ರಾಜಕೀಯ ಜನಸೇವೆಯೇ ಹೊರತು, ವ್ಯಾಪಾರವಲ್ಲ; ಸಚಿವ ಎಂಟಿಬಿ

ತಮ್ಮ ಬಳಿ ಬರುವ ಅವಶ್ಯಕತೆ ಇರುವವರಿಗೆ ಪ್ರಾಮಾಣಿಕವಾಗಿ ಸೇವೆಯನ್ನು ಮಾಡಬೇಕು

Team Udayavani, Jun 30, 2022, 11:40 AM IST

ರಾಜಕೀಯ ಜನಸೇವೆಯೇ ಹೊರತು, ವ್ಯಾಪಾರವಲ್ಲ; ಸಚಿವ ಎಂಟಿಬಿ

ಹೊಸಕೋಟೆ: ರಾಜಕಾರಣಿಗಳು ಎಷ್ಟು ವರ್ಷ ಚುನಾಯಿತರಾಗಿ ಅಧಿಕಾರವನ್ನು ಅನುಭವಿಸಿದ್ದೇವೆ ಎನ್ನುವುದಕಿಂತ, ನಮ್ಮ ಅಧಿಕಾರದ ಅವಧಿಯಲ್ಲಿ ಜನತೆಗೆ ಎಷ್ಟು ಪ್ರಮಾಣಿಕವಾಗಿ ಸೇವೆ ಮಾಡಿದ್ದೇವೆ ಎನ್ನುವುದು ಮುಖ್ಯ. ರಾಜಕೀಯ ಜನಸೇವೆಯೇ ಹೊರತು ಅದು ವ್ಯಾಪಾರವಲ್ಲ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ ತಿಳಿಸಿದರು.

ನಗರದ ದಿ ಟೌನ್‌ ಕೋ-ಆಪರೇಟೀವ್‌ ಬ್ಯಾಂಕ್‌ ನಿಂದ ಷೇರುದಾರರ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜಕಾರಣಿಗಳು ಮಾಡುವ ಭಾಷಣಕ್ಕೂ ಅವರ ನಡವಳಿಕೆಗಳಿಗೂ ಸಾಕಷ್ಟು ವ್ಯತ್ಯಾಸಗಳಿದ್ದು ಅದನ್ನು ಸರಿಪಡಿಸಿಕೊಳ್ಳಬೇಕು.ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ತಮ್ಮ ಅಧಿಕಾರದ ಅವಧಿಯಲ್ಲಿ ತಮ್ಮ ಬಳಿ ಬರುವ ಅವಶ್ಯಕತೆ ಇರುವವರಿಗೆ ಪ್ರಾಮಾಣಿಕವಾಗಿ ಸೇವೆಯನ್ನು ಮಾಡಬೇಕು ಎಂದರು.

ಸಾಲ ಮರುಪಾವತಿ ಮಾಡಿ: ಟೌನ್‌ ಕೋ-ಆಪರೇಟೀವ್‌ ಬ್ಯಾಂಕ್‌ ಯಾವುದೇ ಒಂದು ಕುಟುಂಬಕ್ಕೆ ಸೇರಿದ ಬ್ಯಾಂಕ್‌ ಆಗಿರದೆ, ಅದು ಜನತೆಯ, ಷೇರುದಾರರ ಬ್ಯಾಂಕ್‌ ಆಗಿದ್ದು, ಎಲ್ಲಾ ಷೇರುದಾರರ ಸಹಕಾರದಿಂದ ಬ್ಯಾಂಕ್‌ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇಲ್ಲಿಂದ ಸಾಲ ಪಡೆದ ಹಲವರು ಕೊರೊನಾ ಕಾರಣದಿಂದ ಬ್ಯಾಂಕ್‌ಗೆ ಸರಿಯಾದ ಸಮಯದಲ್ಲಿ ಸಾಲವನ್ನು ಮರುಪಾವತಿ ಮಾಡದಿರುವುದು ಸಮಸ್ಯೆಯಾಗಿದ್ದು, ಅದನ್ನು ಅರಿತು ಸಾಲ ಮರುಪಾವತಿ ಮಾಡಿದರೆ ಷೇರುದಾರರಿಗೆ ಲಾಭಾಂಶವನ್ನು ನೀಡಬಹುದಾಗಿದೆ ಎಂದರು.

ವಿದ್ಯಾಭ್ಯಾಸಕ್ಕೆ ಸಹಕಾರಿ: ಬ್ಯಾಂಕ್‌ನ ಅಧ್ಯಕ್ಷ ಬಾಲಚಂದ್ರನ್‌ ಮಾತನಾಡಿ, ಇಂದು ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ಮಕ್ಕಳು ತಮ್ಮ ತಂದೆ, ತಾಯಿಗಳ ಬಗ್ಗೆ ಹೆಮ್ಮೆ ಪಡಬೇಕು. ಕಾರಣ ಅವರ ಪರಿಶ್ರಮದಿಂದ ಇಂದು ಮಕ್ಕಳು ವಿದ್ಯಾಭ್ಯಾಸವನ್ನು ಮಾಡಲು ಸಹಕಾರಿಯಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಪ್ರತಿಭಾ ಪುರಸ್ಕಾರವನ್ನು ಅದ್ಧೂರಿಯಾಗಿ ಮಾಡಲಾಗಲಿಲ್ಲ ಎಂದರು. ಬ್ಯಾಂಕ್‌ನ ಉಪಾಧ್ಯಕ್ಷೆ ಜೀನತ್‌ ಉನ್ನೀಸಾ, ನಿರ್ದೇಶಕ ನವೀನ್‌, ಕೃಷ್ಣಪ್ಪ, ರಾಜಶೇಖರ್‌, ನಾಗರಾಜ್‌, ಕಿರಣ್‌ ಕುಮಾರ್‌, ಬ್ಯಾಂಕ್‌ನ ಆಡಳಿತ ವ್ಯವಸ್ಥಾಪಕ ಆಂಜಿನಪ್ಪ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.