ಸಮರ್ಥ ರಾಷ್ಟ್ರಕ್ಕಾಗಿ ಫಿಟ್‌ ಇಂಡಿಯಾ ಯೋಜನೆ


Team Udayavani, Aug 31, 2019, 3:00 AM IST

samartha

ಹೊಸಕೋಟೆ: ಸಮರ್ಥ ರಾಷ್ಟ್ರ ನಿರ್ಮಿಸುವುದು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಫಿಟ್‌ ಇಂಡಿಯಾ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್‌.ಬಚ್ಚೇಗೌಡ ಹೇಳಿದರು.

ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಭಾರತೀಯ ಶಾಲಾ ಕ್ರೀಡಾ ಮಂಡಳಿ ನಿರ್ದೇಶಿತ ತಾಲೂಕು ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ಯುವಕರು ಕ್ರೀಡಾಭ್ಯಾಸದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶಕ್ತಿಯುತವಾಗಿ, ಆರೋಗ್ಯವಂತರಾಗಿ ರೂಪುಗೊಳ್ಳಬೇಕು. ಇಂದು ವ್ಯಾಯಾಮದ ತೀವ್ರ ಕೊರತೆಯಿಂದಾಗಿ ಯುವಕರು ಸಹ ಮಧುಮೇಹದಂತಹ ಆರೋಗ್ಯದ ಸಮಸ್ಯೆಗಳಿಗೆ ಒಳಗಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಶಿಕ್ಷಣದಲ್ಲಿ ಕ್ರೀಡೆ ಅವಿಭಾಜ್ಯ ಅಂಗ: ಮಾನಸಿಕ, ದೈಹಿಕ ಸಮತೋಲನ ಕಾಪಾಡಿಕೊಳ್ಳುವುದರೊಂದಿಗೆ ಸದೃಢರಾಗಲು ಕ್ರೀಡಾಭ್ಯಾಸ ಸಹಕಾರಿಯಾಗಿದೆ. ಕ್ರೀಡೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವಾಗಿ ಪರಿಗಣಿಸಿದಲ್ಲಿ ಇಂತಹ ನ್ಯೂನತೆಗಳನ್ನು ಸರಿಪಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕ್ರೀಡಾ ವಸ್ತು ಪೂರೈಕೆಗೆ ಕ್ರಮ: ತಾಲೂಕು ಹಿಂದಿನಿಂದಲೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ಹೊಂದಿರುವ ಖ್ಯಾತಿ ಗಳಿಸಿದೆ. ಪರಂಪರೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಇದಕ್ಕಾಗಿ ಪೂರಕವಾದ ಸುಸಜ್ಜಿತವಾದ ಕ್ರೀಡಾಂಗಣದಂತಹ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಕ್ರೀಡೆಗಾಗಿ ಅಗತ್ಯತೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರು ನೇಮಕ: ತಾಲೂಕು ಪಂಚಾಯ್ತಿ ಅಧ್ಯಕ್ಷ ವಿ.ಸಿ. ಜಯದೇವಯ್ಯ ಮಾತನಾಡಿ, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ದೈಹಿಕ ಶಿಕ್ಷಕರನ್ನು ನೇಮಿಸಲಾಗಿದೆ. ಆಟದ ಮೈದಾನ ವ್ಯವಸ್ಥೆಯೊಂದಿಗೆ ಕ್ರೀಡಾ ಉಪಕರಣಗಳನ್ನು ದಾನಿಗಳ ಸಹಕಾರದಿಂದ ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಕೊಡುಗೆಯನ್ನು ಸಾರ್ಥಕಗೊಳಿಸ‌ಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ರಮೇಶ್‌, ಕ್ಷೇತ್ರ ಸಮನ್ವಯಾಧಿಕಾರಿ ಎಂ. ಲಲಿತಮ್ಮ, ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸತೀಶ್‌, ನಿರ್ದೇಶಕ ಸಿ.ಮುನಿಯಪ್ಪ, ತಾಲೂಕು ಪಂಚಾಯ್ತಿ ಸದಸ್ಯ ಡಿ.ಟಿ.ವೆಂಕಟೇಶ್‌, ಮುಖಂಡರಾದ ಅರುಣ್‌ ಕುಮಾರ್‌, ಎಚ್‌.ಎಂ.ಸುಬ್ಬರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್‌.ಮುನಿಶಾಮಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್‌.ಎನ್‌.ಎಸ್‌.ಹುಸೇನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳ ಸುಮಾರು 1 ಸಾವಿರ ವಿದ್ಯಾರ್ಥಿಗಳು ಎರಡು ದಿನಗಳು ಏರ್ಪಡಿಸಿರುವ ಒಟ್ಟು 28 ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
-ಎಸ್‌.ಎನ್‌.ಕನ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.