ಕೆರೆಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ


Team Udayavani, Dec 10, 2018, 3:19 PM IST

bg-2.jpg

ದೊಡ್ಡಬಳ್ಳಾಪುರ: ನಗರದ ಮುತ್ತೂರು ಕೆರೆ ಅಭಿವೃದ್ಧಿಗೆ ರಿಟ್ಟಲ್‌ ಇಂಡಿಯಾ ಕಂಪನಿ ಉದ್ಯೋಗಿಗಳು ದೇಣಿಗೆ ನೀಡಲು ಮುಂದೆ ಬಂದಿರುವುದು ಸಂತಸ ತಂದಿದೆ. ನಮ್ಮೂರಿನ ಕೆರೆಗಳು ಉಳಿಯಲು, ಅಭಿವೃದ್ಧಿ ಹೊಂದಲು ಸಾರ್ವಜನಿಕರ ಸಹಕಾರ ತೀರಾ ಅಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ ಹೇಳಿದರು.

ನಗರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ರಿಟ್ಟಲ್‌ ಇಂಡಿಯಾ ಕಂಪನಿಯಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆರ್ಥಿಕ ನೆರವು: ಮುತ್ತೂರು ಕೆರೆಯನ್ನು ಸಾರ್ವಜನಿಕರ ಸಹಕಾರದಿಂದಲೇ ಹೂಳೆತ್ತಿ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಶೇ.60ರಷ್ಟು ಕಾಮ ಗಾರಿ ಮುಕ್ತಾಯವಾಗಿದೆ. ಕೆರೆಯ ಸುತ್ತಲೂ ವಾಯು ವಿಹಾರಕ್ಕೆ ಕಿರು ರಸ್ತೆ ನಿರ್ಮಿಸುವುದು, ಕೆರೆಯಲ್ಲಿ ನಡುಗಡ್ಡೆ ಅಭಿವೃದ್ಧಿ ಸೇರಿದಂತೆ ಒಂದಿಷ್ಟು ಮುಖ್ಯ ಕೆಲಸಗಳು ಬಾಕಿ ಉಳಿದಿವೆ. ಈ ಕೆಲಸಗಳಿಗೆ ಆರ್ಥಿಕ ನೆರವು ನೀಡಲು ರಿಟ್ಟಲ್‌ ಇಂಡಿಯಾ ಕಂಪನಿಯ 1,200 ಜನ ಉದ್ಯೋಗಿಗಳು ತಮ್ಮ ಸಂಬಳದಲ್ಲಿ ತಲಾ 1,000 ರೂ. ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. 

ಸ್ಥಳೀಯರ ಸಹಕಾರ: ಈಗಾಗಲೇ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಕಾರಹಳ್ಳಿ, ಕನ್ನಮಂಗಲದಲ್ಲಿ ಚಿಕ್ಕ ಸಿಹಿ ನೀರಿನ ಕೆರೆ, ನೆಲಮಂಗಲ ತಾಲೂಕಿನ ಬೇಗೂರು, ಕೆಂಪತಿಮ್ಮನಹಳ್ಳಿ ಕೆರೆಗಳ ಅಭಿವೃದ್ಧಿಗೂ ಸ್ಥಳೀಯರೇ ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.  

ಕೆರೆ, ಕುಂಟೆಗಳನ್ನು ಉಳಿಸಿಕೊಳ್ಳಿ: ನಮ್ಮ ಹಿರಿಯರು ಕೆರೆಗಳನ್ನು ಕಟ್ಟಿಸಿದರು. ಆದರೆ, ಇಂದು ನಮ್ಮ ಕಣ್ಣ ಮುಂದೆಯೇ ಕೆರೆಗಳು ಹೂಳು ತುಂಬಿಕೊಂಡು, ಇತರೇ ಅಭಿವೃದ್ಧಿ ಹೆಸರಿನಲ್ಲಿ ಕಣ್ಮರೆಯಾಗುತ್ತಿವೆ. ಇರುವ ಒಂದಿಷ್ಟು ಕೆರೆಗಳನ್ನು ನಾವು ಉಳಿಸಿಕೊಂಡು ಅವುಗಳಲ್ಲಿ ನೀರು
ನಿಲ್ಲುವಂತೆ ಮಾಡಿಕೊಳ್ಳದೇ ಹೋದರೆ, ಅಂತರ್ಜಲ ಕುಸಿದು ಕುಡಿಯುವ ನೀರು ದೊರೆಯು ವುದಿಲ್ಲ. ಸರ್ಕಾರವೇ ಎಲ್ಲವನ್ನೂ ಮಾಡಿ ಸಲಿ ಎಂದು ಕಾದು ಕುಳಿತುಕೊಳ್ಳದೇ ಕೆರೆ, ಕುಂಟೆ ಉಳಿಸಿ ಕೊಳ್ಳಲು ಮುಂದಾಗಬೇಕೆಂದರು.

ಕೊಡಗು ಸಂತ್ರಸ್ತರಿಗೆ ನೆರವು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂಪನಿ ಉದ್ಯೋಗಿಗಳು ಕೊಡಗು ನೆರೆ ಸಂತ್ರಸ್ತರ ನಿಧಿಗೆ 1,72,500 ರೂ. ಚಕ್‌ ಅನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದರು. ವಿಶೇಷ ಆಹ್ವಾನಿತರಾಗಿ ನಟಿ, ಕಾರ್ಯ ಕ್ರಮಗಳ ನಿರೂಪಕಿ ಅನುಶ್ರೀ, ರಿಟ್ಟಲ್‌ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಭಾರ್ಗವ್‌, ಹಣಕಾಸು ವಿಭಾಗದ ಉಪಾಧ್ಯಕ್ಷ ದೇಬ ಭ್ರತ ಸಿನ್ನ, ಉತ್ಪಾದನಾ ವಿಭಾಗದ ಉಪಾಧ್ಯಕ್ಷ ಚಂದ್ರ ಶೇಖರ ಕಡಬೂರು, ಮಾರಾಟ ವಿಭಾಗದ ಉಪಾಧ್ಯಕ್ಷ ಮ್ಯಾಥ್ಯೂ ಜೇಕಬ…, ರಿಟ್ಟಲ್‌ ಇಂಡಿಯಾ ಕಂಪನಿ ನೌಕರರ
ಸಂಘದ ಅಧ್ಯಕ್ಷ ಸಿ.ಎಸ್‌.ಬಸವರಾಜ…, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.