Praying for Rain: ಮಳೆಗಾಗಿ ದೈವಕ್ಕೆ ಮೊರೆಹೋದ ಜನತೆ


Team Udayavani, Aug 29, 2023, 3:30 PM IST

Praying for Rain: ಮಳೆಗಾಗಿ ದೈವಕ್ಕೆ ಮೊರೆಹೋದ ಜನತೆ

ದೊಡ್ಡಬಳ್ಳಾಪುರ:  ತಾಲೂಕಿನಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಮಳೆಗಾಗಿ ಹಾತೊರೆಯುತ್ತಿದ್ದಾರೆ. ಹೂಯ್ಯೋ ಹೋಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆ ತೋಟಕೆ ನೀರಿಲ್ಲ. ಮಳೆರಾಯ ಕೃಪೆ ತೋರು ಎಂದು ಹಾಡುತ್ತಾ ಮಳೆರಾಯನನ್ನು ಪ್ರಾರ್ಥಿಸುವ ವಿವಿಧ ಆಚರಣೆಗಳು ತಾಲೂಕಿನಲ್ಲಿ ನಡೆಯುತ್ತಿವೆ.

ಮಳೆ ಸಾಲದು: ಕೃಷಿ ಇಲಾಖೆ ಅಂಕಿ ಅಂಶದಂತೆ ಜನವರಿಯಿಂದ ಆಗಸ್ಟ್‌ ತಿಂಗಳ ಅಂತ್ಯಕ್ಕೆ ವಾಡಿಕೆ ಮಳೆ 393 ಮಿ.ಮೀ ಆಗಬೇಕಿದ್ದು, 363 ಮಿ.ಮೀ ಮಳೆ ಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ವಾಡಿಕೆ ಮಳೆ 110 ಮಿ.ಮೀ ಆಗಬೇಕಿದ್ದು, ಬರೀ 25 ಮಿ.ಮೀ         ಮಾತ್ರ ಮಳೆ ಬಿದ್ದಿದೆ.

ಒಣಗಿದ ಬೆಳೆಗಳು: ತಾಲೂಕಿನಲ್ಲಿ ಮಳೆ ಆಶ್ರಯ ಬೆಳೆಗಳಾದ ರಾಗಿ, ಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆ ಗಳು ನೀರಿಲ್ಲದೇ ಒಣಗುತ್ತಿವೆ. ರಾಗಿ ಜೋಳದ ಬಿತ್ತನೆ ಗುರಿಗಿಂತ ಶೇ.80ರಷ್ಟು ಬಿತ್ತನೆ ಯಾಗಿವೆ. ಕೆಲವು ಭಾಗಗಳಲ್ಲಿ ಮಳೆ ಪ್ರಮಾಣ ತೀರಾ ಕಡಿಮೆಯಾಗಿದ್ದು, ತಾಲೂಕಿನ ಕಸಬಾ, ಸಾಸಲು, ತೂಬಗೆರೆ ಹೋಬಳಿಗಳ ಕೆಲವು ಗ್ರಾಮ ಗಳಲ್ಲಿ ಮಳೆ ಇಲ್ಲದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಗರಕ್ಕೆ ನೀರುಣಿಸುವ ಜಕ್ಕಲಮಡುಗು ಜಲಾಶಯದಲ್ಲಿಯೂ ನೀರಿನ ಮಟ್ಟ ಕಡಿಮೆಯಿದ್ದು, ಮಳೆ ಬರದಿದ್ದರೆ 4 ತಿಂಗಳಲ್ಲಿ ನೀರು ಖಾಲಿಯಾಗುವ ಸಂಭವವಿದೆ.

ಮಳೆಗಾಗಿ ಹಲವಾರು ಪ್ರಾರ್ಥನೆ: ಮಳೆಗಾಗಿ ಹಲವಾರು ಪ್ರಾರ್ಥನೆಗಳನ್ನು ಮಾಡುವುದು ಜನಪದ ರಲ್ಲಿ ನಡೆದುಕೊಂಡಿರುವ ಸಂಪ್ರದಾಯವಾಗಿದ್ದು, ತಾಲೂಕಿನ ವಿವಿದೆಡೆ ವಿಭಿನ್ನ ಆಚರಣೆಗಳು            ಇತ್ತೀಚೆಗೆ ನಡೆಯುತ್ತಿವೆ.

ಗರುವುಗಲ್ಲಿಗೆ ಕುಂಬಾಭಿಷೇಕ:  ನಗರದ ತೇರಿನಬೀದಿ ವಿಶ್ವೇಶ್ವರಯ್ಯ ವೃತ್ತದ ಬಳಿಯಲ್ಲಿ ಜನತೆ ಮಳೆಗಾಗಿ ಪ್ರಾರ್ಥಿಸಿ, ಮಳೆರಾಯನನ್ನು ಪೂಜಿಸುವ ಆಚರಣೆ ಮಾಡಲಾಯಿತು. ಮೂರು ದಿನಗಳ ಈ ಆಚರಣೆಯಲ್ಲಿ ಮಳೆ ರಾಯನ ಮಣ್ಣಿನ ಮೂರ್ತಿ ಯನ್ನು ಮಾಡಿ, ಮೂರ್ತಿಯನ್ನು ಹೊತ್ತ ಯುವಕರು ಮನೆ ಮನೆಗೆ ತೆರಳಿ ಮಳೆರಾಯನಿಗೆ ಪೂಜೆ ಮಾಡಿ ಸುವುದು ಒಂದು ಭಾಗ. ಈ ವೇಳೆ ಮಳೆರಾಯನ ಮೂರ್ತಿಗೆ ಒಂದು ಕೊಡ ನೀರಿನಿಂದ ಅಭಿಷೇಕ ಮಾಡಲಾಗುತ್ತಿದೆ. ಮತ್ತೂಂದು ದಿನ ನಗರದ ಕಾಲೇಜು ರಸ್ತೆಯಲ್ಲಿನ ಬಯಲು ಬಸವಣ್ಣನಿಗೆ 101 ಕುಂಭಗಳ ಅಭಿಷೇಕ ಮಾಡಿ ಪೂಜಿಸುವುದು ಮತ್ತು ಇದೇ ದಿನ ತೇರಿನಬೀದಿ ವಿಶ್ವೇಶ್ವರಯ್ಯ ವೃತ್ತದ ಬಳಿಯಲ್ಲಿನ ಗರುವುಗಲ್ಲಿಗೆ ಕುಂಬಾಭಿಷೇಕ ಮಾಡುವುದು ಸಂಪ್ರದಾಯವಾಗಿದೆ.

ಕುಂಬಾಭಿಷೇಕ: ತಾಲೂಕಿನ ಉಜ್ಜನಿ ಗ್ರಾಮದಲ್ಲಿನ ಪುಲುಮರಾಯ ದೇವರಿಗೆ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ನಡು ಭಾಗದಲ್ಲಿರುವ ಬಸವಣ್ಣ ದೇವರಿಗೆ 101 ಬಿಂದಿಗೆ ನೀರಿನ ಅಭಿಷೇಕ ಮಾಡುವ ಮೂಲಕ ಗ್ರಾಮಸ್ಥರು ಮಳೆಗಾಗಿ ಮೊರೆಯಿಟ್ಟರು.

ಹೊಲಮಾರಿ ದೇವರಿಗೆ ಪೂಜೆ: ತಾಲೂಕಿನ ಆರೂಢಿ ಗ್ರಾಮದಲ್ಲಿ ಗ್ರಾಮಸ್ಥರು ಮಳೆಗಾಗಿ ಹೊಲಮಾರಿ (ದೇವರ ಹೆಸರು) ದೇವರಿಗೆ ಪೂಜೆ ಸಲ್ಲಿಸಿದರು. ಗ್ರಾಮಸ್ಥರೆಲ್ಲ ಒಟ್ಟುಗೂಡಿ ದವಸ, ಧಾನ್ಯಗಳನ್ನು ಸಂಗ್ರಹಿಸಿ, ಮೂರ್ನಾಲ್ಕು ಟ್ರಾಕ್ಟರ್‌ ಮೂಲಕ ತುಂಬಿಕೊಂಡು ಗ್ರಾಮದ ಹೊರಭಾಗದ ಅರಣ್ಯ ಪ್ರದೇಶದ ಸಮೀಪದಲ್ಲಿರುವ ಹೊಲ ಮಾರಿ ದೇವರ ಗುಡಿ ಬಳಿ ತೆರಳಿ ಪೂಜೆ ಸಲ್ಲಿಸುತ್ತಾರೆ. ಇದೇ ವೇಳೆ ಎಲ್ಲರೂ ಸೇರಿ ಸಹ ಭೋಜನ ನಡೆಸುತ್ತಾರೆ. ಈ ಆಚರಣೆಯಲ್ಲಿ ಗ್ರಾಮದ ಸಾವಿರಾರು ಮಂದಿ ಭಾಗವಹಿಸುತ್ತಾರೆ.

ಸೂರ್ಯ, ಚಂದ್ರನ ಚಿತ್ರ ಬಿಡಿಸಿ ಪೂಜೆ : 

ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ, ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ರೈತರು ಪ್ರಾರ್ಥನೆ ಸಲ್ಲಿಸಿದರು. ಸಕಾಲಕ್ಕೆ ಮಳೆಯಾಗದಿದ್ದಾಗ ಮೂರು ದಿನಗಳ ಕಾಲ ರಾತ್ರಿ ವೇಳೆ ಊರಿನ ಗ್ರಾಮಸ್ಥರೆಲ್ಲಾ ಒಂದೆಡೆ ಸೇರಿ ಸೂರ್ಯ-ಚಂದ್ರರಿಗೆ ಪೂಜೆ ಮಾಡಿ ಮಳೆ ಸುರಿಸುವಂತೆ ವರುಣ ದೇವನ ಮೊರೆ ಹೋಗಲಾಗುತ್ತದೆ. ರೈತನ ಸಂಕಷ್ಟದ ಕೂಗು ಮಳೆರಾಯನಿಗೆ ಮುಟ್ಟುವ ಹಾಗೆ ಜಾನಪದ ಗೀತೆ, ಪದಗಳನ್ನು ಹಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದರು. ಗ್ರಾಮದ ಉದ್ಭವ ಬಸವಣ್ಣ ದೇವರಿಗೆ ಊರಿನ ಗ್ರಾಮಸ್ಥರೆಲ್ಲಾ ಸೇರಿ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಯಿ ಹೊಡೆದು ಮಳೆಗಾಗಿ ಪ್ರಾರ್ಥಿಸಿದ್ದಾರೆ.

ಮಕ್ಕಳಿಗೆ ಚಂದಮಾಮ ಮದುವೆ:

ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಮಳೆ ಬರಲೆಂದು ಇಬ್ಬರು ಗಂಡು ಮಕ್ಕಳಿಗೆ ಸಾಂಕೇತಿಕವಾಗಿ ಚಂದಮಾಮ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿ ವರುಣ ದೇವರನ್ನು ಪ್ರಾರ್ಥಿಸಿದ್ದಾರೆ. ಮದುವೆಯಲ್ಲಿ ವರ ಶಶಾಂಕ್‌, ಹಾಗೂ ಅರವಿಂದ್‌ ವಧುವಾಗಿ ಇಬ್ಬರು ಗಂಡು ಮಕ್ಕಳನ್ನೇ ಆಯ್ಕೆ ಮಾಡಲಾಗಿತ್ತು. ವಧುವಾಗಿ ವರನಾಗಿ ಸಜ್ಜಾಗಿ ಪೂಜೆಗೆ ಕುಳಿತಿದ್ದರು. ನಂತರ ಎಲ್ಲಾ ಗ್ರಾಮ ಸ್ಥರು ಒಂದೆಡೆ ಸೇರಿ ಕಲೆತು ಮಳೆರಾಯನ ಕುರಿತು ಹಾಡುಗಳನ್ನು ಹಾಡಿದರು. ನೃತ್ಯ ಮಾಡಿ ಈಗಲೇ ಬಾರೋ ಮಳೆರಾಯ ಎಂದು ಕರೆದಿದ್ದು ವಿಶೇಷವಾಗಿತ್ತು.

ಕಳೆದ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿ ಕೆರೆ ಕುಂಟೆಗಳು ತುಂಬಿ ದ್ದವು. ವಿಶ್ವೇಶ್ವರಯ್ಯ ವೃತ್ತ, ಆಲಹಳ್ಳಿ ತಿಪ್ಪಾಪುರ ಕಡೆ ಹೈನುಗಾರಿಕೆ ಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ರಾಸುಗಳಿಗೆ ಈಗಲೂ ಮೇವಿನ ಕೊರತೆ ಯಿದೆ. ಮಳೆ ರಾಯನನ್ನು ಆರಾಧಿಸುವ ಸಂಪ್ರದಾಯ ನಡೆದುಕೊಂಡು ಬರುತ್ತಿದೆ-ಮಂಜುನಾಥ್‌, ಚಂದ್ರಶೇಖರ, ರೈತರು 

-ಡಿ.ಶ್ರೀಕಾಂತ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.