ವೇತನಕ್ಕಾಗಿ ಕಾರ್ಮಿಕರ ಧರಣಿ


Team Udayavani, Jan 2, 2020, 5:27 PM IST

br-tdy-1

ದೊಡ್ಡಬಳ್ಳಾಪುರ: ನಗರದ ಹೊರ ವಲಯದ ಕೈಗಾರಿಕಾ ಪ್ರದೇಶದ ಅಪೇರೆಲ್‌ ಪಾರ್ಕ್‌ನ ಜೀನ್ಸ್‌ ನಿಟ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಯಲ್ಲಿ ಆಡಳಿತ ಮಂಡಳಿಯಿಂದ ಕಾರ್ಮಿಕರಿಗೆ ಬಲವಂತದ ಒತ್ತಡದ ಕೆಲಸ ಮಾಡಿಸುವುದು,ವೇತನ ಹೆಚ್ಚಿಸದಿರುವುದನ್ನು ಪ್ರತಿಭಟಿಸಿದರೆ, ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಹೊರಹಾಕಿ 3 ತಿಂಗಳ ವೇತನ ನೀಡುತ್ತಿಲ್ಲ. ಇದರಿಂದ ಕಾರ್ಮಿಕರು ತೀವ್ರ ಆರ್ಥಿಕ ಸಮಸ್ಯೆ ಅನುಭವಿಸುವಂತಾಗಿದೆ. ತಹಶೀಲ್ದಾರ್‌ ಹಾಗೂ ಉಪವಿಭಾಗಾಧಿಕಾರಿ ಮಧ್ಯ ಪ್ರವೇಶಿಸಿ ನ್ಯಾಯ ದೊರಕಿಸಬೇಕೆಂದು ನಗರದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರು ಪ್ರತಿಭಟನಾ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಜೀನ್ಸ್‌ ನಿಟ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಮಿಕರ ಸಂಘದ ಅಧ್ಯಕ್ಷ ಪಿ.ಕೆ.ವೆಂಕಟೇಶ್‌, ಕಂಪನಿಯ ನಿಯಮಗಳನ್ನು ನಾವು ಪಾಲಿಸುತ್ತಾ ಬಂದಿದ್ದೇವೆ. ಆದರೂ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಹೆಚ್ಚಿನ ಕೆಲಸದ ಒತ್ತಡ ಹಾಕ್ತಿದ್ದು,ಮೂರ್‍ನಾಲ್ಕು ಮಂದಿ ಮಾಡುವ ಕೆಲಸವನ್ನು ಒಬ್ಬರೇ ಮಾಡಿ ಎಂದು ಉದ್ದೇಶ ಪೂರ್ವಕವಾಗಿ ಮಾನಸಿಕ ಕಿರುಕುಳ ನೀಡುತ್ತಿದೆ.

ವಿನಾಕಾರಣ 100 ಜನ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಭಾನವಾರ ಹಾಗೂ ರಜಾ ದಿನಗಳಲ್ಲಿಯೂ ಸಹ ಕೆಲಸ ಮಾಡಿ ಎಂದು ಒತ್ತಡ ಹೇರುತ್ತಾರೆ. ಆದರೆ ಇದಕ್ಕಾಗಿ ಹೆಚ್ಚಿನ ವೇತನ ನೀಡುತ್ತಿಲ್ಲ. ಮೂರು ವರ್ಷಗಳಿಂದ ಕಾರ್ಮಿಕರಿಗೆ ವೇತನ ಹೆಚ್ಚಳ,ಹೆಚ್ಚುವರಿ ಭತ್ಯೆ ಯಾವುದನ್ನೂ ನೀಡಿಲ್ಲ.ಇತರೆ ಕಾರ್ಮಿಕರಿಗೆ ತೊಂದರೆ ಮಾಡುತ್ತಿದ್ದಾರೆ ಎಂದು ವಿನಾಕಾರಣ ನಮ್ಮ ಮೇಲೆ ಆರೋಪ ಹೊರಿಸಿ ಕಾರ್ಮಿಕರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಕಾರ್ಮಿಕರನ್ನು ಮೇಲಾಧಿಕಾರಿಗಳು ಅವಾಚ್ಯ ಶಬ್ದಗಳಿಂದ ಬೈಯುತ್ತಾರೆ.ಕಂಪನಿಯ ಆಡಳಿತ ಮಂಡಳಿಗೆ ಈ ಬಗ್ಗೆ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಕಾರ್ಖಾನೆಯ ಸುಮಾರು 250ಕ್ಕೂ ಹೆಚ್ಚು ಕಾರ್ಮಿಕರು ಉದ್ಯೋಗವಿಲ್ಲದೇ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ತಹಶೀಲ್ದಾರ್‌ ಹಾಗೂ ಉಪವಿಭಾಗಧಿಕಾರಿ ಮಧ್ಯ ಪ್ರವೇಶಿಸಿ ನ್ಯಾಯ ದೊರಕಿಸ ಬೇಕೆಂದು ಒತ್ತಾಯಿಸಿದರು.

ಆದೇಶ ಪಾಲನೆ ಮಾಡುತ್ತಿಲ್ಲ: ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್‌ ಮಾತನಾಡಿ, ಜೀನ್ಸ್‌ ನಿಟ್‌ ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದೇ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಸಿಐಟಿಯು ನೇತೃತ್ವದಲ್ಲಿ ಹೋರಾಟ ಆರಂಭಿಸಿದ್ದನ್ನು ಪರಿಗಣಿಸಿ ಲೇಬರ್‌ ಕಮಿಷನರ್‌ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿದ್ದರೂ, ಪಾಲಿಸದೆ ಕೆಲಸಬಿಡುವಂತೆ ಕಾರ್ಮಿಕರನ್ನು ಒತ್ತಾಯಿಸಿಸುತ್ತಿದ್ದಾರೆ. ಸ್ಥಳೀಯ ಹೊರ ರಾಜ್ಯದ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಹೊರಹಾಕಿ 3 ತಿಂಗಳ ವೇತನವನ್ನು ನೀಡದೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಮುಷ್ಕರದಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್‌ ಸಿಂಹ,ಜೀನ್ಸ್‌ ನಿಟ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಪುನೀತ್‌,ಖಜಾಂಚಿ ಅನಂತ್‌ ಗೌಡ, ಭರತ್‌ ಬೋಸ್ಲೆ,ಮನೀಶ್‌ ಶರ್ಮ, ಗೋಪಾಲ್‌ ಕುಮಾರ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.