ಮಾಕಳಿ ಬೆಟ್ಟದ ತಪ್ಪಲಿಗೆ ಬೆಂಕಿ; ಕಿಡಿಗೇಡಿಗಳ ಕೃತ್ಯವಾ?


Team Udayavani, Feb 14, 2023, 12:42 PM IST

tdy-10

ದೊಡ್ಡಬಳ್ಳಾಪುರ: ಬೇಸಿಗೆ ಕಾಲ ಬಂತೆಂದರೆ ಬೆಂಕಿ ಬಿದ್ದು ಬೆಟ್ಟ-ಗುಡ್ಡಗಳು ಸುಟ್ಟುಹೋಗುವುದು ಸಾಮಾನ್ಯವಾದರೂ, ಬೆಟ್ಟದ ತಪ್ಪಲಿನಲ್ಲಿ ಕೃಷಿ ಭೂಮಿ ಹಸನು ಮಾಡಿಕೊಳ್ಳಲು ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚುವ ಪರಿಪಾಠ ಬೆಳೆಸಿಕೊಂಡಿದ್ದಾರೆ ಎಂದು ಜಿಲ್ಲೆಯ ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಾಕಳಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಇನ್ನು ಇಲ್ಲಿನ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸುವ ಪ್ರಮಾಣ ತೀರಾ ಕಡಿಮೆ. ಆದರೂ, ಬೇಸಿಗೆಯಲ್ಲಿ ತಾಲೂಕಿನ ಅರಣ್ಯ ಪ್ರದೇಶಗಳಿಗೆ ಪ್ರತಿವರ್ಷ ಬೆಂಕಿ ಬೀಳುವುದು ಹೆಚ್ಚು ಕಂಡುಬರುತ್ತಿದೆ.

ಕೆಲಸ ಮಾಡುತ್ತಿಲ್ಲ: ಮಾಕಳಿ ಬೆಟ್ಟದಲ್ಲಿ ಬೆಳೆದು ವಿವಿಧ ಜಾತಿಯ ಗಿಡಗಳು, ಪ್ರಾಣಿ, ಪಕ್ಷಿಗಳು ಬೆಂಕಿ ಕೆನ್ನಾಲಿಗೆಗೆ ಬಲಿಯಾಗಿವೆ. ಬೆಟ್ಟದ ತಪ್ಪಲಿನಲ್ಲಿ ಕೃಷಿ ಭೂಮಿ ಹಸನು ಮಾಡಿಕೊಳ್ಳುವ ಉದ್ದೇಶದಿಂದಲೇ ಬೆಟ್ಟದ ತಪ್ಪಲಿನಲ್ಲಿ ಬೆಂಕಿ ಹಚ್ಚಲಾಗುತ್ತಿದೆ ಎಂಬುದು ಪರಿಸರ ಪ್ರೇಮಿಗಳ ಮಾತಾಗಿದೆ. ಇನ್ನು ಬೆಂಕಿ ಕಾಣಿ ಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಬೆಂಕಿ ನಂದಿಸುವ ಕೆಲಸ ಮಾಡುತ್ತಿಲ್ಲ ಎಂದು ದೂರುತ್ತಿದ್ದಾರೆ.

ನಿರ್ಲಕ್ಷ್ಯ: ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಅರಣ್ಯ ಭಾಗದಲ್ಲಿ ಬೆಂಕಿ ಬಿದ್ದರೆ ನಂದಿಸುವ ಬಗ್ಗೆ ಎಚ್ಚರ ವಹಿಸಲು ತಾತ್ಕಾಲಿಕ ಕಂಟೊ›àಲ್‌ ರೂಂ ಸ್ಥಾಪನೆ ಮಾಡಲು ಜನ ಆಗ್ರಹಿಸುತ್ತಿದ್ದರೂ ಅರಣ್ಯ ಇಲಾಖೆ ಇನ್ನೂ ಸಿದ್ಧತೆ ನಡೆಸದಿರುವುದು ನಿರ್ಲಕ್ಷ್ಯಕ್ಕಿಡಿದ ಕನ್ನಡಿಯಾಗಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 14 ಮೀಸಲು ಅರಣ್ಯ ಪ್ರದೇಶ ಸೇರಿ 20, 296 ಎಕರೆ ಅರಣ್ಯವಿದೆ. ಮಾಕಳಿ ದುರ್ಗ, ಉಜ್ಜನಿ, ಮುದ್ದೇನಹಳ್ಳಿ, ಘಾಟಿ ಸುಬ್ರಹ್ಮಣ್ಯ, ಹುಲುಕುಡಿ, ದೇವರಬೆಟ್ಟ, ಗಂಡ್ರ ಗೋಳಿಪುರದ ಅರಣ್ಯ, ಕಲ್ಲುಕೋಟೆ ಸೇರಿದಂತೆ ಸುಮಾರು 5,000 ಎಕರೆಗಿಂತಲೂ ಹೆಚ್ಚು ಅರಣ್ಯ ಪ್ರದೇಶ ಹಲವು ಬಾರಿ ನಡೆದ ಬೆಂಕಿ ಪ್ರಕರಣಗಳಲ್ಲಿ ಸಿಲುಕಿ ಸುಟ್ಟು ಕರಕಲಾಗಿವೆ.

ಬೆಂಕಿ ನಂದಿಸಲು ಕೈಗೊಳ್ಳಬೇಕಿರುವ ಕ್ರಮಗಳು :

  • ಅರಣ್ಯದ ಮಧ್ಯೆಯೇ ಫೈಯರ್‌ ಕಂಟ್ರೋಲಿಂಗ್‌ ರೂಮ್‌ಗಳನ್ನು ನಿರ್ಮಿಸಿ ಇಲಾಖೆ ಸಿಬ್ಬಂದಿ ಮುಂಜಾಗೃತವಾಗಿ ಅರಣ್ಯದಲ್ಲಿ ತಂಗಿದರೆ, ಬೆಂಕಿ ಕಂಡ ಕೂಡಲೇ ನಿಯಂತ್ರಿಸಲು ಸಹಕಾರಿ ಆಗುತ್ತದೆ.
  • ಬೆಂಕಿ ಒಂದು ಕಡೆಯಿಂದ ಮತ್ತೂಂದು ಕಡೆಗೆ ಹರಡುವುದನ್ನು ತಡೆಯಲು ಹಾಗೂ ಜನ ಧೂಮಪಾನ ಮಾಡಿ ಬಿಸಾಡುವ ಸಿಗರೇಟ್, ಬೀಡಿ ಕಿಡಿಹೊತ್ತಿ ಬೆಂಕಿ ತಗಲುವ ಸಾಧ್ಯತೆಗಳೇ ಹೆಚ್ಚಿದೆ. ಹೀಗಾಗಿ ಅರಣ್ಯದಲ್ಲಿ ಏಕಾಏಕಿ ಉಂಟಾಗುವ ಬೆಂಕಿ ತಡೆಯಲು ಅಥವಾ ದೂರದವರೆಗೆ ವ್ಯಾಪಿಸದಂತೆ ಬೆಂಕಿ ರೇಖೆ (ಫೈರ್‌ ಲೈನ್‌) ತಂತ್ರ ಬಳಕೆ ಅವಶ್ಯ ‌
  • ಅರಣ್ಯ ಪ್ರದೇಶದ ಮೂಲಕ ಸಾಗುವ ರಸ್ತೆಗಳ ಅಕ್ಕ-ಪಕ್ಕ, ಕಾಡಿನ ಕಾಲು ದಾರಿ, ಬೆಂಕಿ ಸ್ಥಳ ಗುರುತಿಸಿ ನಂತರ ಮೂರು ಮೀಟರ್‌ ಅಗಲದ ಅಂತರದಲ್ಲಿ ಅರಣ್ಯ ಸಿಬ್ಬಂದಿಯೇ ಬೆಂಕಿ ಹಚ್ಚಿ ಒಣಗಿದ ಹುಲ್ಲು, ತರಗು ಗಿಡಗಳನ್ನು ಸುಟ್ಟು ನಾಶಪಡಿಸಬೇಕಿದೆ.
  • ಅರಣ್ಯದ ವಿಸ್ತೀರ್ಣಕ್ಕೆ ತಕ್ಕಂತೆ ಇರಬೇಕಾದ ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳನ್ನು ನೇಮಿಸಬೇಕು. ಇನ್ನು ಸ್ವಯಂಸೇವಕರಾಗಿ ಸ್ಥಳೀಯರು ಭಾಗವಹಿಸುವ ಅಗತ್ಯವಿದೆ.
  • ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹೋಗಿ ತಮ್ಮ ಪ್ರಾಣ ಕಳೆದುಕೊಂಡಿರುವ ಸಾಕಷ್ಟು ಉದಾಹರಣೆಯಿದೆ. ಹೀಗಾಗಿ ಅಗ್ನಿಶಾಮಕ ಸಾಧನಗಳ ಜತೆಗೆ ಮಾನವನ ಶಕ್ತಿಯೂ ತುಂಬಾ ಮುಖ್ಯ ನಮ್ಮ ತಾಲೂಕಿನ ಅರಣ್ಯವು ಹೆಚ್ಚಾಗಿ ನೀಲಗಿರಿ, ಅಕೇಶಿಯಾ, ಲಂಟನಾ ಆದಂತಹ ಬೇಲಿ ಗಿಡಗಳು ಆವರಿಸಿದೆ.

ಬೆಂಕಿ ಬಿದ್ದರೆ ಕ್ಷಣ ಮಾತ್ರದಲ್ಲಿ ಸುಟ್ಟುಹೋಗುತ್ತದೆ. ಅರಣ್ಯ ಇಲಾಖೆ ತಮ್ಮ ಪ್ರಯತ್ನದೊಂದಿಗೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಇಂತಹ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. – ಚಿದಾನಂದ್‌, ಯುವ ಸಂಚಲನದ ಅಧ್ಯಕ್ಷ

-ಡಿ.ಶ್ರೀಕಾಂತ

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.