ಗಾಳಿ ಸಹಿತ ಭಾರೀ ಮಳೆ: ತುಂಬಿ ಹರಿದ ಚರಂಡಿ

ವಾಹನ ಸವಾರರು, ಪಾದಚಾರಿಗಳ ಪರದಾಟ

Team Udayavani, Jun 1, 2019, 4:12 PM IST

br-tdy-3..

ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ರಸ್ತೆ ಮಳೆಯಿಂದಾಗಿ ನೀರಿನಿಂದ ಆವೃತವಾಗಿದ್ದರಿಂದ ಬೈಕ್‌ ಸವಾರರು ಪರದಾಡಬೇಕಾಯಿತು.

ದೊಡ್ಡಬಳ್ಳಾಪುರ: ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಗಾಳಿ ಸಹಿತ ಮಳೆ ಯಿಂದಾಗಿ ನಗರದ ವಿವಿಧೆಡೆ ಚರಂಡಿ ಗಳು ತುಂಬಿ ರಸ್ತೆಯಲ್ಲಿಯೇ ನೀರು ಹರಿದ ಪರಿಣಾಮ ವಾಹನ ಸವಾರರು ಪ್ರಯಾಸಪಡುವಂತಾಗಿತ್ತು. ಸಾರ್ವಜನಿಕರು ನಡೆದುಕೊಂಡು ಹೋಗಲು ಸಾಧ್ಯ ವಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ತಾಲೂಕು ಕಚೇರಿ ರಸ್ತೆಯ ನಗರಸಭೆ ಕಾರ್ಯಾಲಯದ ಕಡೆಗೆ ಹೋಗುವ ರಸ್ತೆಗೆ ಅಡ್ಡಲಾಗಿ ಇತ್ತೀಚೆಗಷ್ಟೇ ಮೋರಿ ನಿರ್ಮಿಸಲಾಗಿದ್ದು, ಇದರಲ್ಲಿ ನೀರು ಸರಾಗವಾಗಿ ಹೋಗದೆ ನಗರದ ಅರ್ಧ ಭಾಗದಷ್ಟು ನೀರು ರಸ್ತೆಯಲ್ಲಿ ಹರಿಯುವಂತಾಗಿತ್ತು. ಬಿರುಗಾಳಿ ಯಿಂದಾಗಿ ನಗರದಲ್ಲಿ ಸಣ್ಣ ಪುಟ್ಟ ಮರ ಗಳ ರಂಬೆಗಳು ಮುರಿದು ವಿದ್ಯುತ್‌ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್‌ ಪೂರೈಕೆ ಸ್ಥಗಿತವಾಗಿತ್ತು.

ನಗರದ ಇಸ್ಲಾಂಪುರ, ಚೈತನ್ಯನಗರ, ಕರೇನಹಳ್ಳಿಯ ತಗ್ಗು ಪ್ರದೇಶದ ಮನೆ ಹಾಗೂ ಅಂಗಡಿಗಳಿಗೆ ಮಳೆ ನೀರು ನುಗ್ಗಿ ನಾಗರಿಕರು ನೀರನ್ನು ಹೊರ ಹಾಕಲು ಪ್ರಯಾಸ ಪಡುವಂತಾಗಿತ್ತು.

ನಗರಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಮಳೆ ನೀರು ಹರಿದು, ತೋಟದ ಬೆಳೆಗಳು, ಹಸುವಿನ ಕೊಟ್ಟಿಗೆಗಳಿಗೆ ಹಾನಿಯಾಗಿವೆ.

ಚರಂಡಿ ಸರಿಪಡಿಸಿ: ನಗರದಲ್ಲಿ ಇತ್ತೀಚೆಗೆ ಹೊಸದಾಗಿ ನಿರ್ಮಿಸ ಲಾಗುತ್ತಿರುವ ಚರಂಡಿಗಳು ಅತ್ಯಂತ ಅವೈಜ್ಞಾನಿಕವಾಗಿರುವುದೇ ಮಳೆ ನೀರು ರಸ್ತೆ ಮೇಲೆ ನುಗ್ಗಲು ಕಾರಣವಾಗಿದೆ. ಪ್ಲಾಸ್ಟಿಕ್‌ ಕವರ್‌, ನೀರಿನ ಖಾಲಿ ಬಾಟಲಿಗಳು ಸಹ ಚರಂಡಿಗೆ ಅಡ್ಡಲಾಗಿ ನೀರು ಹರಿದು ಹೋಗಲು ಅಡ್ಡಿ ಯಾಗಿ ಸಹ ನೀರು ರಸ್ತೆ ಮೇಲೆ ಬರಲು ಕಾರಣ ವಾಗಿತ್ತು. ನಗರದ ಇಸ್ಲಾಂಪುರದಲ್ಲಿ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ಸಾರಿ ಮಳೆ ಬಂದಾಗಲೂ ಇಲ್ಲಿನ ನಾಗರಿಕರಿಗೆ ಯಾತನೆ ತಪ್ಪುತ್ತಿಲ್ಲ. ಈ ಬಗ್ಗೆ ನಗರಸಭೆ ಗಮನ ಹರಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.