ಬಾರದ ಅನುದಾನ, ಅಭಿವೃದ್ಧಿಯಾಗದ ವೀರಾಪುರ


Team Udayavani, Jun 16, 2020, 6:49 AM IST

aanudaana

ನೆಲಮಂಗಲ: ಸಿದ್ಧಗಂಗಾ ಶ್ರೀಗಳ ಹುಟ್ಟೂರು ವೀರಾಪುರ ಗ್ರಾಮವನ್ನು ಪಾರಂ ಪರಿಕ ಕೇಂದ್ರವಾಗಿಸಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ 25 ಕೋಟಿ ರೂ. ವಿಶೇಷ ಅನುದಾನ ನೀಡಿದೆ. ಆದರೆ ಘೋಷಣೆಯಾಗಿ 8 ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ. ಹೀಗಾಗಿ ವಿಶೇಷ ಅನುದಾನ ಕೇವಲ ಘೋಷಣೆಗೆ ಮಾತ್ರವೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಎದುರಾಗಿದೆ.

ಶ್ರೀಗಳ ಪ್ರತಿಮೆ ನಿರ್ಮಾಣ ಹಾಗೂ ಗ್ರಾಮದ ಅಭಿವೃದ್ಧಿಗೆ ಸಿಎಂ ಬಿ.ಎಸ್‌.ಯಡಿ ಯೂರಪ್ಪ  ಶಂಕುಸ್ಥಾಪನೆ ಮಾಡಿದ ಬಳಿಕ ಈವರೆಗೂ ಅಭಿವೃದ್ಧಿ ಕಾಮಗಾರಿಗಳು ಆರಂಭ‌ವಾಗಿಲ್ಲ. ಜತೆಗೆ ಸರ್ಕಾರ ಅಭಿವೃದ್ಧಿ ಮಾತುಗಳನ್ನಾಡುತ್ತಿದೆಯೇ ವಿನಾ, ಗ್ರಾಮದ ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮುರಿದು ಬಿದ್ದ ನಾಮಫ‌ಲಕ: ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಅದೂಟಛಿರಿ ಶಂಕುಸ್ಥಾಪನೆ ನಡೆದ ನಂತರ ಬಾಣವಾಡಿ ಗ್ರಾಪಂ ನಿಂದ ವೀರಾಪುರಕ್ಕೆ ಬರುವ ಮಾರ್ಗದಲ್ಲಿ ನಿರ್ಮಾಣವಾಗಿದ್ದ ನಾಮಫ‌ಲಕ ಮುರಿದು ಚರಂಡಿಯಲ್ಲಿ  ಬಿದ್ದಿದೆ. ಆದರೆ ಅದನ್ನು ಸರಿಪಡಿಸುವುದಾಗಲಿ, ತೆರವುಗೊಳಿಸುವುದಾಗಲಿ ಮಾಡಿಲ್ಲ. ಗ್ರಾಮಕ್ಕೆ ಬರುವ ಜನರು ಮುರಿದ ನಾಮಫ‌ಲಕ ಕಂಡು ಇದೇ ವೀರಾಪುರ ಮಾರ್ಗ ಎಂದು ತಿಳಿಯಬೇಕಾಗಿದೆ.

ಪಾಚಿಕಟ್ಟಿದ ಟ್ಯಾಂಕ್‌: ಶ್ರೀಗಳ  ಪ್ರತಿಮೆ ನಿರ್ಮಾಣ ಘೋಷಣೆಯಾದ ನಂತರ ನೂರಾರು ಜನರು ಬರುತ್ತಿದ್ದಾರೆ. ಆದರೆ ಗ್ರಾಮ ದಲ್ಲಿ ಪಾಚಿಕಟ್ಟಿದ ಹಳೆಯ ನೀರಿನ ಟ್ಯಾಂಕ್‌ಗಳನ್ನೇ ಬಳಸುತ್ತಿರುವುದು ಶೋಚ ನಿಯ. ಶ್ರೀಗಳ ಹಳೆಮನೆ, ಗ್ರಾಮದ ರಸ್ತೆ, ಚರಂಡಿ, ಸರಕಾರಿ ಶಾಲೆ ಸೇರಿದಂತೆ ಅಭಿವೃದ್ಧಿ ಕೆಲಸಗಳು ಆರಂಭವಾಗಿಲ್ಲ ಎಂದು ದೂರುಗಳು ಕೇಳಿದೆ.

ಕುಡುಕರ ಅಡ್ಡ: ಪ್ರತಿಮೆ ನಿರ್ಮಾಣ ಮಾಡುವ ಬಂಡೆ ಜಾಗಕ್ಕೆ ರಸ್ತೆ ಮಾಡಿದ ನಂತರ ಕಾಮಗಾರಿ ಆರಂಭವಾಗಿಲ್ಲ. ಆದರೆ ಕುಡುಕರು,ಪುಂಡರ ಹಾವಳಿ ಹೆಚ್ಚಾಗಿದ್ದು ಬಂಡೆಯ ಸಮೀಪದ ಮರಗಳ ಕೆಳಗೆ ಕುಳಿತು  ಪುಂಡಾಟವಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳಿಗೂ ತಿಳಿದಿದ್ದು ಕಾಮಗಾರಿ ಆರಂಭವಾದ ನಂತರ ನಿಲ್ಲುತ್ತದೆ ಬಿಡಿ ಎನ್ನುತ್ತಾರೆ.

ವಿಶೇಷ ಅನುದಾನದ ಬಗ್ಗೆ ಗ್ರಾಪಂಗಳಿಗೆ ತಿಳಿಸಿಲ್ಲ. ಕಂದಾಯ ಇಲಾಖೆಗೆ ಅನುದಾನ ಬಿಡುಗಡೆಯಾಗಿರು ವುದು. ಅವರಿಂದಲೇ ನೇರ ಕೆಲಸವಾಗಬೇಕು. ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಅಧಿಕಾರಿಗಳನ್ನು ಕೇಳಿದರೆ ಮಾಹಿತಿ  ನೀಡುತ್ತೇವೆ.
-ಉಷಾ ಮಾಳಗಿಮನಿ, ಬಾಣವಾಡಿ ಗ್ರಾಪಂ ಪಿಡಿಒ

ಕಾಮಗಾರಿ ಮಾಡುವುದೆಲ್ಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಡಲಾಗುತ್ತದೆ. ಕಂದಾಯ ಇಲಾಖೆಯಿಂದ ಏನು ಮಾಡುತ್ತಿಲ್ಲ. ನಾನು ವೀರಾಪುರಕ್ಕೆ ಹೋಗಿದ್ದೆ. ಈವರೆಗೂ ಏನು ಕೆಲಸವಾಗಿಲ್ಲ.
-ಶ್ರೀನಿವಾಸ್‌ ಪ್ರಸಾದ್‌, ಮಾಗಡಿ ತಾಲೂಕು ತಹಶೀಲ್ದಾರ್‌

* ಕೊಟ್ರೇಶ್‌ ಆರ್‌.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.