ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ಸೇವೆ ನೀಡಿ

ಗ್ರಾಮಸ್ಥರಿಗೆ ತಿಳವಳಿಕೆ ನೀಡುವ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ

Team Udayavani, Apr 27, 2022, 4:15 PM IST

ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ಸೇವೆ ನೀಡಿ

ಆನೇಕಲ್‌: ನೂತನ ತಂತ್ರಜ್ಞಾನ ಮತ್ತು ಸಲಕರಣೆಗಳ ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಬೇಕೆಂದು ನೂತನ ವೈದ್ಯರಿಗೆ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿ ಪ್ರಸಾದ್‌ ಶೆಟ್ಟಿ ಸಲಹೆ ನೀಡಿದರು.

ಆನೇಕಲ್‌ ತಾಲೂಕು ಅತ್ತಿಬೆಲೆಯಲ್ಲಿರುವ ಆಕ್ಸ್‌ ಫ‌ರ್ಡ್‌ ವೈದ್ಯಕೀಯ ಮಹಾ ವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ತೃತೀಯ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ರೋಗಿಗಳು ವೈದ್ಯರಲ್ಲಿ ದೇವರನ್ನು ಕಾಣುತ್ತಾರೆ. ಅವರ ನೋವು, ಅಳುವನ್ನು ನಿಮ್ಮ ನಗು ಮುಖದೊಂದಿಗೆ ಸ್ವಾಗತಿಸಿದಾಗ ಅರ್ಧ ರೋಗ ಶಮನವಾದಂತೆ. ಹೊಸ ಉಪಕರಣಗಳು ಶಸ್ತ್ರ ಚಿಕಿತ್ಸೆಯನ್ನು ತಡೆದು ಉಪಶಮನ
ನೀಡುತ್ತದೆಯಾದರೂ, ದೀರ್ಘ‌ ಕಾಲದ ರೋಗ ತಡೆಯಲು ವೈದ್ಯರು ಹೆಚ್ಚು ಆದ್ಯತೆ ನೀಡಬೇಕಿದೆ.

ಆಧುನಿಕತೆ ರೂಢಿಸಿಕೊಂಡ ಜನ ಆಹಾರ ಪದ್ಧತಿ ಹಾಗೂ ತಮ್ಮ ದೈನಂದಿನ ಚಟುವಟಿಕೆ ಬದಲಿಸಿಕೊಳ್ಳಲು ಸಲಹೆ ನೀಡಬೇಕಿದೆ. ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಲು ಮುಂದಾಗಿ ಎಂದರು.

ಗ್ರಾಮಸ್ಥರಿಗೆ ಜಾಗೃತಿ: ಆಕ್ಸ್‌ಫ‌ರ್ಡ್‌ ವೈದ್ಯಕೀಯ ಮಹಾ ವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಛೇರ್ಮನ್ ಡಾ. ಎಸ್‌ಎನ್‌ ವಿಎಲ್‌ ನರಸಿಂಹರಾಜು ಮಾತನಾಡಿ, ಗ್ರಾಮೀಣ ಭಾಗದ ಜನರಿಗಾಗಿ ಆಸ್ಪತ್ರೆಯನ್ನು ತೆರೆದು ಉತ್ತಮ ವೈದ್ಯಕೀಯ ಚಿಕಿತ್ಸೆ ನಿರಂತರ ನೀಡುತ್ತಿದೆ. ತಜ್ಞ ವೈದ್ಯರ ತಂಡ ಕೆಲವು ಹಳ್ಳಿಗಳಿಗೆ ತೆರಳಿ ನೀರಿನ ಪರೀಕ್ಷೆ, ಆಹಾರ ಪದ್ಧತಿ, ಪರಿಸರವನ್ನು ಅವಲೋಕಿಸಿ ಇರುವ ನ್ಯೂನತೆ ಗುರುತಿಸಿ ಗ್ರಾಮಸ್ಥರಿಗೆ ತಿಳವಳಿಕೆ
ನೀಡುವ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

250 ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಅವಕಾಶ:ಪ್ರಸಕ್ತ ಸಾಲಿಗೆ 150 ವಿದ್ಯಾರ್ಥಿಗಳು ಪದವಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಅವರಲ್ಲಿ ಅಶ್ಮಿತ ಮೆನನ್‌ 3 ಹಾಗೂ ಅಲಂಕ್ರಿತ ಅವರು 5 ಚಿನ್ನದ ಪದಕ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿಗೆ 250 ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಕಲಿಯಲು ಅವಕಾಶವಿದ್ದು, 69 ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯವಿದೆ ಎಂದರು.

ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ:
ಕೋವಿಡ್‌ ಸಮಯದಲ್ಲಿ ಆಕ್ಸ್‌ಫೋರ್ಡ್‌ ಆಸ್ಪತ್ರೆಯ ಉತ್ತಮ ಸೇವೆಗಾಗಿ ಅನೇಕ ಸಂಘ ಸಂಸ್ಥೆಗಳು ಶ್ಲಾಘನೆ ಮಾಡಿದ್ದು, ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ತೃಪ್ತಿ ಇದೆ ಎಂದರು. ಡಾ.ಅಥಣಿ, ನಿರ್ದೇಶಕ ಶ್ರೀನಿವಾಸಲು ವೈ., ಪ್ರಾಂಶುಪಾಲ ಡಾ. ಎಂ.ಬಿ. ಸಾಣಿಕೋಪ್‌, ವೈದ್ಯಕೀಯ ಆಧೀಕ್ಷಕ ಡಾ. ಜಿ. ಮೋಹನ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.