾದು ಹೋಗುವ ರಸ್ತೆಯಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ದಿನನಿತ್ಯ ಸಂಚರಿಸುತ್ತಲೇ ಇರುತ್ತವೆ. ಅಕ್ಕಪಕ್ಕದಲ್ಲಿ ತೋಟಗಳು, ಮನೆಗಳುಇರುವುದರಿಂದ ಧೂಳು ಮನೆಗಳಿಗೆ ಮತ್ತುತೋಟಗಳಿಗೆ ಆವರಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಮಧ್ಯಾಹ್ನದ ವೇಳೆಯಲ್ಲಂತೂ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಸಾಧ್ಯವಾಗುತ್ತದೆ.ಡಾಂಬರೀಕರಣ ಆಗದಿರುವುದರಿಂದ ಜೆಲ್ಲಿಪೌಡರ್‌ ಹಾಗೆಯೇ ಉಳಿಸಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಬಹುಬೇಗನೆಮುಗಿಸುವಂತೆ ಆಗಬೇಕು ಎಂದು ಸ್ಥಳೀಯಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮಸ್ಥರ ಒತ್ತಾಯ: ಧೂಳಿನಿಂದ ರೋಗರುಜಿನಗಳಿಗೆ ತುತ್ತಾಗಬೇಕಾಗುತ್ತದೆ. ಲಾರಿಗಳು ಹೋಗುವುದರಿಂದ ಹಿಂಬದಿಯಿಂದ ಬರುವಕಾರು, ದ್ವಿಚಕ್ರ ವಾಹನಗಳ ಸವಾರರು ಧೂಳಿನಲ್ಲಿಯೇ ಸಂಚರಿಸಬೇಕು. ಆಯತಪ್ಪಿ ಏನಾದರೂ ಬಿದ್ದರೆ ಆಸ್ಪತ್ರೆ ಸೇರುವುದು ಖಚಿತ.ಲೋಕೋಪಯೋಗಿ ಇಲಾಖೆ ಅಧಿಕಾರಿಗಳುಕೂಡಲೇ ಈ ರಸ್ತೆಗಳಿಗೆ ಡಾಂಬರೀಕರಣ ಮಾಡಿಸುಗಮ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಡಾಂಬರೀಕರಣ ಆಗಿಲ್ಲ: ರಸ್ತೆ ತುಂಬಾ ಧೂಳು ತುಂಬಿಕೊಂಡಿದ್ದು, ವಾಹನ ಸವಾರರು ಧೂಳಿನಸ್ನಾನ ಮಾಡಿಕೊಂಡು ಸಂಚರಿಸುವಂತೆ ಆಗಿದೆ.ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣಕಾಮಗಾರಿಗೆ ಉದ್ಘಾಟನೆಯಾಗಿ ವರ್ಷ ಕಳೆದರೂ, ಚಪ್ಪರಕಲ್ಲು ಸರ್ಕಲ್‌ನಿಂದ ಕುಂದಾಣಸರ್ಕಲ್‌ವರೆಗೆ ಮಾತ್ರ ಡಾಂಬರೀಕರಣವಾಗಿದ್ದು,ಅಲ್ಲಿಂದ ಸುಮಾರು 5-6 ಕಿ.ಮೀ. ರಸ್ತೆ ಡಾಂಬರು ಕಿತ್ತು, ಜೆಲ್ಲಿ ಕಲ್ಲಿನ ದೂಳು ರಸ್ತೆಯನ್ನಾಗಿಸಲಾಗಿದೆ. ಬೇಸಿಗೆಯಾಗಿರುವುದರಿಂದ ಬೃಹತ್‌ ವಾಹನಗ‌ಳು ಈ ರಸ್ತೆಯಲ್ಲಿ ಸಂಚರಿಸಿದರೆ, ಮುಂಬರುವ ಯಾವುದೇ ವಾಹನ ಕಾಣಿಸದೆ, ಧೂಳಿನಿಂದ ರಸ್ತೆ ಸಂಪೂರ್ಣವಾಗಿ ಆವರಿಸಿರುವುದು ಕಂಡುಬರುತ್ತದೆ.

ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲಿದ್ದರೂ, ರಸ್ತೆಡಾಂಬರೀಕರಣ ಆಗದೇ ಧೂಳಿನಲ್ಲೇಜನ ಸಂಚರಿಸುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಅಧಿಕಾರಿಗಳು ಕೂಡಲೇಗಮನಹರಿಸಿ ಜನರಿಗೆ ಧೂಳಿನಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸಬೇಕು. – ನಾರಾಯಣಸ್ವಾಮಿ, ಗ್ರಾಮಸ್ಥ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.