Road accident: ಹೆದ್ದಾರಿಯಲ್ಲಿ ದಟ್ಟ ಮಂಜು: ಸರಣಿ ಅಪಘಾತ


Team Udayavani, Dec 28, 2023, 1:50 PM IST

Road accident: ಹೆದ್ದಾರಿಯಲ್ಲಿ ದಟ್ಟ ಮಂಜು: ಸರಣಿ ಅಪಘಾತ

ಬೆಂಗಳೂರು/ನೆಲಮಂಗಲ:  ಬೆಂಗಳೂರು-­ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದಟ್ಟ ಮಂಜು ಆವರಿಸುತ್ತಿದ್ದು, ವಾಹನ ಓಡಾಟಕ್ಕೆ ತೀವ್ರ ತೊಂದರೆ ಆಗಿದೆ. ಬುಧವಾರ ಬೆಳಗಿನ ಜಾವ ದಟ್ಟ ಮಂಜಿನಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಕ್ಯಾಂಟರ್‌ಗೆ ಬಸ್‌ಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಇದರಿಂದ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತುಮಕೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕ್ಯಾಂಟರ್‌ ಹಾಗೂ ಟಿ.ಬೇಗೂರು ಸಮೀಪದ ತೋಣಚಿನಕುಪ್ಪೆ ಬಳಿ ನಿಧಾನವಾಗಿ ಚಲಿಸು­ತ್ತಿದ್ದವು. ಈ ವೇಳೆ, ವೇಗವಾಗಿ ಬಂದ ಬಸ್‌ಗಳು ದಟ್ಟ ಮಂಜಿನಲ್ಲಿ ಕ್ಯಾಂಟರ್‌ ನೋಡದೆ ಡಿಕ್ಕಿ ಹೊಡೆದಿವೆ. ಬಸ್‌ ಹಿಂದೆಯೇ ಬರುತ್ತಿದ್ದ ಬಸ್‌ಗಳೂ ಡಿಕ್ಕಿ ಹೊಡೆದುಕೊಂಡಿವೆ. ಬೆಳಗಿನ ಜಾವ ನಿದ್ದೆಯಲ್ಲಿದ್ದ ಬೆಂಗಳೂರಿಗೆ ಬರುತ್ತಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯವಾಗಿ ಆಸ್ಪತ್ರೆ ಸೇರಿದರೆ, ಮತ್ತೆ ಕೆಲವರು ಅದೃಷ್ಟವಶಾತ್‌ ಯಾವುದೇ ಸಮಸ್ಯೆಯಾಗದೆ ಮನೆ ಸೇರಿದ್ದಾರೆ.

ಒಟ್ಟಾರೆ 3 ಬಸ್‌, 1ಕ್ಯಾಂಟರ್‌ ಡಿಕ್ಕಿಯಾಗಿದ್ದು, ಬೆಳಗಿನ ಜಾವ ಸರಣಿ ಅಪಘಾತಕ್ಕೆ ಕಾರಣ­ವಾಗಿದೆ.

ಟ್ರಾಫಿಕ್‌ ಜಾಮ್‌: ಮುಂಜಾನೆಯೇ ದಟ್ಟ ಮಂಜಿ­ನಲ್ಲಿ ಅಪಘಾತವಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ಜಾಮ್‌ ಉಂಟಾಯಿತು. ಟ್ರಾಫಿಕ್‌ ಪೊಲೀಸರು ಬರಲು ಸ್ವಲ್ಪ ತಡವಾದ ಪರಿಣಾಮ ಕೆಲಗಂಟೆ ಕಾಲ 5-6 ಕಿ.ಮೀ. ಸಂಚಾರ ವ್ಯತ್ಯಯವಾಯಿತು. ಪೊಲೀಸರು ಸಂಚಾರ ನಿಯಂತ್ರಣಕ್ಕೆ ಹರ ಸಾಹಸಪಟ್ಟರು.

ಬೆಳಗ್ಗೆ 9 ಗಂಟೆಯಾದ್ರೂ ಕರಗದ ಮಂಜು: ನಗರ ಹೊರವಲಯದಲ್ಲಿ  ಚಳಿಯ ಜೊತೆಗೆ ದಟ್ಟ ಮಂಜು ಆವರಿಸುತ್ತಿದ್ದು, ಬೆಳಗ್ಗೆ 9 ಗಂಟೆ ಯಾದ್ರೂ ಮಂಜು ಕರುತ್ತಿಲ್ಲ, ಇದರಿಂದ ರೈತರು, ಜನ ಸಾಮಾನ್ಯರು ತತ್ತರಿಸಿದ್ದಾರೆ.

ಹೊಸಕೋಟೆ ಬಳಿ ಸರಣಿ ಅಪಘಾತ: ನಗರದ ವ್ಯಕ್ತಿ ಸಾವು

ಹೊಸಕೋಟೆ: ಹೊಸಕೋಟೆ ತಾಲೂಕಿನ ನಂದಗುಡಿಯ ರಾಜ್ಯ ಹೆದ್ದಾರಿ ಶಿವನಾಪುರ ಕ್ರಾಸ್‌ ಬಳಿ ನಡೆದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಗೋವಿಂದಪುರ ನಿವಾಸಿ ನಯಾಜ್‌ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಬೈಕ್‌ ಸವಾರರಾದ ಕಿರಣ್‌(23), ಪ್ರತಾಪ್‌ (26), ಆಟೋದಲ್ಲಿದ್ದ ನಯಾಜ್‌ (47) ಮೃತರು.

ಚಿಂತಾಮಣಿ-ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹೊಸಕೋಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಆಟೋ ಡಿಕ್ಕಿ ಹೊಡೆದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ 3 ಬೈಕ್‌ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ.  ಬೈಕ್‌ ಸವಾರ ಕಿರಣ್‌ (23) ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಬೆಂಗಳೂರಿನ ನಿಮ್ಹಾನ್ಸ್‌ ಹಾಗೂ ಬೌರಿಂಗ್‌ ಆಸ್ಪತ್ರೆಗೆ ರವಾನಿಸಿದ್ದ ಪ್ರತಾಪ್‌ (26), ಆಟೋದಲ್ಲಿದ್ದ ನಯಾಜ್‌ (47) ಚಿಕಿತ್ಸೆ ಫ‌ಲಿಸದೇ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಬೆಳಕಿಗೆ: ಪಾಟೀಲ ಆಸ್ಪತ್ರೆ ಸೀಜ್

festcide

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Bagalkote: ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

1-MLP

BJP:ಮಹಾಲಿಂಗಪುರ ಪುರಸಭೆಯ 4 ಸದಸ್ಯರು, 3 ಮುಖಂಡರು ಪಕ್ಷದಿಂದ ಉಚ್ಛಾಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.