ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿ; ಲೋಕೇಶ್‌

ಸ್ಪರ್ಧಾತ್ಮಕ ಮನೋಭಾವ ಹಾಗೂ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿ

Team Udayavani, Jul 29, 2022, 6:01 PM IST

ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿ; ಲೋಕೇಶ್‌

ನೆಲಮಂಗಲ: ಗ್ರಾಮೀಣ ಭಾಗದ ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಾಗಿ ಕಂಡು ಬಂದ ಹಿನ್ನೆಲೆ, ನಮ್ಮ ಗ್ರಾಪಂ ಸರ್ವ ಸದಸ್ಯರ ಸಲಹೆ ಮೇರೆಗೆ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿ, ಯುವ ಸಮುದಾಯವನ್ನು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಕಳಲುಘಟ್ಟ ಗ್ರಾಪಂ ಅದ್ಯಕ್ಷ ಗೋವೇನಹಳ್ಳಿ ಲೋಕೇಶ್‌ ಹೇಳಿದರು.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಕಳಲುಘಟ್ಟ ಪಂಚಾಯಿತಿ ಪ್ರೀಮಿಯರ್‌ ಲೀಗ್‌ ಮತ್ತು ವಿಷ್ಣು, ಅಪ್ಪು ಕಪ್‌ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿ, ಕ್ರೀಡಾ ಚಟುವಟಿಕೆಗಳ ಮೂಲಕ ಮಾನವನ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬಹುದು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಹೊಂದಾಣಿಕೆ, ಸಾಮರಸ್ಯ, ಬಾಂಧವ್ಯ ಸಹೋದರತ್ವ, ಸ್ಪರ್ಧಾತ್ಮಕ ಮನೋಭಾವ ಹಾಗೂ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಬಹುಮಾನ ವಿತರಣೆ: ಪಂದ್ಯಾವಳಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕ್ರಿಕೆಟ್‌ ಆಟಗಾರರ ಎಂಟು ತಂಡಗಳು ಕಪ್‌ ಪಡೆಯಲು ಮೈದಾನದಲ್ಲಿ ಸೆಣೆಸಾಟ ನಡೆಸಿದ್ದರು.

ಫೈನಲ್‌ ಪಂದ್ಯದಲ್ಲಿ ತೋಟನಹಳ್ಳಿ ಪ್ರದೀಪ್‌ ಮತ್ತು ಚೇತನ್‌ ನಾಯಕತ್ವದ ಜೈಶ್ರೀರಾಮ್‌ ಕ್ರಿಕೆಟರ್ಸ್‌ ತಂಡ ಮೊದಲ ಬಹುಮಾನದ 1 ಲಕ್ಷ ರೂಪಾಯಿ, ಟಗರು ಹಾಗೂ ವಿಷ್ಣು-ಅಪ್ಪು ಟ್ರೋಫಿ ಪಡೆದರು, ಎರಡನೇಯ ಬಹುಮಾನ 50 ಸಾವಿರ ರೂಗಳು ಆಕರ್ಷಕ ಟ್ರೋಫಿಯನ್ನು ಮಿಣ್ಣಾಪುರದ ಸನ್‌ ರೈಸರ್ಸ್‌, ತೃತೀಯ ಬಹುಮಾನವನ್ನು ನರಸಾಪುರ ತಂಡದವರು ಪಡೆದುಕೊಂಡರು. ಉಪಾಧ್ಯಕ್ಷರಾದ ನೇತ್ರಾವತಿ, ಪಿಡಿಒ ಗೀತಾಮಣಿ, ಸದಸ್ಯ ಮಿಣ್ಣಾಪುರ ರಂಗೇಗೌಡ, ಗಿರೀಶ್‌, ಆನಂದ್‌, ಶ್ರೀನಿವಾಸ್‌, ರೇಷ್ಮಾ, ಮಮತಾ, ಪದ್ಮಾವತಿ, ನರಸಿಂಹಮೂರ್ತಿ, ನರಸಮ್ಮ, ವಿಜಯಕುಮಾರಿ,ಹರೀಶ್‌, ಮಂಜುಳಾ, ಹುಚ್ಚಮ್ಮ, ಸೌಮ್ಯ, ರಮೇಶ್‌, ರಾಮು, ಕಿರಣ್‌,ದೀಪು, ನರಸಿಂಹಮೂರ್ತಿ, ತಿಮ್ಮೇಗೌಡ, ನಾಗರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.