ಆಲಿಕಲ್ಲು ಮಳೆಗೆ ನೆಲಕ್ಕಚ್ಚಿದ‌ ಮಾವು

ದೇವನಹಳ್ಳಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆ • ಸಂಪೂರ್ಣವಾಗಿ ಹಾಳಾದ ಮಾವಿನ ಫ‌ಸಲು

Team Udayavani, Jun 2, 2019, 11:32 AM IST

br-tdy-1..

ದೇವನಹಳ್ಳಿ ತಾ. ದೊರೆಕಾವಲು ಬಳಿ ಮಾವಿನ ತೋಟದಲ್ಲಿ ಮಳೆಗಾಳಿಯಿಂದ ಮಾವು ಕೆಳಕ್ಕೆ ಉದುರಿರುವುದು.

ದೇವನಹಳ್ಳಿ: ತಾಲೂಕಿನ ಹಲವರು ಕಡೆಗಳಲ್ಲಿ ಇತ್ತಿಚೆಗೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮಾವಿನ ತೋಟಗಳಲ್ಲಿ ಮಾವಿನ ಕಾಯಿಗಳೂ ನೆಲಕ್ಕೆ ಬಿದ್ದು ನಾಶವಾಗಿದೆ. ಧಾರಾಕಾರವಾಗಿ ಮಳೆಸುರಿದಿದ್ದರಿಂದ ಜನತೆ ಸಂತೋಷ ಪಡುತ್ತಿದ್ದರೆ, ಮತ್ತೂಂದೆಡೆ ಮಾವಿನ ಫಸಲು ಮಳೆ ಗಾಳಿಗೆ ಸಿಲುಕಿ ಹಾಳಾಗಿರುವುದು ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದ್ದು, ರೈತರು ಕಂಗಾಲಾಗಿದ್ದಾರೆ.

ಅಕಾಲಿಕ ಮಳೆಗೆ ರೈತರು ಕಂಗಾಲು: ಈ ಬಾರಿ ಉತ್ತಮ ಫಸಲು ಬಂದಿದೆ ಎಂಬುವ ಖುಷಿಯಲ್ಲಿದ್ದ ಮಾವು ಬೆಳೆಗಾರರು ತಮ್ಮ ತೋಟಗಳನ್ನು ನೆರೆಯ ಆಂಧ್ರಪ್ರದೇಶದ ಮಾರಾಟಗಾರರಿಗೆ ನೀಡಿದ್ದರು. ಆದರೆ ಮಾರಾಟಗಾರರು ಮಾವಿನ ಕಾಯಿಗೆ ಒಳ್ಳೆ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಇನ್ನೊಂದು ಕಡೆ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ ಎಂಬುವ ನಿರೀಕ್ಷೆಯಲ್ಲಿದ್ದವರು. ಆಲಿಕಲ್ಲು ಮಳೆಗೆ ಮಾವಿನ ಫ‌ಸಲು ಸಂಪೂರ್ಣವಾಗಿ ಹಾಳಾಗಿದೆ. ಹೀಗಾಗಿ ಮುಂಗಡ ಹಣವನ್ನು ವಾಪಸ್ಸು ಕೇಳುವ ದುಸ್ಥಿತಿ ಬಂದೆರಗಿದೆ. ರೋಗ ಬಾಧೆಯ ನಡುವೆಯೂ ಮಾವು ರೈತರ ಬದುಕಿಗೆ ನೆರವಾಗುತ್ತದೆ ಎಂಬ ಭ್ರಮೆಯಲ್ಲಿ ಸಾಲ ಸೋಲ ಮಾಡಿ, ರೋಗ ಬಾಧೆ ತಡೆಗೆ ಔಷಧ ಸಿಂಪಡಿಸಿ ಸಕಾಲಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮಳೆಯಿಂದ ಹೆಚ್ಚಿನ ತೊಂದರೆ ಅನುಭವಿಸುವಂತ್ತಾಗಿದೆ. ಬೆಳೆಗೆ ಅಕಾಲಿಕ ಮಳೆ ರೈತರ ಆಸೆಗೆ ತಣ್ಣೀರೆರಚಿದೆ. ಗಾಯದ ಮೇಲೆ ಬರೆ ಎಳೆದಂತೆ ಆಗಿದೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.

ಪರಿಹಾರ ಘೋಷಣೆಗೆ ಮನವಿ: ಇದೇ ರೀತಿ ಮುಂದುವರೆದರೆ ರೈತರು ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆಗಳು ನಿರ್ಮಾಣವಾಗಿ ರೈತರ ಬದುಕು ಬೀದಿಗೆ ಬೀಳಲಿದೆ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಮಾವು ಬೆಳೆಗಾರರ ನಷ್ಟ ಪರಿಹಾರ ಘೋಷಿಸಿದರೆ ಒಂದಿಷ್ಟು ಅನುಕೂಲವಾಗುತ್ತದೆ ಎಂದು ರೈತರು ಸರ್ಕಾರವನ್ನು ಕೋರಿದ್ದಾರೆ.

ಈ ಬಾರಿ ಮಳೆಯಾಗದೆ ಬರಗಾಲದ ಛಾಯೆ ಸೃಷ್ಠಿಯಾಗಿದೆ. ಮಾವು ತೋಟಗಳಲ್ಲಿ ತೇವಾಂಶ ಕೊರತೆಯಿಂದ ಮಾವಿನ ಮರಗಳಲ್ಲಿ ಬೆರಳೆಣಕೆಯಷ್ಟು ಹೂಬಿಟ್ಟು ಪೀಚುಗಳು ಮಾವಿನ ಕಾಯಿಗಳಾಗಿ ಮೂಡಿತ್ತು. ಮೋಡ ಕವಿದು ಮಿಂಚು ಗುಡುಗು ಸಹಿತ ಆಲಿಕಲ್ಲು ಮಳೆ ಹೊಡೆತಕ್ಕೆ ಮಾವಿನ ಕಾಯಿಗಳು ನೆಲಕಚ್ಚಿರುವುದು ರೈತರ ಮನದಲ್ಲಿ ನಿರಾಸೆ ಮೂಡಿಸುವಂತೆ ಆಗಿದೆ. ಕಳೆದ ವರ್ಷ ಸಕಾಲಕ್ಕೆ ಮಳೆಯಾಗಿ ಮಾವು ಬೆಳೆಗಾರರು ಉತ್ತಮವಾಗಿ ಬೆಳೆ ಫಸಲು ಮಾರುಕಟ್ಟೆಯಲ್ಲಿ ಕೇಳುವವರಿಲ್ಲದೆ, ತೋಟದಲ್ಲಿಯೇ ಕೊಳೆತು ನೆಲದ ಪಾಲಾಗಿತ್ತು ಎಂದು ರೈತರು ಹೇಳುತ್ತಾರೆ.

ವ್ಯಾಪಾರಸ್ತರ ಹೇಳಿಕೆ: ತಾಲೂಕಿನ ದೊರೆಕಾವಲು ಬಳಿ ಇರುವ ಮಾವಿನ ತೋಟವನ್ನು ಖರೀದಿಸಲಾಗಿತ್ತು. ಆದರೆ ಮಳೆ ಗಾಳಿ ಆಲಿಕಲ್ಲು ಮಳೆಯಿಂದ ಸುಮಾರು 6ಲಕ್ಷ ರೂ.ಗಳಷ್ಟು ನಷ್ಟವಾಗಿದೆ. ಮಾವಿನ ಹಣ್ಣು ಕಾಯಿ ಕೀಳಲು ಕೂಲಿಗಾರರಿಗೆ ಒಂದು ಲಕ್ಷದಷ್ಟು ಕೂಲಿಯನ್ನು ನೀಡಿದ್ದೇವೆ. ಆ ಹಣವೂ ಸಹ ಬಂದಿರುವುದಿಲ್ಲ, ಸುಮಾರು 20 ಟನ್‌ಗಳಷ್ಟು ಕಾಯಿ ಹಣ್ಣು ನಷ್ಟವಾಗಿದೆ. ಆಂದ್ರ ಪ್ರಧೇಶದ ಕದಿರಿಯಿಂದ ಬಂದು ಇಲ್ಲಿ ತೋಟವನ್ನು ಖರೀದಿಸಲು ಬಂದಿದ್ದೇವೆ. ಸುಮಾರು 8 ತೋಟಗಳಿಂದ ನಷ್ಟವನ್ನು ಅನುಭವಿಸಿದ್ದೇವೆ ಎಂದು ವ್ಯಾಪಾರಸ್ಥೆ ಮಹಮ್ಮದ್‌ ರಫಿಕ್‌ ಹೇಳಿದರು.

● ಎಸ್‌.ಮಹೇಶ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.