ಎಲ್ಲೆಡೆ ಅತಿವೃಷ್ಟಿಯಿಂದ ಅನ್ನದಾತರಿಗೆ ಸಂಕಷ್ಟ


Team Udayavani, Sep 6, 2022, 1:04 PM IST

ಎಲ್ಲೆಡೆ ಅತಿವೃಷ್ಟಿಯಿಂದ ಅನ್ನದಾತರಿಗೆ ಸಂಕಷ್ಟ

ದೇವನಹಳ್ಳಿ: ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿ ಸಿದೆ. ಭಾನುವಾರ ರಾತ್ರಿ ಸುರಿದ ಮಳೆಗೆ ಜನ ತತ್ತರಿಸಿಹೋಗಿದ್ದಾರೆ. ಮಳೆಯಿಂದ ಮನೆಗಳ ಕುಸಿತ, ತೋಟಗಳು ಜಲಾವೃತವಾಗಿದ್ದು, ಅನ್ನ ದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಲೂಕಿನ ಅಣ್ಣೇಶ್ವರ ಗ್ರಾಮದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಡೆಗೋಡೆ ಪಕ್ಕ ದಿಂದ ಹಾಗೂ ಕೆಐಎಡಿಸಿ ವತಿಯಿಂದ ಮಳೆ ನೀರು ಮನೆಗಳಿಗೆ ನುಗ್ಗಿ ರಾತ್ರಿಯಿಡಿ ಮಳೆ ನೀರನ್ನು ಕತ್ತಲಿ ನಲ್ಲಿಯೇ ಹೊರಹಾಕುವಂತೆ ಆಗಿದೆ. ಅಣ್ಣೇಶ್ವರ ಗ್ರಾಪಂ ಕಾಲೋನಿಯಲ್ಲಿ ಮುನಿರತ್ನಮ್ಮ ಎಂಬುವವರ ಮನೆ ಮಳೆಯಿಂದ ಕುಸಿದು ಬಿದ್ದು, ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮನೆಯಲ್ಲಿ 9 ಜನ ವಾಸವಾಗಿದ್ದರು. ಅದರಲ್ಲಿ ವಯಸ್ಸಾದ ಅಜ್ಜಿ, ಒಂದು ವರ್ಷದ ಮಗುವಿತ್ತು. ರಾತ್ರಿ 1 ಗಂಟೆಯಲ್ಲಿ ಮನೆಯಿಂದ ಅಜ್ಜಿ, ಮಗು ಇತರರನ್ನು ಸ್ಥಳಾಂತರಿಸ ಲಾಯಿತು.

ಅನಾಹುತದಿಂದ ಮನೆ ಸದಸ್ಯರು ಪಾರಾಗಿದ್ದಾರೆ. ಸ್ಥಳವನ್ನು ತಹಶೀಲ್ದಾರ್‌ ಶಿವರಾಜ್‌, ಅಣ್ಣೇಶ್ವರ ಗ್ರಾಪಂ ಅಧ್ಯಕ್ಷ ವೇಣು ಗೋಪಾಲ್‌, ಗ್ರಾಪಂ ಮಾಜಿ ಅಧ್ಯಕ್ಷರಾದ ಎ.ಚಂದ್ರಶೇಖರ್‌, ಮಂಜು ನಾಥ್‌, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಎ.ಎನ್‌. ವೆಂಕಟೇಶಪ್ಪ, ಗ್ರಾಪಂ ಸದಸ್ಯ ಮುನಿರಾಜಪ್ಪ, ಮುಖಂಡ ರಾದ ಕಾಂತರಾಜು, ಜಗದೀಶ್‌, ವೆಂಕಟೇಶ್‌, ಮನು ಪರಿಶೀಲಿಸಿದರು.

ಸರ್ಕಾರಿ ಪರಿಹಾರ ಸಾಕಾಗಲ್ಲ: ಅಣ್ಣೇಶ್ವರ ಗ್ರಾಮ ದಲ್ಲಿ ಸೇವಂತಿಗೆ, ಸುಗಂದರಾಜ್‌ ಹೂವು ಸೇರಿ ದಂತೆ ವಿವಿಧ ಹೂವು, ಬೆಳೆಗಳು ಜಲಾವೃತವಾಗಿದ್ದು, ರೈತರು ಬಂದ ಬೆಳೆ ಕೈಗೆ ಬರದಂತೆ ಆಗಿದೆ. ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ನೀಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.

ಮಳೆಗೆ ಅಪಾರ ನಷ್ಟ: ತಾಲೂಕಿನ ಅಗಲಕೋಟೆ ಗ್ರಾಮ ದಲ್ಲಿ 4 ಮನೆಗಳು, ಕನ್ನಮಂಗಲ ಪಾಳ್ಯ ಗ್ರಾಮ ದಲ್ಲಿ ವಿದ್ಯುತ್‌ ಕಂಬಗಳು ಬಿದ್ದಿವೆ. ಅದರ ಪಕ್ಕದಲ್ಲಿಯೇ ಕಾಂಪೌಂಡ್‌ ಕುಸಿದು ಬಿದ್ದಿದೆ. ವಿದ್ಯುತ್‌ ಕಂಬದ ಪಕ್ಕದಲ್ಲಿದ್ದ ಕಾರು, ಆಟೋ ಜಖಂಗೊಂಡಿದೆ. ಆವತಿ ಗ್ರಾಮದಲ್ಲಿ 1 ಮನೆ ಮೇಲ್ಛಾ ವಣಿ ಕುಸಿದಿದೆ. ಲಾಲಗೊಂಡಹಳ್ಳಿ ಇತರೆ ಕಡೆಗಳಲ್ಲಿ ರಾಜಕಾಲುವೆಗಳ ಒತ್ತುವರಿಯಿಂದಾಗಿ ಜಮೀನುಗಳಲ್ಲಿ ನೀರು ನಿಂತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

ಮಳೆಗೆ ಅಂಡರ್‌ ಪಾಸ್‌ನಲ್ಲಿ ನೀರು ತುಂಬಿ ಕೊಂಡಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ತಾಲೂಕಿನ ಕೆರೆಗಳು ತುಂಬಿ ಕೋಡಿ ಹೋಗುತ್ತಿವೆ. ರಾಜಕಾಲುವೆಗಳು ಒತ್ತುವರಿ ಯಾಗಿದ್ದು ಅಧಿಕಾರಿಗಳು ರಾಜಕಾಲುವೆಗಳ ಸರ್ವೇ ಮಾಡಿಸಿ, ನೀರು ಸರಾಗವಾಗಿ ಹೋಗುವಂತೆ ಆಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.