ಚಿತ್ತವಿಕಲತೆಗೆ ಉಚಿತ ಚಿಕಿತ್ಸೆ


Team Udayavani, May 26, 2019, 3:00 AM IST

chitta

ದೊಡ್ಡಬಳ್ಳಾಪುರ: ಚಿತ್ತವಿಕಲತೆ ಮಾನಸಿಕ ರೋಗವಾಗಿದ್ದು, ಮೂಢನಂಬಿಕೆಗಳಿಗೆ ಮರುಳಾಗದೇ, ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ರೋಗ ತಡೆಗಟ್ಟಬಹುದು. ಸರ್ಕಾರ ಇದಕ್ಕೆ ಉಚಿತ ಚಿಕಿತ್ಸಾ ಸೌಲಭ್ಯ ನೀಡುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞ ಡಾ.ಗಿರೀಶ್‌ ತಿಳಿಸಿದರು.

ನಗರದ ತಾಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ಕಿಜೋಫ್ರೀನಿಯಾ(ಚಿತ್ತ ವಿಕಲತೆ)ದಿನಾಚರಣೆಯಲ್ಲಿ ಅವರು ಮಾತನಾಡಿದರು.

ವೈದ್ಯರ ಸೇವೆ ಶ್ಲಾಘನೀಯ: ಮನೋ ವೈಕಲ್ಯ ಹೊಂದಿದವರ ಬಗ್ಗೆ ಅಸಡ್ಡೆ ತೋರದೆ ಸಾಮಾನ್ಯರಂತೆ ಕಾಣಬೇಕು. ಮನೋವಿಕಲತೆ ಹೊಂದಿದವರನ್ನು ಆರೋಗ್ಯವಂತರಾಗಿಸುವಲ್ಲಿ ವೈದ್ಯರು, ದಾದಿಯರಷ್ಟೇ ಕುಟುಂಬದವರ ಜವಾಬ್ದಾರಿಯೂ ಇದೆ. ಆರೋಗ್ಯ ಸೇವಾ ಸಿಬ್ಬಂದಿ, ವೈದ್ಯರು ವೈಯಕ್ತಿಕ ಜೀವನದ ಸಂತಸವನ್ನು ತ್ಯಾಗ ಮಾಡಿ ಸಹನೆ, ತಾಳ್ಮೆಯಿಂದ ರೋಗಿಗಳ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ ಎಂದರು.

ಆರಂಭಿಕ ಚಿಕಿತ್ಸೆ: ನನ್ನ ಮೇಲೆ ಬೇರೆಯವರು ಅನುಮಾನ ಬೀಳುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಯಾರೋ ಏನೋ ಯೋಚನೆ ತುಂಬಿಸುತ್ತಿದ್ದಾರೆಂಬ ಭ್ರಮೆಯಲ್ಲಿರುವುದು ಸ್ಕಿಜೋಫ್ರೀನಿಯಾ(ಚಿತ್ತವಿಕಲತೆ)ಲಕ್ಷಣಗಳಾಗಿವೆ. ಇದಕ್ಕೆ ನಿಮ್ಹಾನ್ಸ್‌ಗೆ ತೆರಳಿ ಚಿಕಿತ್ಸೆ ನೀಡಬೇಕೆಂದೇನೂ ಇಲ್ಲ.

ಆರಂಭಿಕ ಹಂತದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಚಿಕಿತ್ಸೆ ಕೊಡಿಸಬಹುದಾಗಿದೆ. ಆಶಾ ಕಾರ್ಯಕರ್ತೆಯರು ಅಂತಹವರನ್ನು ಗುರುತಿಸಿ ಮಾಹಿತಿ ನೀಡಬೇಕು. ತಿಂಗಳ 3ನೇ ಮಂಗಳವಾರ, 1ನೇ ಗುರುವಾರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದರು.

ಸರ್ಕಾರದ ಸೌಲಭ್ಯಗಳು: ಸರ್ಕಾರ ಇದಕ್ಕೆ ಉಚಿತ ಚಿಕಿತ್ಸೆಯ ಸೌಲಭ್ಯ ನೀಡುತ್ತಿದೆ. ರೋಗಿಗೆ ನೀಡುವ ಪ್ರಮಾಣ ಪತ್ರದಿಂದ ಅಂಗವಿಕಲರ ಮಾಸಾಶನ ಪಡೆಯಬಹುದಾಗಿದೆ. ಮಾನಸ ಧಾರಾ ಯೋಜನೆಯಡಿ ವಿವಿಧ ತರಬೇತಿ ಪಡದು ಸ್ವಂತ ಉದ್ಯೋಗ ಮಾಡಲು ಅವಕಾಶವಿದೆ ಎಂದು ತಿಳಿಸಿದರು.

ಮಾನಸಿಕ ಸ್ಥಿಮಿತ ಕಾಪಾಡಿಕೊಳ್ಳಿ: ತಾಲೂಕು ಆರೋಗ್ಯಾಧಿಕಾರಿ ಡಾ.ಶರ್ಮಿಳಾ ಹೆಡೆ ಮಾತನಾಡಿ, ಹಿಂದಿನ ದಿನಗಳಲ್ಲಿ ಮನೋ ವೈಕಲ್ಯ ಒಂದು ಶಾಪ ಎಂಬ ನಂಬಿಕೆಯಿತ್ತು. ಇತ್ತೀಚಿನ ದಿನಗಳಲ್ಲಿ ವೈಜ್ಞಾನಿಕ ಪ್ರಗತಿಯಿಂದ ಮನೋ ವೈಕಲ್ಯವನ್ನು ಗುಣಪಡಿಸಬಹುದಾಗಿದೆ. ಮನೋ ವೈಕಲ್ಯತೆ ಹೊಂದಿದವರನ್ನು ರೋಗಮುಕ್ತಗೊಳಿಸಿ ಮುಖ್ಯವಾಹಿನಿಗೆ ತರಬೇಕು.

ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ದಾದಿಯರು ಕಾಯೊನ್ಮುಖರಾಗಬೇಕು. ಮಾನಸಿಕ ಆರೋಗ್ಯದೊಂದಿಗೆ ದೈಹಿಕ ಆರೋಗ್ಯವೂ ಉತ್ತಮವಾಗಿದ್ದರೆ ಮಾತ್ರ ಆರೋಗ್ಯವಂತ ಎಂದೆನಿಸಿಕೊಳ್ಳುತ್ತಾನೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯವಂತರೂ ಸಹ ತಮ್ಮ ಮಾನಸಿಕ ಸ್ಥಿಮಿತವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಹೇಳಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಮಂಜುನಾಥ್‌, ಮನಃಶಾಸ್ತಜ್ಞ ಸದಾನಂದ, ಹಿರಿಯ ಆರೋಗ್ಯ ನಿರೀಕ್ಷಕ ಚಿಕ್ಕತಿಮ್ಮಯ್ಯ, ಗೌರಮ್ಮ, ರೇಖಾ, ಗಗನ್‌ ಮತ್ತಿತರು ಹಾಜರಿದ್ದರು.

ಮಾನಸಿಕ ತೊಂದರೆ ಇರುವವರನ್ನು ಶೇ.90ರಷ್ಟು ಗುಣಪಡಿಸಬಹದಾಗಿದ್ದು, ಚಿತ್ತವಿಕಲತೆಗೆ ವೈದ್ಯರು ಸೂಚಿಸಿದಂತೆ ನಿರಂತರ ಚಿಕಿತ್ಸೆ ನೀಡುತ್ತಿರಬೇಕು. ಕೆಲವು ವೇಳೆ ರೋಗಿ ಆತ್ಮಹತ್ಯೆಗೆ ಶರಣಾಗಬಹುದು ಅಥವಾ ಇನ್ನೊಬ್ಬರನ್ನು ಹತ್ಯೆ ಮಾಡಲು ಯತ್ನಿಸಬಹುದು. ಈ ಬಗ್ಗ ಎಚ್ಚರಿಕೆ ವಹಿಸಬೇಕು.
-ಡಾ.ಗಿರೀಶ್‌, ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರು

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.