ನೆಲಮಂಗಲ ಪೊಲೀಸರ ಭರ್ಜರಿ ಬೇಟೆ


Team Udayavani, Mar 26, 2023, 2:15 PM IST

tdy-12

ನೆಲಮಂಗಲ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ದಾಖಲೆಗಳಿಲ್ಲದ 48.156ಕೆ.ಜಿ ಬೆಳ್ಳಿ ವಸ್ತುಗಳು, ಲಕ್ಷಾಂತರ ಮೌಲ್ಯದ ಸೀರೆ,ಬಟ್ಟೆಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 20 ಲಕ್ಷ ನಗದು ಹಣವನ್ನು ನಗರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಶಶಿ ಧರ್‌ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಂಡಿದ್ಧಾರೆ.

ಬೆಂಗಳೂರಿನಿಂದ ಚಿಕ್ಕಮಂಗಳೂರಿಗೆ ನೆಲಮಂಗಲ ಮಾರ್ಗವಾಗಿ ಸಾಗಿಸಲಾಗುತ್ತಿದ್ದ ಬೆಳ್ಳಿ ವಸ್ತುಗಳನ್ನು ರಾಷ್ಟ್ರೀಯ ಹೆದ್ದಾರಿ 48ರ ಟೋಲ್‌ ಬಳಿ ಗ್ರಾಮಾಂತರ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಸುಮಾರು 20ಲಕ್ಷ 22 ಸಾವಿರ ಬೆಲೆ ಬಾಳುವ 48.156ಕೆ.ಜಿ ಬೆಳ್ಳಿ ಕಂಡು ಬಂದಿದ್ದು ದಾಖಲಾತಿ ಇಲ್ಲದ ಪರಿಣಾಮ ಇಬ್ಬರನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಳ್ಳಲಾಗಿದೆ.

ನಗರ ಪೊಲೀಸರಿಂದ 3 ಲಕ್ಷ ವಶ: ಬೆಂಗಳೂರಿ ನಿಂದ ಅಜ್ಜನಪುರದ ಕಡೆ ಸಂಚರಿಸುತ್ತಿದ್ದ ವ್ಯಕ್ತಿಯ ವಾಹನದಲ್ಲಿ 17 ಲಕ್ಷ ನಗದು ಪತ್ತೆಯಾಗಿದ್ದು, ಬ್ಯಾಡರಹಳ್ಳಿ ಗೇಟ್‌ಬಳಿ ನಗರ ಪೊಲೀಸ್‌ ಠಾಣೆ ಪೊಲೀಸರು ಪರಿಶೀಲನೆ ಮಾಡಿ ದಾಖಲಾತಿ ನೀಡದ ಹಿನ್ನೆಲೆ ಹಣ ವಶಕ್ಕೆ ಪಡೆದು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದಲ್ಲದೇ ಬೆಂಗಳೂರಿನಿಂದ ತುಮಕೂರಿನ ಕಡೆಗೆ ಬರುತ್ತಿದ್ದ ಟಿ.ಎನ್‌ 12ಎಡಬ್ಲ್ಯೂ 9068 ನೀಲಿ ಬಣ್ಣದ ಕಾರನ್ನು ನೆಲಮಂಗಲದ ಬಳಿ ಪರಿಶೀಲನೆ ಮಾಡಿದಾಗ ವಾಹನದಲ್ಲಿದ್ದ ಬ್ಯಾಗ್‌ನಲ್ಲಿ 3ಲಕ್ಷ ಹಣ ಪತ್ತೆಯಾಗಿದ್ದು, ಚಾಲಕ ದೀಪ್‌ಸಿಂಗ್‌ ಸರಿಯಾದ ಮಾಹಿತಿ ಹಾಗೂ ದಾಖಲಾತಿ ನೀಡದೆ ಪರಿಣಾಮ 3 ಲಕ್ಷ ಹಣ ಮತ್ತು ಚಾಲಕನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಇನ್‌ಸ್ಪೆಕ್ಟರ್‌ ಶಶಿಧರ್‌ ತಿಳಿಸಿದರು.

ಒಟ್ಟಾರೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ಯಾವ ಪಕ್ಷಕ್ಕೆ ಸೇರಿದ ವಸ್ತುಗಳು, ಹಣ ಎಂಬುದು ತಿಳಿದುಬಂದಿಲ್ಲ, ವಶಕ್ಕೆ ಪಡೆದ ವ್ಯಕ್ತಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಲಕ್ಷಾಂತರ ಬಟ್ಟೆ ವಶ : ನೆಲಮಂಗಲ ಟೋಲ್‌ ಬಳಿ ಲಕ್ಷಾಂತರ ಬೆಲೆ ಬಾಳುವ ಸೀರೆ, ಪುರುಷರ ಪ್ಯಾಂಟ್‌, ಶರ್ಟ್‌ ಗಳಿದ್ದ 18 ಬ್ಯಾಗ್‌ಗಳು ಹಾಗೂ 1 ರೆನಾಲ್ಟ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಇವರು ಬೆಂಗಳೂರಿನಿಂದ ಹಾಸನದ ಕಡೂರಿಗೆ ಸಾಗಿಸುತ್ತಿದ್ದರು ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ಲಕ್ಷಾಂತರ ಮೌಲ್ಯದ ಬಟ್ಟೆಯನ್ನು ಯಾವುದೇ ದಾಖಲಾತಿಗಳಿಲ್ಲದೆ ಸಾಗಿಸುತ್ತಿದ್ದ ಹಿನ್ನೆಲೆ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿರುವುದು ಎಂದು ಪರಿಗಣಿಸಿ ದೂರು ದಾಖಲಿಸಿ ಮೂರು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.