ಘಾಟಿಯಲ್ಲಿ ಪ್ಲಾಸ್ಟಿಕ್‌ ನಿಷೇಧ; ನಿಯಮ ಉಲ್ಲಂಘಿಸಿದರೆ ಕ್ರಮ

ಲೋಹ, ಮಣ್ಣಿನ ಪಾತ್ರೆಗಳಲ್ಲಿ ತರುವಂತೆ ಭಕ್ತರಿಗೆ ಕಡ್ಡಾಯ ಸೂಚನೆ ನೀಡಬೇಕು.

Team Udayavani, Apr 8, 2022, 5:22 PM IST

ಘಾಟಿಯಲ್ಲಿ ಪ್ಲಾಸ್ಟಿಕ್‌ ನಿಷೇಧ; ನಿಯಮ ಉಲ್ಲಂಘಿಸಿದರೆ ಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಪರಿಸರಕ್ಕೆ ಹಾನಿ ಮಾಡುವ ಹಾಗೂ ಮಾನವ, ಇತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಒಡ್ಡುವ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಸೂಚಿಸಲಾಗಿದ್ದು, ಸ್ಥಳೀಯರು ಸೇರಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌ ಹೇಳಿದರು.

ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್‌ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಕುರಿತು ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಸಭೆ ಯಲ್ಲಿ ಮಾತನಾಡಿ, ಘಾಟಿ ಸುಬ್ರಹ್ಮಣ್ಯ ದೇವಾಲಯದ ಆವರಣ ಹಾಗೂ ಹೊರಗಡೆ, ಧಾರ್ಮಿಕ ಕೇಂದ್ರ, ಪ್ರವಾಸೋದ್ಯಮ ಸ್ಥಳಗಳ ಆವರಣದಲ್ಲಿ ಮತ್ತು ಹೊರಗಡೆ ನಿಷೇಧಿತ ಪ್ಲಾಸ್ಟಿಕ್‌ ನಿಂದ ತಯಾರಿಸಲಾದ ಕ್ಯಾರಿಬ್ಯಾಗ್‌, ತಟ್ಟೆ, ಲೋಟ, ಬಟ್ಟಲು, ಬ್ಯಾನರ್‌, ಬಂಟಿಂಗ್ಸ್ ಬಳಕೆ ಮಾಡಬಾರದು ಎಂದರು.

ಜಿಲ್ಲಾಡಳಿತಕ್ಕೆ ಸಹಕರಿಸಿ: ದೇವಾಲಯಕ್ಕೆ ಪೂಜಾ ಸಾಮಗ್ರಿ ಪ್ಲಾಸ್ಟಿಕ್‌ ಚೀಲಗಳಲ್ಲಿ ತರದಂತೆ ಭಕ್ತರಿಗೆ ಸೂಚನೆ ನೀಡಬೇಕು. ದೇವರ ಪೂಜೆ ಮತ್ತು ಬಟ್ಟೆ, ಕಾಗದದ ಕೈಚೀಲಗಳಲ್ಲಿ, ಸ್ಟೀಲ್‌ ಅಥವಾ ಇನ್ನಿತರ ಲೋಹ, ಮಣ್ಣಿನ ಪಾತ್ರೆಗಳಲ್ಲಿ ತರುವಂತೆ ಭಕ್ತರಿಗೆ ಕಡ್ಡಾಯ ಸೂಚನೆ ನೀಡಬೇಕು.

ಹಬ್ಬ ಹರಿದಿನಗಳಲ್ಲಿ ಅಥವಾ ವಿಶೇಷ ಸಂದರ್ಭಗಳಲ್ಲಿ ಜಾಹೀರಾತು ನೀಡಲು ಪ್ಲಾಸ್ಟಿಕ್‌ನಿಂದ ತಯಾರಿಸಿದ ಬ್ಯಾನರ್‌ ಮತ್ತು ಬಂಟಿಂಗಗ್ಸ್ ಬಳಸದಂತೆ ಕ್ರಮ
ವಹಿಸಬೇಕು. ಪ್ಲಾಸ್ಟಿಕ್‌ನಿಂದ ತಯಾರಿಸಿದ ಅಲಂಕಾರಿಕ ಹೂವು, ತೋರಣ ಮುಂತಾದವು ಗಳನ್ನು ಬಳಸದಂತೆ ಜಾಗ್ರತೆ ವಹಿಸಬೇಕು. ದೇವಾಲಯಕ್ಕೆ ಬರುವ ಭಕ್ತರು ಪ್ಲಾಸ್ಟಿಕ್‌ ನಿಷೇಧಕ್ಕೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಿದೆ. ಇಲ್ಲವಾದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಾಹನ ತಪಾಸಣೆ ನಡೆಸಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೆ.ಎಂ.ರಮೇಶ್‌ ಮಾತನಾಡಿ, ದೇವಾಲ ಯಕ್ಕೆ ಬರುವ ಭಕ್ತರಿಗೆ ಪ್ಲಾಸ್ಟಿಕ್‌ ಬಳಸ ದಂತೆ ಅಧಿಕಾರಿಗಳು ಸಲಹೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್  ಗಳಲ್ಲಿಯೇ ವಾಹನ ತಪಾಸಣೆ ನಡೆಸಿ ಪ್ಲಾಸ್ಟಿಕ್‌ ವಸ್ತುಗಳನ್ನು ದೇವಾ ಲಯಕ್ಕೆ ಕೊಂಡೊಯ್ಯದಂತೆ ಸೂಚಿಸುವು ದು. ದಂಡ ವಿಧಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕಿದೆ. ದೇವಾಲಯದ ಆವರಣದಲ್ಲಿನ ವರ್ತಕರು ಪೂಜಾ ಸಾಮಗ್ರಿ ಪ್ಲಾಸ್ಟಿಕ್‌ ಚೀಲ ಹೊರತಾಗಿ  ಬಟ್ಟೆ ಬ್ಯಾಗ್‌ಗಳಲ್ಲಿ ಹಾಕಿ ನೀಡಬೇಕು ಎಂದರು. ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪರಿ ಸರ ಇಲಾಖೆಯ ವಿಶಾಲಾಕ್ಷಿ, ಮೇಲಿನಜೂಗಾನಹಳ್ಳಿ ಗ್ರಾಪಂ ಉಪಾಧ್ಯಕ್ಷ ವಾಸು, ಪಿಡಿಒ ಗಂಗ ಬೈರಪ್ಪ ಸೇರಿ ದೇವಾಲಯದ ಅಧಿಕಾರಿಗಳು,
ವರ್ತಕರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.