ರೈತರಿಗೆ ತೊಂದರೆ ಆಗದಂತೆ ರಾಗಿ ಖರೀದಿಸಿ


Team Udayavani, Jan 24, 2023, 9:55 AM IST

tdy-6

ದೇವನಹಳ್ಳಿ: ಜಿಲ್ಲೆಯೂ ಬಯಲು ಸೀಮೆಯಾಗಿದೆ. ಈ ಭಾಗದಲ್ಲಿ ರೈತರು ಹೆಚ್ಚಾಗಿ ರಾಗಿ ಬೆಳೆಯುತ್ತಿದ್ದು, ರೈತರಿಗೆ ತೊಂದರೆ ಆಗದಂತೆ ರಾಗಿ ಖರೀದಿ ಮಾಡಬೇಕು ಎಂದು ಶಾಸಕ ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ಪಟ್ಟಣದ ರಾಗಿ ಖರೀದಿ ಕೇಂದ್ರದಲ್ಲಿ ರೈತರ ರಾಗಿ ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು, ಫೆಬ್ರವರಿಯಲ್ಲಿ ನಡೆಯುವ ಬಜೆಟ್‌ ಅಧಿವೇಶನದಲ್ಲಿ ಹೆಚ್ಚು ರಾಗಿ ಖರೀದಿ ಮಾಡುವುದಕ್ಕೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ತಾಲೂಕಿನಲ್ಲಿ ಸಾವಿರಾರು ರೈತರು ರಾಗಿ ಖರೀದಿಗೆ ನೋಂದಣಿ ಮಾಡಿದ್ದು, ರಾಗಿ ನೀಡಲು ಕೃಷಿಕರು ಬಂದಾಗ ಅಧಿಕಾರಿಗಳು ರೈತರಿಗೆ ತೊಂದರೆ ಆಗದಂತೆ ವ್ಯವಸ್ಥಿತವಾಗಿ ಖರೀದಿ ಮಾಡಬೇಕು ಎಂದು ಹೇಳಿದರು.

ಮಾರ್ಚ್‌ 31ರವರೆಗೂ ಖರೀದಿ: ಸರ್ಕಾರ ರೈತರಿಂದ ಬೆಂಬಲ ಬೆಲೆಗೆ ರಾಗಿ ಖರೀದಿ ಪ್ರಕ್ರಿಯೆ ಅಧಿಕೃತವಾಗಿ ಆರಂಭಿಸಿದ್ದು, ಪ್ರತಿ ಕ್ವಿಂಟಲ್‌ ಗೆ 3,578 ದರ ನಿಗದಿ ಮಾಡಿದೆ. ಈ ಬಾರಿ ಸರ್ಕಾರ ನೀಡಿರುವ ಗೋಣಿ ಚೀಲದಲ್ಲಿ ರಾಗಿ ತುಂಬಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪ್ರಾರಂಭಿಕವಾಗಿ ನಿತ್ಯ 20-30 ರೈತರಿಂದ ರಾಗಿ ಖರೀದಿ ಮಾಡಲಾಗುತ್ತಿದ್ದು, ಹಂತ ಹಂತವಾಗಿ 100-120 ರೈತರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ತಾಲೂಕಿನಲ್ಲಿ 6 ಸಾವಿರ ರೈತರು ನೋಂದಣಿ ಮಾಡಿದ್ದಾರೆ. ಇವರಿಂದ 77 ಸಾವಿರ ಕ್ವಿಂಟಲ್‌ ರಾಗಿಯನ್ನು ಮಾರ್ಚ್‌ 31ರವರೆಗೂ ಖರೀದಿಸಲಾಗುವುದು ಎಂದರು.

ಸಕಾಲಕ್ಕೆ ರೈತರ ಖಾತೆಗೆ ಹಣ ವರ್ಗಾಯಿಸಿ: ಖರೀದಿಯ ನಂತರ ಸಕಾಲಕ್ಕೆ ರೈತರ ಖಾತೆಗಳಿಗೆ ಹಣ ವರ್ಗಾವಣೆಯಾಗುವಂತೆ ಕ್ರಮ ವಹಿಸಬೇಕು. ತಾಲೂಕಿನ ಕೆಲ ರೈತರ ಪಹಣಿಯಲ್ಲಿ ರಾಗಿ ಬೆಳೆ ಬದಲಾಗಿ ದ್ರಾಕ್ಷಿ, ಸಪೋಟಾ ಇತರ ಬೆಳೆಗಳು ನಮೂದಾಗಿರುವುದರಿಂದ ರಾಗಿ ಮಾರಾಟಕ್ಕೆ ತೊಂದರೆಯಾಗಿದೆ. ಕಂದಾಯ ಇಲಾಖೆ ಶೀಘ್ರದಲ್ಲಿ ದೋಷ ಸರಿಪಡಿಸಿ, ರೈತರಿಂದ ರಾಗಿ ಖರೀದಿಗೆ ಅವಕಾಶ ನೀಡುವಂತೆ ತಿಳಿಸಿದ್ದೇನೆ ಎಂದರು.

ರೈತರಿಂದ ನೇರವಾಗಿ ಖರೀದಿ: ರಾಗಿ ಖರೀದಿ ಕೇಂದ್ರಕ್ಕೆ ತೆರಳುವ ರಸ್ತೆ ಗುಂಡಿಗಳಿಂದ ಕೂಡಿದ್ದು, ರೈತರು ರಸ್ತೆ ದುರಸ್ತಿ ಮಾಡಿ ಟ್ರ್ಯಾಕ್ಟರ್‌ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ ಕೂಡಲೇ, ಪುರಸಭೆ ವತಿಯಿಂದ ದುರಸ್ತಿ ಮಾಡಿಸಿ ರೈತರಿಗೆ ಅನುಕೂಲ ಮಾಡಿದರು. ರೈತರು ಈಗಾಗಲೇ ರಾಶಿಯನ್ನು ಹಾಕಿ ರಾಗಿ ಮಾರಾಟವನ್ನು ಮಾಡಲು ಮುಂದಾಗಿದ್ದಾರೆ. ಇತರೆ ಜಿಲ್ಲೆಗಳಲ್ಲಿ ಆಯಾ ಭಾಗದಲ್ಲಿ ಸಿಗುವ ವಸ್ತುಗಳ ಖರೀದಿಗೆ ಸಂಬಂಧಿಸಿದಂತೆ, ಈ ಭಾಗದಲ್ಲಿ ಬಯಲುಸೀಮೆ ಆಗಿರುವುದರಿಂದ ರಾಗಿ ಬೆಳೆಯನ್ನು ಹೆಚ್ಚಾಗಿ ಬೆಳೆಯುವುದರಿಂದ ಇಲ್ಲಿ ರಾಗಿಗೆ ಸರ್ಕಾರ ಬೆಂಬಲ ಬೆಲೆ ನಿಗದಿಗೊಳಿಸಿ ರೈತರಿಂದ ನೇರವಾಗಿ ಖರೀದಿ ಮಾಡುತ್ತಿದೆ ಎಂದರು.

ನಿಗದಿಪಡಿಸಿದ ದಿನದಂದು ರಾಗಿ ತನ್ನಿ: ರಾಗಿ ಖರೀದಿ ಕೇಂದ್ರದ ಅಧಿಕಾರಿ ಅಚ್ಚುತ್‌ ಮಾತನಾಡಿ, ನೋಂದಾಯಿಸಿಕೊಂಡ ರೈತರಿಗೆ ಕೇಂದ್ರದಿಂದಲೇ ಕರೆ ಮಾಡಿ ರಾಗಿ ತರುವಂತೆ ಸೂಚಿಸಲಾಗುವುದು. ಅಂತಹ ರೈತರು ಅಂದು ಕೇಂದ್ರಕ್ಕೆ ಬಂದು ರಾಗಿ ನೀಡಬೇಕು ಎಂದು ತಿಳಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ್‌, ರೈತ ಮುಖಂಡ ಗೋಪಾಲಪ್ಪ, ನಾರಾಯಣಸ್ವಾಮಿ, ಅಶೋಕ್‌, ವಸಂತ್‌, ರಾಗಿ ಖರೀದಿ ಕೇಂದ್ರದ ಸಹಾಯಕ ಬಸಪ್ಪ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.