ಕೆರೆಯಂಗಳದಲ್ಲಿ ಕೋಳಿ ತ್ಯಾಜ್ಯ


Team Udayavani, Jul 23, 2023, 3:07 PM IST

ಕೆರೆಯಂಗಳದಲ್ಲಿ ಕೋಳಿ ತ್ಯಾಜ್ಯ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ನಾಗರಕೆರೆಯ ಅಂಗಳದಲ್ಲಿ ಕೋಳಿ ಮಾಂಸದ ತ್ಯಾಜ್ಯ ಹಾಗೂ ಕಟ್ಟಡ ಹಾಗೂ ಇತರೆ ತ್ಯಾಜ್ಯಗಳನ್ನು ಹಾಕಲಾಗುತ್ತಿದ್ದು, ಪರಿಸರ ಪ್ರೇಮಿ ಗಳ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಡಿ.ಕ್ರಾಸ್‌ ರಸ್ತೆ ಸಮೀಪದ ಕೆರೆಯಂಗಳದಲ್ಲಿ ತ್ಯಾಜ್ಯ ವಸ್ತುಗಳನ್ನು ಹಾಕುವ ಪರಿಪಾಠ ಹೆಚ್ಚಾಗಿದೆ.

ಇತಿಹಾಸ ಪ್ರಸಿದ್ಧ ಕೆರೆ: ದೊಡ್ಡಬಳ್ಳಾ ಪುರದ ನಾಗರ ಕೆರೆಗೆ ಸುಮಾರು 500 ವರ್ಷಗಳ ಇತಿಹಾಸವಿದೆ. ವ್ಯಾಸ ರಾಜರ ಶಿಷ್ಯ ನಾಗಪ್ಪ ತಾನು ವಾಸ ವಾಗಿದ್ದ ಕೆರೆಯನ್ನು ವ್ಯಾಸ ರಾಜ ರಿಗೆ ಗುರು ಕಾಣಿಕೆಯಾಗಿ ನೀಡಿ, ಕೆರೆಯ ಉಸ್ತುವಾರಿ ಯನ್ನು ಸಹ ನೋಡಿ ಕೊಂಡನು. ಇದನ್ನು ಶ್ಲಾಘಿಸಿದ ವ್ಯಾಸ ರಾಜರು ಈ ಕೆರೆಗೆ ನಾಗಪ್ಪಯ್ಯನ ಕೆರೆ ಎಂದು ನಾಮಕರಣ ಮಾಡಿದರು.

ಅದು ಕ್ರಮೇಣ ನಾಗಪ್ಪ ಕೆರೆಯಾಗಿ ಹಾಗೂ ಈ ಕೆರೆಯಲ್ಲಿ ನಾಗರ ಹಾವು ಗಳು ಹೆಚ್ಚಾಗಿ ಇದ್ದುದರಿಂದ ನಾಗರ ಕೆರೆಯಾಗಿ ಪ್ರಚ ಲಿತವಾಯಿ ತೆಂದು ತಿಳಿದು ಬರುತ್ತದೆ. ಕೆರೆಯ ಜಲಾನಯನ ಪ್ರದೇಶ 7.60 ಚದರ ಕಿಮೀ. ಜಲಾವೃತ ಪ್ರದೇಶ 190 ಎಕರೆ, ಕೆರೆ ಏರಿಯ ಉದ್ದ 1194 ಮೀಟರ್‌. ಕೆರೆಯ ಅಚ್ಚುಕಟ್ಟು 60.70 ಹೆಕ್ಟೇರ್‌ ಆಗಿದ್ದು, 20 ಎಕರೆಗೂ ಹೆಚ್ಚು ಎಕರೆ ಒತ್ತುವರಿಯಾಗಿದೆ ಎನ್ನಲಾಗಿದೆ. ನಾಗರ ಕೆರೆ ಸಣ್ಣ ನೀರಾ ವರಿ ಕೆರೆಯಾಗಿದ್ದು, ನಗರಸಭಾ ವ್ಯಾಪ್ತಿಗೆ ಒಳಪಡುತ್ತದೆ. ಅರ್ಕಾವತಿ ನದಿ ಹರಿಯುವ ಪ್ರದೇ ಶದ ಮೊದಲ ದೊಡ್ಡಕೆರೆಯಾಗಿದೆ.

ನಾಗರಕೆರೆಯ ಸ್ಥಿತಿ: ನಾಗರಕೆರೆ ಅಂಗಳದಲ್ಲಿ ಹಳೆ ಮನೆಗಳನ್ನು ಕಿತ್ತುಹಾಕಿ ಉಳಿದಿ ರುವ ಸಿಮೆಂಟ್‌ ಇಟ್ಟಿಗೆ, ತ್ಯಾಜ್ಯ ಮಣ್ಣಿನ ರಾಶಿಗಳನ್ನೇ ಕಾಣ ಬಹುದಾಗಿದೆ. ಕೆರೆಯಲ್ಲಿ ಹೂಳು ತುಂಬಿ ಕೊಂಡಿದ್ದು, ಗಿಡಗಂಟೆಗಳು ಹೇರಳವಾಗಿ ಬೆಳೆದಿವೆ. ನೀರು ನಿಲ್ಲಲು ಆಸ್ಪದವೇ ಇಲ್ಲದಂತಾಗಿದೆ. ನಗರದ ವಿವಿದೆಡೆಗಳಿಂದ ಕೋಳಿ ಮಾಂಸದ ತ್ಯಾಜ್ಯಗಳನ್ನು ತಂದು ಕೆರೆಯಲ್ಲಿ ಸುರಿಯ ಲಾಗುತ್ತಿದೆ. ಇದರಿಂದ ಕೆಟ್ಟ ವಾಸನೆ ಸುತ್ತಮುತ್ತಲ ಪ್ರದೇಶಕ್ಕೆ ಆವರಿಸಿಕೊಂಡು ಪರಿಸರ ಕಲುಷಿತ ವಾಗುತ್ತಿದೆ. ಇದಲ್ಲದೇ ಕಸ ಕಡ್ಡಿಗಳು ಸಹ ಕೆರೆಗೆ ಸೇರುತ್ತಿದೆ. ಪರಿಸರಾಸಕ್ತರ ಒತ್ತಾಯಕ್ಕೆ ಮಣಿದ ನಗರಸಭೆಯಿಂದ ನಾಗರಕೆರೆಯ ವಾಕಿಂಗ್‌ ಪಾಥ್‌ ರಸ್ತೆ, ಹಾಗೂ ಕೆರೆಯಂಗಳದಲ್ಲಿ ಇತ್ತೀಚೆಗಷ್ಟೇ ಕೆರೆಯಲ್ಲಿ ಹಾಗೂ ಸುತ್ತಮುತ್ತ ಯಾವುದೇ ಕಸ, ತ್ಯಾಜ್ಯಗಳನ್ನು ಹಾಕದಂತೆ ಸೂಚನಾ ಫಲಕ ಹಾಕಿದೆ. ಸೂಚನಾ ಫಲಕಗಳು ಹಾಕಿದ್ದರೂ ಕ್ಯಾರೆ ಎನ್ನದೆ ಕಸ ಸುರಿಯಲಾಗುತ್ತಿದೆ. ನಗರಸಭೆ ಈ ಬಗ್ಗೆ ಕ್ರಮ ಕೈಗೊಂಡು ತಪ್ಪಿ ತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎನ್ನುತ್ತಾರೆ ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿ ಸದಸ್ಯ ನಾಗರಾಜ್‌.

ಪೊಲೀಸ್‌ ಬೀಟ್‌ ವ್ಯವಸ್ಥೆ ಮಾಡಿ: ನಾಗರಕೆರೆಗೆ ಹೊಂದಿ ಕೊಂಡಂತೆ ಆಂಜನೇಯ ದೇವಾನ ಲಯ, ಕೋಡಿ ಪ್ರದೇಶಗಳಲ್ಲಿ ಸಂಜೆಯಾಗುತ್ತಿದ್ದಂತೆ, ಮೋಜು, ಮಸ್ತಿ ಪಾರ್ಟಿಗಳು ನಡೆಯುತ್ತಿದ್ದು, ಇವರು ಮದ್ಯದ ಬಾಟಲ್‌ ಹಾಗೂ ಇತರೆ ಕಸವನ್ನು ಸುರಿಯುತ್ತಿದ್ದಾರೆ. ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯದಂತೆ ಪೊಲೀಸ್‌ ಬೀಟ್‌ ವ್ಯವಸ್ಥೆ ಮಾಡಬೇಕಿದೆ ಎನ್ನುತ್ತಾರೆ ನಾಗರಕೆರೆಗೆ ಬರುವ ವಾಯು ವಿಹಾರಿಗಳು.

ತಿಂಗಳಿಗೊಮ್ಮೆ ಸಭೆ ಕರೆಯಿರಿ: ನಗರದ ಜೀವನಾಡಿ ಯಾದ ನಾಗರಕೆರೆ ಕಲುಷಿತವಾಗುತ್ತಿದ್ದು, ಅಭಿವೃದ್ಧಿ ಕಾಣದೇ ದಿನೇ ದಿನೇ ನಿರ್ಲಕ್ಷ್ಯಕ್ಕೊಳಗಾಗುತ್ತಿದೆ. ಈ ದಿಸೆಯಲ್ಲಿ ನಾಗರಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಸಾರ್ವಜನಿಕರ ಸಭೆ ನಡೆಸುವ ಮೂಲಕ ಹೆಚ್ಚಿನ ಒತ್ತು ನೀಡಬೇಕು ಎಂದು ತಹಶೀ ಲ್ದಾರರಿಗೆ ಮನವಿ ಮಾಡಲಾಗಿದೆ. ಈ ಹಿಂದೆ ಕರೆದಿದ್ದ ಸಭೆ ಅಪೂರ್ಣವಾಗಿ ಯಾವುದೇ ಗಂಭೀರ ಚರ್ಚೆ ಯಾಗಲಿಲ್ಲ. ಇಲ್ಲಿನ ಜೀವ ವೈವಿಧ್ಯತೆಯ ಕುರಿತು ಈಗಾಗಲೇ ಸಮೀಕ್ಷೆ ನಡೆಸಿ ವರದಿಯನ್ನು ನಗರಸಭೆಗೆ ಸಲ್ಲಿಸಲಾಗಿದೆ.

ಕೆರೆ ಅಂಗಳದಲ್ಲಿಯೇ ಹಾಕಲಾಗಿರುವ ಒಳ ಚರಂಡಿ ಪೈಪ್‌ಲೈನ್‌ ಗಳನ್ನು ತೆರವು ಮಾಡುವ ಪ್ರಕ್ರಿಯೆಯಲ್ಲಿ ಇದುವರೆಗೂ ಯಾವುದೇ ರೀತಿಯ ಪ್ರಗತಿಯು ಕಂಡಿಲ್ಲ. ಪರಿಸರ ನಿಯಂ ತ್ರಣ ಮಂಡಳಿ ವತಿಯಿಂದ ಕೆರೆಯ ನೀರಿನ ಸ್ವತ್ಛತೆ ಕುರಿತಂತೆ ನಿರಂತರವಾಗಿ ಪರೀಕ್ಷೆ ನಡೆಸುವಂತಾಗಬೇಕು. ಕೆರೆಯ ಸುತ್ತಲು ನಡೆದಿರುವ ಒತ್ತುವರಿ ತೆರವಿಗೆ ಆದ್ಯತೆ ಮೇರೆಗೆ ಹೆಚ್ಚಿನ ಒತ್ತು ನೀಡಬೇಕು ಎನ್ನುತ್ತಾರೆ ನಾಗರಕೆರೆ ಜೀವ ವೈವಿಧ್ಯತೆ ಸಂರಕ್ಷಣಾ ಸಮಿತಿಯ ಚಿದಾನಂದ್‌, ಯಲ್ಲಪ್ಪ.

ನಾಗರೆಕೆರೆಯ ಏರಿಯನ್ನು ಆಗಾಗ ಸ್ವತ್ಛ ಮಾಡಲಾಗುತ್ತಿದೆ. ಕೆರೆಯಲ್ಲಿ ಹಾಗೂ ಸುತ್ತಮುತ್ತ ಯಾವುದೇ ಕಸ, ತ್ಯಾಜ್ಯಗಳನ್ನು ಹಾಕದಂತೆ ಸೂಚನಾ ಫಲಕ ಹಾಕಿದೆ. ಕಸ ಹಾಕಲು ಕಸದ ಡಬ್ಬಿಗಳನ್ನು ಸಹ ಅಳವಡಿಸಲಾಗಿದೆ. ಉಲ್ಲಂಘನೆ ಮಾಡುವವರ ಮೇಲೆ ದೂರು ನೀಡಲು ಮೊಬೈಲ್‌ ಸಂಕ್ಯೆಗಳನ್ನು ಹಾಕಲಾಗಿದೆ. ಸಾರ್ವಜನಿಕರು ಈ ಬಗ್ಗೆ ನಗರಸಭೆಗೆ ದೂರು ನೀಡಬಹುದಾಗಿದೆ. ಕೆರೆಯಲ್ಲಿ ಕಸ ಹಾಕುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ●ಈರಣ್ಣ, ನಗರಸಭೆಯ ಪರಿಸರ ವಿಭಾಗದ ಸಹಾಯಕ ಆಯುಕ್ತ

– ಡಿ.ಶ್ರೀಕಾಂತ

ಟಾಪ್ ನ್ಯೂಸ್

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.