ಅನ್ಯಾಯದ ವಿರುದ್ದ ಹೋರಾಟಕ್ಕೆ ಮುಂದಾದರೆ ಕ್ರಮ


Team Udayavani, Nov 7, 2019, 3:00 AM IST

anyayada

ನೆಲಮಂಗಲ: ಕೋಟ್ಯಾಂತರ ರೂಪಾಯಿಗಳ ಮೌಲ್ಯದ ಜಮೀನು ದಾಖಲೆಗಳ ಬದಲಾವಣೆಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹಕ್ಕೆ ಅನುಮತಿ ನೀಡಲು ನಿರಾಕರಿಸಿರುವ ತಹಸೀಲ್ದಾರ್‌ ತಾಲೂಕು ಕಚೇರಿ ಆವರಣದಲ್ಲಿ ಹೋರಾಟಮಾಡಿದರೆ ಬಂಧಿಸಿ ಕಾನೂನು ಕ್ರಮವಹಿಸಬೇಕಾಗುತ್ತದೆಂದು ತಹಸೀಲ್ದಾರ್‌ ಶ್ರೀನಿವಾಸಯ್ಯ ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು ಹತ್ತಿಕಲು ಮುಂದಾಗಿದ್ದಾರೆಂದು ಹೋರಾಟಗಾರ ಕೃಷ್ಣಪ್ಪ ಮತ್ತು ಬೆಂಬಲಿಗರು ಆರೋಪಿಸಿದ್ದಾರೆ.

ಹೋರಾಟದ ಹಿನ್ನೆಲೆ: ತಾಲೂಕಿನ ಕೊಡಿಗೆಹಳ್ಳಿ ಮತ್ತು ಕೆಂಚನಪುರ ಗ್ರಾಮದ ಕೆಲ ದಲಿತ ಕುಟುಂಬಗಳಿಗೆ 1961-62ರಲ್ಲಿ ಸರಕಾರದಿಂದ ಜಮೀನನ್ನು ಮಂಜೂರುಮಾಡಿ ಸುಪರ್ಧಿಗೆ ನೀಡಲಾಗಿತ್ತು, ಸರಕಾರದಿಂದ ನೀಡಿದ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡು ಜೀವನ ಸಾಗಿಸುತಿದ್ದರು. 2016-17ರವರೆಗೂ ಸರಕಾರದಿಂದ ಜಮೀನನ್ನು ನೀಡಿದಂತಹ ಫ‌ಲಾನುಭವಿಗಳಾದ ಗಂಗಮ್ಮ, ಹನುಮಯ್ಯ ,ಕೃಷ್ಣಪ್ಪ, ರಾಜಣ್ಣ ಮತ್ತಿತರ ಹೆಸರಿನಲ್ಲಿಯೇ ಪಾಣಿ ಮತ್ತಿತರ ದಾಖಲೆಗಳು ಚಾಲ್ತಿಯಲ್ಲಿದ್ದವು, ಆದರೆ ಕಳೆದ ಎರೆಡು ವರ್ಷಗಳ ಹಿಂದೆ ಬಿ.ಹೆಚ್‌.ರಮೇಶ್‌ ಎಂಬುವರು ತಾಲೂಕಿನ ಕೊಡಿಗೇಹಳ್ಳಿ ಓಬಳಾಪುರ ಮತ್ತಿತರ ಗ್ರಾಮಗಳು ಮೆಗಾಸಿಟಿ ಆಗುತ್ತಿದೆ

ಇದರಿಂದಾಗಿ ನಿಮ್ಮ ಜಮೀನುಗಳು ಸರಕಾರ ವಶಕ್ಕೆ ಪಡೆಯುತ್ತದೆ ಎಂದು ಇಲ್ಲಸಲ್ಲದ ಹುನ್ನಾರಗಳನ್ನು ಮಾಡಿ ನಮ್ಮ ಜಮೀನಿಗಳ ಜನರಲ್‌ಪವರ್‌ ಆಫ್ ಅಟಾರ್ನಿಯನ್ನು ನಮಗೆ ಯಾವುದೇ ಹಣವನ್ನು ನೀಡದೆ ನಮ್ಮ ಜಮೀನುಗಳನ್ನು ಬೆಂಗಳೂರಿನಲ್ಲಿರುವ ಸುಜಾತ, ಡಾ.ಕೃಷ್ಣಮೂರ್ತಿ, ಅಕ್ಷಯ್‌ಕುಮಾರ್‌, ಕೊಡಿಗೇಹಳ್ಳಿ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕೆಲಸಮಾಡುತ್ತಿರುವ ಹನುಂತರಾಯಪ್ಪ ಅವರುಗಳಿಗೆ ಪರಭಾರೆಮಾಡಿದ್ದು ನಮಗೆ ಕೋಟ್ಯಾಂತರ ರೂಗಳ ಅನ್ಯಾಯವಾಗಿರುತ್ತದೆ ಎಂದು ಹೋರಾಟದ ನೇತೃತ್ವ ವಹಿಸಿರುವ ಕೃಷ್ಣಪ್ಪ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನಿನ ಕಥೆಯನ್ನು ಎಳೆಎಳೆಯಾಗಿ ಪತ್ರಿಕೆಗೆ ಬಿಡಿಸಿಟ್ಟರು.

2ನೇ ಭಾರಿ ಹೋರಾಟ: ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ 2014ರ ಜುಲೈ ತಿಂಗಳಿನಲ್ಲಿ ಅಮರಣಾಂತರ ಪುವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು ಅಂದಿನ ತಹಸೀಲ್ದಾರ್‌ ಆಗಿದ್ದ ನರಸಿಂಹಮೂರ್ತಿ ಅವರು ಬಿಹೆಚ್‌. ರಮೇಶ್‌ ಅವರಿಗೆ ಜಿಪಿಎ ರದ್ದುಗೊಳಿಸುವಂತೆ ಸೂಚನೆಯನ್ನು ನೀಡುವ ಮೂಲಕ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಮುಂದಾಗಿದ್ದರು. ಆದರೆ ರಮೇಶ್‌ ಅವರು ಲಕ್ಷಾಂತರ ರೂಪಾಯಿಗಳನ್ನು ನೀಡಿದ್ದೇವೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಕಂದಾಯ ಅಧಿಕಾರಿಗಳಿಗೆ ಆಮಿಷವನ್ನು ತೋರಿ ದಾಖಲೆಗಳನ್ನು ಬದಲಾಯಿಸಿ ಕೊಂಡಿದ್ದಾರೆಂದು ಸತ್ಯಾಗ್ರಹಿಗಳು ದೂರಿದ್ದಾರೆ.

ಒತ್ತಾಯ: ಪಿಟಿಸಿಎಲ್‌ ಕಾಯ್ದೆಯನ್ನು ಉಲ್ಲಂಘನೆಮಾಡಿ ನಮ್ಮ ಜಮೀನುಗಳ ಖಾತೆಗಳನ್ನು ಬದಲಾವಣೆ ಮಾಡಿರುವ ಸರಕಾರಿ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಜರುಗಿಸಬೇಕು, ದಲಿತರಾದ ನಮಗೆ ನ್ಯಾಯ ಒದಗಿಸಬೇಕು, ಮೂರನೇ ದಿನಕ್ಕೆ ಕಾಲಿಟ್ಟಿರುವ ಉಪವಾಸ ಸತ್ಯಾಗ್ರಹ ಸ್ಥಳಕೆಕ ಯಾವ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಭೇಟಿನೀಡಿ ಸಮಸ್ಯೆಯನ್ನು ಆಲಿಸಿಲ್ಲ, ಕೂಡಲೆ ನಮ್ಮ ಸಮಸ್ಯೆಯನ್ನು ಪರಿಹರಿಸಬೇಕೆಂದು ಅಮರಣಾಂತರ ಉಪವಾಸಹಮ್ಮಿಕೊಂಡಿರುವ ಜಮೀನಿನ ಮಾಲೀಕರುಗಳಾಗಿರುವ ನೊಂದ ದಲಿತ ಕುಟುಂಬಗಳು ಸರಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಕ್ರಿಯೆ: ತಹಸೀಲ್ದಾರ್‌ ಶ್ರೀನಿವಾಸಯ್ಯ ಮಾತನಾಡಿ ನಾನು ಯಾರಿಗೂ ಬೆದರಿಕೆಯನ್ನು ಹಾಕಿಲ್ಲ,ಹೋರಾಟ ಪ್ರತಿಯೊಬ್ಬರ ಹಕ್ಕು, ಅವರ ಅತ್ಯಾಗ್ರಹ ಹೋರಾಟಕ್ಕೆ ತಾಲೂಕು ಕಚೇರಿ ಬಳಿಯಲ್ಲಿರುವ ನೇತಾಜಿ ಉದ್ಯಾನವನದಲ್ಲಿ ಅವಕಾಶ ಕಲ್ಪಿಸಲಾಗಿದೆ, ಯಾರಾದರೂ ಕಚೇರಿಗೆ ಬಂದು ಮನವಿಯನ್ನು ಸಲ್ಲಿಸಿದರೆ ದಾಖಲೆಗಳನ್ನು ಪರಿಶೀಲಿಸಿ ಸೂಕ್ತರೀತಿಯಲ್ಲಿ ಕಾನೂರೀತ್ಯಾ ಕ್ರಮವಹಿಸಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.