ಸರ್ವರಿಗೂ ಸಿಗಬೇಕಿದೆ ಶುದ್ಧ ನೀರು


Team Udayavani, Oct 17, 2019, 3:00 AM IST

sarvarigu

ವಿಜಯಪುರ: ಸರ್ವರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರಯಲಾಗುತ್ತಿದೆ ಎಂದು ಜಿಲ್ಲಾ ಎಸ್‌ಕೆಡಿಆರ್‌ಪಿ ನಿರ್ದೇಶಕ ವಸಂತ ಸಾಲಿಯಾನಾ ತಿಳಿಸಿದರು.

ಪಟ್ಟಣದ ದುರ್ಗಾತಾಯಿ ದೇವಾಲಯ ವಾರ್ಡಿನಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪುರಸಭಾ ಆಡಳಿತದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ವಿವಿಧೆಡೆ ಸುಮಾರು 200 ಕಡೆಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಸ್ಥಳೀಯ ಗ್ರಾಪಂ, ಪುರಸಭೆ, ನಗರ ಪಾಲಿಕೆಗಳು ಜಂಟಿಯಾಗಿ ಶುದ್ಧನೀರಿನ ಘಟಕಗಳನ್ನು ತೆರದು ನಿರ್ವಹಣೆ ಮಾಡಲಾಗುತ್ತಿದೆ.

ಘಟಕದಿಂದ ಪ್ರತಿಯೊಬ್ಬರಿಗೆ 20 ಲೀ. ನೀರನ್ನು ಕಡಿಮೆ ದರದಲ್ಲಿ ವಿತರಿಸಲಾಗುತ್ತಿದೆ. ಘಟಕದ ನಿರ್ವಹಣೆಗೆ ಎಸ್‌ಕೆಡಿಆರ್‌ಪಿಯು ಪ್ರೇರಕರನ್ನು ನೇಮಿಸಿದ್ದು, ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಿರ್ವಹಣಾ ವೆಚ್ಚವನ್ನು ಭರಿಸಲಾಗುತ್ತಿದೆ. ತಾಲೂಕಿನಲ್ಲಿ 9 ಘಟಕಗಳನ್ನು ತೆರೆಯಲಾಗಿದ್ದು, ವಿಜಯಪುರ ಪಟ್ಟಣದಲ್ಲಿ 3, ದೇವನಹಳ್ಳಿಯಲ್ಲಿ 6 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಯೋಜನೆ ಯಶಸ್ವಿಯಾಗಿದೆ ಎಂದರು.

ಪುರಸಭಾ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್‌ಕುಮಾರ್‌ ಮಾತನಾಡಿ, ಬಯಲು ಸೀಮೆ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಸುಮಾರು 2 ಸಾವಿರ ಅಡಿಗಳಷ್ಟು ಕೊಳವೆ ಬಾವಿ ಕೊರೆದರೂ ನೀರಿನ ಲಭ್ಯತೆ ಇಲ್ಲವಾಗಿದೆ. ಅಷ್ಟು ಆಳದಿಂದ ನೀರು ಮೇಲೆತ್ತಿದರೂ ಕುಡಿಯಲು ಯೋಗ್ಯವಾಗಿರದೇ ಲವಣಾಂಶಯುತವಾಗಿದೆ. ಎಲ್ಲರೂ ಶುದ್ಧ ಕುಡಿಯುವ ನೀರನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದರು.

ಪುರಸಭಾ ಮಾಜಿ ಸದಸ್ಯ ಎಸ್‌.ಭಾಸ್ಕರ್‌, ಮುಬಾರಕ್‌, ವಿ.ಎಂ.ನಾಗರಾಜು, ಎಚ್‌.ಎಂ.ಕೃಷ್ಣಪ್ಪ, ತಾಲೂಕು ಎಸ್‌ಕೆಡಿಆರ್‌ಪಿ ಸಂಯೋಜಕಿ ಅಕ್ಷತಾರೈ, ಮನೋಹರಮ್ಮ, ಪ್ರಕಾಶ್‌, ಭುಜೇಂದ್ರಪ್ಪ, ಮಹೇಶ್‌, ಮುನಿರಾಜು, ಬೈರೇಗೌಡ, ಮತ್ತಿತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.