ಮಾತು ಕೇಳದಿದ್ದರೆ ಲಾಠಿ ರುಚಿ ತೋರಿಸಿ

ಸಾಮಾಜಿಕ ಅಂತರವಿರಲಿ; ರಸ್ತೆಗಿಳಿದರೆ ವಾಹನ ವಶಕ್ಕೆ ಪಡೆದು ಕೇಸ್‌ ದಾಖಲಿಸಿ: ಎಸ್‌ಪಿ

Team Udayavani, Apr 13, 2020, 6:11 PM IST

ಮಾತು ಕೇಳದಿದ್ದರೆ ಲಾಠಿ ರುಚಿ ತೋರಿಸಿ

ನೆಲಮಂಗಲ: ಲಾಕ್‌ಡೌನ್‌ ಮುಗಿಯುವವರೆಗೂ ನಿಯಮ ಮೀರಿ ಸಂಚರಿಸುವ ವಾಹನಗಳನ್ನು ಮುಲಾಜಿಲ್ಲದೆ ವಶಕ್ಕೆ ಪಡೆದು ಕೇಸ್‌ ದಾಖಲಿಸಿ, ಮುಖ್ಯ ರಸ್ತೆಗಳನ್ನು ಬಂದ್‌ ಮಾಡಿ, ಅನಿವಾರ್ಯವಾದರೆ ಲಾಠಿ ಪ್ರಯೋಗಿಸಿ ಎಂದು ಬೆಂ.ಗ್ರಾಮಾಂತರ ಎಸ್‌ಪಿ ರವಿ ಡಿ. ಚೆನ್ನಣ್ಣನವರ್‌ ಆದೇಶ ನೀಡಿದ್ದಾರೆ.

ನಗರದ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ಆಯೋಜಿಸಲಾಗಿದ್ದ ಪೊಲೀಸ್‌ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು. ಕೋವಿಡ್-19 ನಿಯಂತ್ರಣದ ಲಾಕ್‌ಡೌನ್‌ ಕಠಿಣ ನಿರ್ಧಾರ ಮುಂದುವರಿಯಲಿದೆ. ಮಾನವೀಯತೆಯಿಂದ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು. ರಸ್ತೆಗಳಲ್ಲಿ ಕೆಲಸ ಮಾಡುವಾಗ ಜನರಿಂದ ಅಂತರ ಕಾಪಾಡಿಕೊಂಡು ರೈತರು, ಔಷಧ, ಆಸ್ಪತ್ರೆ, ದಾಸ್ತಾನುಗಳ ವಾಹನಗಳು ಸಂಚರಿಸಲು ಅವಕಾಶ ಮಾಡಿಕೊಡಬೇಕು. ನಿಯಮಗಳನ್ನು ಓದಿ ತಿಳಿದುಕೊಂಡು ಬದಲಾಗುವ ನಿಯಮ ಪಾಲಿಸಬೇಕು ಎಂದರು.

ಅಂತರ ಕಾಪಾಡಿ: ಪೊಲೀಸರ ಕುಟುಂಬದಲ್ಲಿ ಸಣ್ಣ ಮಕ್ಕಳು ಹಾಗೂ 60 ವರ್ಷದ ವಯೋವೃದ್ಧರಿದ್ದರೆ ಕೆಲಸ ಮುಗಿಸಿ ಮನೆಗೆ ಹೋಗಿದ ತಕ್ಷಣ ಸುರಕ್ಷತೆ ಕ್ರಮ
ಕಡ್ಡಾಯವಾಗಿ ಪಾಲಿಸಿ. ಎರಡು ಬಾರಿ ಸ್ನಾನ ಮಾಡಿ, ಕೊರೊನಾ ಸಮಸ್ಯೆ ಮುಗಿಯುವವರಿಗೂ ಸ್ವಲ್ಪ ಅಂತರದಲ್ಲಿದ್ದರೆ ಉತ್ತಮ. ನಮ್ಮ ಕುಟುಂಬಗಳಿಗೆ ನಮ್ಮಿಂದಲೇ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಿ ಎಂದರು.

ಲಾಠಿ ಪ್ರಯೋಗಿಸಿ: ಲಾಕ್‌ಡೌನ್‌ ಆದೇಶ ಪಾಲನೆ ಮಾಡದೇ ಸುತ್ತಾ ಡುವ ಜನರಿಗೆ ಕೈಮುಗಿದು ಮನೆ ಯಿಂದ ಹೊರಬರದಂತೆ ತಿಳಿಸಿ. ಲಾಠಿ ಪ್ರಯೋಗ ಅನಿವಾರ್ಯವಾದರೇ ಪ್ರಯೋಗಿಸಿ, ಕೇಸ್‌ ದಾಖಲಿಸಿ ಲಾಕ್‌ಡೌನ್‌ ಮುಗಿಯುವವರೆಗೂ ವಾಹನಗಳನ್ನು ವಾಪಸ್‌
ನೀಡಬೇಡಿ ಎಂದರು.

ಹಲ್ಲೆ ಯತ್ನ: ನಗರದ ರಸ್ತೆಗಳಲ್ಲಿ ವಾಹನಗಳನ್ನು ನಿಯಂತ್ರಣ ಮಾಡಲು ಮುಂದಾದ ಪೊಲೀಸರಿಗೆ ಗ್ರಾಪಂ ಸದಸ್ಯನ ಮಗ ಹಲ್ಲೆ ಯತ್ನ ಮಾಡಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ಪೊಲೀಸ್‌ ಸಿಬ್ಬಂದಿಯೊಬ್ಬರು ಎಸ್‌ಪಿ ರವಿ ಡಿ. ಚೆನ್ನಣ್ಣನವರಿಗೆ ಸಭೆಯಲ್ಲಿ ದೂರು ನೀಡಿದ್ದು, ತಕ್ಷಣ ಪ್ರಕರಣ
ದಾಖಲಿಸುವಂತೆ ತಿಳಿಸಿದ್ದಾರೆ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ಪ್ರಕರಣ ಮುಚ್ಚುವ ಪ್ರಯತ್ನ ಮಾಡಬೇಡಿ, ಪ್ರಭಾವಿಗಳಿಗೆ ಪಾಠವಾಗಬೇಕು ಎಂದು ಮನವಿ ಮಾಡಲಾಗಿದೆ.

ದಿನಸಿ ವಿತರಣೆ: ಪೊಲೀಸ್‌ ಇಲಾಖೆ ಎಲ್ಲಾ ಸಿಬ್ಬಂದಿ ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌, ಅಡುಗೆಗೆ ಬೇಕಾದ ದಿನಸಿ ಪದಾರ್ಥ ನೀಡಲು ಸೂಚಿಸಲಾಗಿದೆ. ಪೊಲೀಸ್‌ ಸಿಬ್ಬಂದಿ ಕುಟುಂಬಗಳಿಗೆ ಸಮಸ್ಯೆಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಿದರು. ಡಿವೈಎಸ್‌ಪಿ ಮೋಹನ್‌ ಕುಮಾರ್‌, ಸಿಪಿಐ ಶಿವಣ್ಣ, ವಿರೇಂದ್ರ ಪ್ರಸಾದ್‌, ಪಿಎಸ್‌ಐ ಡಿ.ಆರ್‌. ಮಂಜುನಾಥ್‌, ಅಂಜನ್‌ಕುಮಾರ್‌, ಮೋಹನ್‌ ಕುಮಾರ್‌, ಗೋವಿಂದರಾಜು ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.