ಬೂತ್‌ ಮಟ್ಟದಿಂದ ಜೆಡಿಎಸ್‌ ಪಕ್ಷ ಸಂಘಟಿಸಿ


Team Udayavani, Nov 8, 2022, 4:10 PM IST

tdy-8

ದೇವನಹಳ್ಳಿ: ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಸಮಸ್ಯೆಗಳಾಗುತ್ತಿದ್ದು, ಸರ್ಕಾರದ ಗಮನಕ್ಕೆತಂದರೂ ಪ್ರಯೋಜನವಿಲ್ಲ. ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಶಾಸಕ ಎಲ್‌.ಎನ್‌ .ನಾರಾಯಣ ಸ್ವಾಮಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಎಸ್‌ಟಿಘಟಕದಿಂದ ನಡೆದ ದೇವನಹಳ್ಳಿ ವಿಧಾನಸಭಾಕ್ಷೇತ್ರದ ಎಸ್‌ಟಿ ಘಟಕದ ಕಾರ್ಯಕರ್ತರ ಸಭೆಹಾಗೂ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿ, ನಗರದಲ್ಲಿ ರಸ್ತೆಗಳು ಗುಂಡಿಬಿದ್ದು,ಸಾಕಷ್ಟು ಜನ ಗಾಯಗಳಾಗುತ್ತಿವೆ. ವಿಧಾನಸಭೆಕಲಾಪದಲ್ಲಿ ಗುಂಡಿಗಳ ಸಂಬಂಧಪಟ್ಟಂತೆ ಚರ್ಚೆ ನಡೆಸಿ, ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಜಾಗ ಕಬಳಿಸಲು ನಾವು ಬಿಡಲ್ಲ: ವಾಲ್ಮೀಕಿ ಅಧ್ಯಯನ ಪೀಠಕ್ಕೆ ಮೀಸಲಿರುವ ಜಾಗವಾಗಿದೆ. ಜಾಗವನ್ನು ಕಬಳಿಸಲು ನಾವು ಬಿಡುವುದಿಲ್ಲ ಎಂದು ಪಕ್ಷದ ಅಧ್ಯಕ್ಷರೊಂದಿಗೆ ಭೇಟಿ ನೀಡಿ, ಆ ಜಾಗವನ್ನು ಭದ್ರಗೊಳಿಸಲಾಗಿದೆ. ಅಧ್ಯಯನ ಪೀಠ ಬೇರೆಡೆ ಸ್ಥಾಪನೆಮಾಡುವ ಬಗ್ಗೆ ನನ್ನ ಗಮನಕ್ಕೆ ಬಂದಾಗ, ನಾನು ಸಂಬಂಧಪಟ್ಟ ಸದನದಲ್ಲಿ ಧ್ವನಿಯೆತ್ತುವುದರಮೂಲಕ ಗುರ್ತಿಸಿರುವ ಜಾಗವನ್ನೇ ಮೀಸಲಿಡಲು ಚರ್ಚಿಸಲಾಗಿದೆ. ಸಮಾಜದ ಮುಖಂಡರು, ಕಾರ್ಯಕರ್ತರು ಜೆಡಿಎಸ್‌ ಪಕ್ಷವನ್ನು ಬೂತ್‌ ಮಟ್ಟದಲ್ಲಿ ಸದೃಢಗೊಳಿಸಬೇಕು. ಪ್ರತಿಯೊಬ್ಬರು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಪಕ್ಷವಿದ್ದರೆ, ನಾವಿದ್ದಹಾಗೇ ಈಗಾಗಲೇ ವಾಲ್ಮೀಕಿ ಭವನದಕ್ಕೆ ಸಚಿವ ಶ್ರೀರಾಮಲು ಅವರ ಬಳಿ 1.5 ಕೋಟಿ ರೂ. ಅನುದಾನ ತರಲು ಶ್ರಮಸಲಾಗಿದ್ದ ಫ‌ಲವಾಗಿ ಇದೀಗ ಭವನ ನಿರ್ಮಾಣವಾಗಿದೆ. ಸಮುದಾಯದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಭವನದ ಉದ್ಘಾಟನೆಗೆ ಸಚಿವರ ಬಳಿ ಹೋಗಿ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಬಹುಮತದೊಂದಿಗೆ ಅಧಿಕಾರ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಆಕಾಂಕ್ಷಿ ರವೀಶ್‌ ಮಾತನಾಡಿ, 1994ರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಯಕ ಸಮುದಾಯವನ್ನು ಎಸ್‌ಟಿಗೆ ಮೀಸಲು ಸೇರಿಸಿದ್ದರಿಂದ ಪ್ರತಿಯೊಬ್ಬರೂ ರಾಜಕೀಯವಾಗಿ ಅವಕಾಶ ಸಿಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಸ್ಪರ್ಧಿಸಿ ಸೋತ್ತಿದ್ದೇನೆ. ಬಿಜೆಪಿಗೆ ಸೇರ್ಪಡೆಯಾಗುವಂತೆ ಒತ್ತಡ ಬಂದರೂ ಹೋಗುವುದಿಲ್ಲ. ಒಗ್ಗಟ್ಟಿನಿಂದ ಎಲ್ಲರೂ ದುಡಿದು ಈ ಬಾರಿ ದೇವನಹಳ್ಳಿ ಕ್ಷೇತ್ರದಲ್ಲಿ ಶಾಸಕರನ್ನು ಗೆಲ್ಲಿಸಿ, ಜೆಡಿಎಸ್‌ ಅನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಮುನೇಗೌಡ ಮಾತನಾಡಿ, ಪ್ರತಿ ಬೂತ್‌ ಮಟ್ಟದಿಂದ ಪಕ್ಷಸಂಘಟಿಸಬೇಕು. ಬೂತ್‌ ಮಟ್ಟದಲ್ಲಿ ಇರುವಕೊರತೆಗಳ ಬಗ್ಗೆ ತಿಳಿದುಕೊಳ್ಳಬೇಕು. ತಾಲೂಕಿನಲ್ಲಿ ಶಾಸಕರು ಉತ್ತಮ ಕಾರ್ಯ ಮಾಡಿದ್ದಾರೆ. ಶಾಸಕರನ್ನು ಮತ್ತೆ ಗೆಲ್ಲಿಸಿಕೊಳ್ಳಬೇಕು ಎಂದರು.

ಜೆಡಿಎಸ್‌ ಎಸ್‌ಟಿ ಘಟಕದ ಅಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ, ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌. ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ತಾಲೂಕು ಟಿಎಪಿಸಿಎಂಎಸ್‌ನ ಅಧ್ಯಕ್ಷ ದೇವರಾಜ್‌, ನಿರ್ದೇಶಕ ರಮೇಶ್‌, ಮಾಳಿಗೇನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ವೆಂಕಟೇಶ್‌ ಮೂರ್ತಿ, ಜಿಲ್ಲಾ ಜೆಡಿಎಸ್‌ ಎಸ್‌ಟಿ ಘಟಕದ ಅಧ್ಯಕ್ಷ ನಾಗರಾಜ್‌,ರಾಮಣ್ಣ, ಗ್ರಾಪಂ ಸದಸ್ಯರಾದ ಮುಕುಂದ, ಶ್ರೀ ನಿವಾಸ್‌, ದುದ್ದನಹಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಮಂಡಿ ಬೆಲೆಗ್ರಾಪಂ ಅಧ್ಯಕ್ಷೆ ಅಂಬಿಕಾ, ಮುಖಂಡರಾದ ಶಾಮಣ್ಣ, ಮುನಿರಾಜು, ಮೀಸಗಾನಹಳ್ಳಿ ಶಿವಶಂಕರ್‌ ಇದ್ದರು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.