ಕೋವಿಡ್ ಭೀತಿಗೆ ಗ್ರಾಮ ತೊರೆದ ರೈತರು

ಮನೆ ಅಕ್ಕಪಕ್ಕ ಕಂಟೈನ್ಮೆಂಟ್‌ ಘೋಷಿಸಿದರೆ ಕೃಷಿ ಕೆಲಸಕ್ಕೆ ಹೊಡೆತ; ಜಾನುವಾರುಗಳಿಗೂ ಸಂಕಷ್ಟ

Team Udayavani, Aug 7, 2020, 9:56 AM IST

ಕೋವಿಡ್ ಭೀತಿಗೆ ಗ್ರಾಮ ತೊರೆದ ರೈತರು

ದೊಡ್ಡಬಳ್ಳಾಪುರ: ಗ್ರಾಮಾಂತರ ಪ್ರದೇಶಕ್ಕೂ ಕೋವಿಡ್‌-19 ಹರಡುತ್ತಿರುವುದರಿಂದ ರೈತರ ಕೃಷಿ ಚಟುವಟಿಕೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಗ್ರಾಮಗಳನ್ನು ತೊರೆಯುತ್ತಿರುವ ರೈತರು, ಹೊಲಗಳಲ್ಲೇ ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸ ಮಾಡಲು ಮುಂದಾಗಿದ್ದಾರೆ.

ತಾಲೂಕಿನ ಉಜ್ಜನಿ ಗ್ರಾಮ ತಾಲೂಕು ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿದೆ. ಈ ಗ್ರಾಮದಲ್ಲಿ ಸುಮಾರು 100 ಕುಟುಂಬಗಳಿವೆ. ಇದರಲ್ಲಿ 40ಕ್ಕೂ ಹೆಚ್ಚಿನ ಕುಟುಂಬಗಳು, ಗ್ರಾಮವನ್ನು ತೊರೆದು ತಮ್ಮ ಹೊಲ, ತೋಟಗಳಲ್ಲೇ ತೆಂಗಿನ ಗರಿಗಳಿಂದ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡಿವೆ. ಅಲ್ಲದೇ, ಅಗತ್ಯಕ್ಕೆ ತಕ್ಕಷ್ಟು ಅಡುಗೆ ಪರಿಕರ, ದಿನಸಿ, ಬಟ್ಟೆಗಳನ್ನು ಮಾತ್ರ ಗ್ರಾಮದಲ್ಲಿನ ಮನೆಗಳಿಂದ ತೆಗೆದುಕೊಂಡು ಹೋಗಿದ್ದಾರೆ.

ಕೋವಿಡ್‌-19 ದೃಢಪಟ್ಟ ಮನೆಗಳ ಸುತ್ತ ಕಂಟೈನ್ಮೆಂಟ್‌ ಪ್ರದೇಶವನ್ನಾಗಿ ಮಾಡಲಾಗುತ್ತಿದೆ. ಇದರಿಂದ ಮನೆಯವರು ಎಲ್ಲೂ ಹೋಗಲು, ಯಾವುದೇ ರೀತಿಯ ದಿನ ನಿತ್ಯದ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಗ್ರಾಮಗಳಲ್ಲಿನ ರೈತರು ಮನೆಯಲ್ಲಿನ ದನ, ಕರು, ಮೇಕೆಗಳಿಗೆ ಹೊಲಕ್ಕೆ ಹೋಗಿ ಮೇವುತಂದು ಹಾಕುವುದು ಕಷ್ಟವಾಗುತ್ತದೆ. ಈಗ, ಮುಂಗಾರು ಆರಂಭವಾಗಿದ್ದು ರಾಗಿ, ಜೋಳ ಬಿತ್ತನೆ ಮಾಡಲಾಗಿದೆ. ಗ್ರಾಮದಲ್ಲಿ ಯಾರಿಗಾದರೂ ಕೋವಿಡ್‌-19 ದೃಢಪಟ್ಟು, ಕಂಟೈನ್ಮೆಂಟ್‌ ವಲಯ ಘೋಷಿಸಿದರೆ ಕೃಷಿ ಕೆಲಸಗಳೇ ನಿಂತು ಹೋಗುತ್ತದೆ. ಹೀಗಾಗಿ ಕೋವಿಡ್ ಹಾವಳಿ ತಗ್ಗಿದ ನಂತರ ಗ್ರಾಮದಲ್ಲಿನ ಮನೆಗೆಮರುಳು ತ್ತೇವೆ ಎಂದು ಉಜ್ಜನಿ ಗ್ರಾಮದ ರೈತರಾದ ರಾಮಣ್ಣ, ಮುನಿ  ರಾಜಪ್ಪ ತಿಳಿಸಿದ್ದಾರೆ.

ಹೊಲದಲ್ಲಿದ್ದರೆ ಕೃಷಿ ಚಟುವಟಿಕೆಗೆ ಸಹಕಾರಿ :  ಈ ಹಿಂದೆ ಗ್ರಾಮದಲ್ಲಿ ಒಬ್ಬರಲ್ಲಿ ಕೊರೊನಾ ಸೋಂಕು ಇರುವುದು ತಿಳಿಯುತ್ತಿದ್ದಂತೆ ಇಡೀ ಬೀದಿಯನ್ನು ಬಂದ್‌ ಮಾಡಲಾಗಿತ್ತು. ಆ ಸಮಯದಲ್ಲಿ ಇನ್ನು ಮಳೆಗಾಲ ಆರಂಭವಾಗಿರಲಿಲ್ಲ. ಈಗ ಮಳೆಯಾಗುತ್ತಿದ್ದು ರಾಗಿ, ಜೋಳ ಬಿತ್ತನೆ ಮಾಡಲಾಗಿದೆ. ಕೊರೊನಾ ಹಾವಳಿ ಕಡಿಮೆಯಾಗುವವರೆಗೂ ಗ್ರಾಮದಲ್ಲಿನ ಮನೆಯಲ್ಲಿ ಇದ್ದು ಬಂಧಿಯಾಗುವುದಕ್ಕಿಂತಲೂ ಹೊಲದಲ್ಲಿಯೇ ತಾತ್ಕಾಲಿಕವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದೇವೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ ಎಂದು ಉಜ್ಜನಿ ಗ್ರಾಮದ ರೈತ ರಾಮಣ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.