ಸರ್ಕಾರಿ ಕಚೇರಿಯಲ್ಲಿ ಬಂಧಿಯಾದ ಶಾಸಕ!  


Team Udayavani, Mar 2, 2023, 2:31 PM IST

tdy-11

ದೇವನಹಳ್ಳಿ: ಪಟ್ಟಣದ ತಾಲೂಕು ಆಡಳಿತ ಸೌಧದ 2ನೇ ಮಹಡಿಯಲ್ಲಿರುವ ಸಬ್‌ರಿಜಿಸ್ಟಾರ್‌ ಕಚೇರಿಯಲ್ಲಿ ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆ ಸರ್ಕಾರಿ ಕಚೇರಿಗೆ ಭೇಟಿ ನೀಡಿದ್ದ ವೇಳೆ ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಅವರನ್ನು ಕಚೇರಿಯೊಳಗೆ ಬಂಧಿಸಿದ ಘಟನೆ ನಡೆದಿದೆ.

ಬುಧವಾರ ಸರ್ಕಾರಿ ನೌಕರರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ, ಎಲ್ಲಾ ಸರ್ಕಾರಿ ಕಚೇರಿಗಳಿಗೆ ಬೀಗ ಜಡಿಯಲಾಗಿತ್ತು. ಆದರೆ, ಸಬ್‌ ರಿಜಿಸ್ಟರ್‌ ಕಚೇ ರಿಗೆ ಶಾಸಕರು ಭೇಟಿ ನೀಡಿದ್ದು, ನೋಂದಣಿ ಮಾಡಿ ಸಲು ಬಂದಿದ್ದಾರೆಂದು ಯಾರೋ ಕಿಡಗೇಡಿಗಳು ಹೊರಗಡೆಯಿಂದ ಬೀಗ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು, ಶಾಸಕರು ಅಕ್ರಮವಾಗಿ ನೋಂದಣಿ ಮಾಡಲು ಬಂದಿದ್ದಾರೆ ಎಂದು ಆರೋಪಿಸಿದರು. ಅಕ್ರಮವಾಗಿ ದಾಖಲೆ ತಿದ್ದಲು ಕಚೇರಿಗೆ ಹೊರಗಿನಿಂದ ಬೀಗ ಹಾಕಿ ಒಳಗೆ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಲಭ್ಯವಿಲ್ಲದ ಸೇವೆ ಶಾಸಕರಿಗೆ ಹೇಗೆ ಸಿಗುತ್ತದೆ. ಕಾನೂನು ಬಾಹಿರ ಕೃತ್ಯಕ್ಕೆ ಮುಷ್ಕರದ ಸಂದರ್ಭ ಉಪಯೋಗಿಸಿ ಕೊಳ್ಳುತ್ತಿರುವುದು ಅಕ್ಷಮ್ಯ ಎಂದು ಹರಿಹಾಯದ್ದರು.

ಸಾರ್ವಜನಿಕರ ಆಕ್ರೋಶ: ನಂತರ ಶಾಸಕರ ಗನ್‌ ಮ್ಯಾನ್‌ ಬೀಗ ತೆರೆಯಲು ಮುಂದಾದಾಗ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದರು. ಬೀಗ ಹಾಕಿದವರು ಸ್ಥಳಕ್ಕೆ ಬರಬೇಕು. ಶಾಸಕರು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಕಚೇರಿಯ ಬಾಗಿಲಿಗೆ ಬಂದ ದೇವನಹಳ್ಳಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಧರ್ಮೇಗೌಡರವರ ನೇತೃತ್ವದ 20ಕ್ಕೂ ಹೆಚ್ಚು ಪೊಲೀಸರ ತಂಡ ಬೀಗ ತೆಗೆಸಿ, ಬಿಗಿ ಭದ್ರತೆಯಲ್ಲಿ ಶಾಸಕರನ್ನು ಹೊರ ಕರೆತರಲಾಯಿತು.

ಹೊರಗಿನಿಂದ ಬೀಗ ಹಾಕಿ ಅಪಪ್ರಚಾರ: ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡದ ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ಅವರು, ಸಬ್‌ ರಿಜಿ ಸ್ಟಾರ್‌ ವಿಚಾರವಾಗಿ ಸಹಾಯ ಕೇಳಿ ಬಂದಿದ್ದ ಶಿಡ್ಲ ಘಟ್ಟ ಮೂಲಕ ಮಹಿಳೆಯರಿಗೆ ನ್ಯಾಯ ಒದಗಿಸಲು ಕಚೇರಿಗೆ ಬಂದಾಗ, ಯಾರೋ ಕಿಡಗೇಡಿಗಳು ಹೊರಗಿನಿಂದ ಬೀಗ ಹಾಕಿ ಅಪಪ್ರಚಾರ ಮಾಡಿದ್ದಾರೆ. ಯಾವುದೇ ಅಕ್ರಮ ಕೆಲಸದಲ್ಲಿ ಭಾಗಿಯಾಗಿಲ್ಲ. ಎಲ್ಲ ಆರೋಪಗಳು ಸುಳ್ಳು ಎಂದರು.

ಕಳೆದ ಒಂದು ಗಂಟೆಗೂ ಅಧಿಕ ಕಾಲದಿಂದ ಕಚೇರಿಯೊಳಗೆ ಶಾಸಕ ನಾರಾಯಣಸ್ವಾಮಿ ಅವರು ಇದ್ದು, ತಮ್ಮ ರಿಯಲ್‌ ಎಸ್ಟೇಟ್‌ ಕೆಲಸ ಮಾಡಿಸಿಕೊಳ್ಳಲು ಮುಷ್ಕರದ ಸಮಯವನ್ನು ಬಳಸಿಕೊಂಡಿದ್ದಾರೆ. ಇದು ಇಡೀ ಜನಸಾಮಾನ್ಯರಿಗೆ ಮಾಡಿದ ದ್ರೋಹವಾಗಿದೆ. ಅಕ್ರಮವಾಗಿ ದಾಖಲೆ ತಿದ್ದಲು ಹೊರಗೆ ಬೀಗ ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಲಭ್ಯವಿಲ್ಲದ ಸೇವೆಯು ಶಾಸಕರಿಗೆ ವಿಶೇಷವಾಗಿ ಹೇಗೆ ಸಿಗುತ್ತದೆ. -ಬಿ.ಕೆ.ಶಿವಪ್ಪ, ಎಎಪಿ ಜಿಲ್ಲಾ ಉಸ್ತುವಾರಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.