ಬಿತ್ತನೆ ಆಲೂಗಡ್ಡೆಗೆ ದಿಢೀರ್‌ ಬೆಲೆ ಏರಿಕೆ


Team Udayavani, Oct 12, 2022, 2:52 PM IST

ಬಿತ್ತನೆ ಆಲೂಗಡ್ಡೆಗೆ ದಿಢೀರ್‌ ಬೆಲೆ ಏರಿಕೆ

ದೇವನಹಳ್ಳಿ: ದೇವನಹಳ್ಳಿ ಬಯಲುಸೀಮೆ ಪ್ರದೇಶಆಗಿರುವುದರಿಂದ ನೀರಿನ ಅಭಾವದ ನಡುವೆಯೂ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆ ಬೆಳೆಯುವುದರ ಮೂಲಕ ತಮ್ಮ ಜೀವನ ಕಟ್ಟಿಕೊಂಡಿರುವ ರೈತರಿಗೆ ಬರೀ 1600 ರೂ.ಗೆ ಮಾರಾಟ ಆಗುತ್ತಿದ್ದ ಬಿತ್ತನೆ ಆಲೂಗಡ್ಡೆ ಮೂಟೆ 3,200ರಿಂದ 4,300 ರೂ.ಗೆ ದಿಢೀರ್‌ ಬೆಲೆ ಏರಿಕೆ ಆಗುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರನ್ನು ಬೆಲೆ ಏರಿಕೆ ಬಿಸಿ ದಂಗಾಗಿಸಿದೆ.

ತಿಂಗಳ ಹಿಂದೆ ತೀವ್ರ ಮಳೆಯಿಂದ ಬಿತ್ತನೆ ಆಲೂಗಡ್ಡೆ ಯಾರೂ ಖರೀದಿ ಮಾಡಿರಲಿಲ್ಲ. ಆದರೆ, ಇದೀಗ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ರೈತರು ಬಿತ್ತನೆಗೆ ಮುಂದಾಗಿರುವ ಕಾರಣಕ್ಕೆ ವಿವಿಧ ಕಡೆಗಳಿಂದ ಬಿತ್ತನೆ ಆಲೂಗಡ್ಡೆ ತರಿಸಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಬಿತ್ತನೆ ಆಲೂಗಡ್ಡೆ ಬೆಲೆ ಹೆಚ್ಚಿಸಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.

ರೈತರಿಗೆ ಸಂಕಷ್ಟ: ಮಳೆಯಿಂದ ಆದ ಬೆಳೆನಷ್ಟದಿಂದ ಈಗಷ್ಟೇ ರೈತರು ಚೇತರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಬೆಳೆ ನಷ್ಟ ಪರಿಹಾರವು ಬಹಳಷ್ಟು ರೈತರ ಕೈ ಸೇರಿಲ್ಲ. ಹೂವು, ಹಣ್ಣು, ತರಕಾರಿ ಮಳೆಗೆ ಕೊಚ್ಚಿಹೋಗಿ ರೈತರು ಇನ್ನಿಲ್ಲದ ಪರಿಪಾಟು ಅನುಭವಿಸುತ್ತಿದ್ದಾರೆ. ಪ್ರಸ್ತುತ ಬಿತ್ತನೆ ಆಲೂಗಡ್ಡೆ 50 ಕೆ.ಜಿ. ಮೂಟೆ ದರ 3000 ರೂಪಾಯಿಗಳಿಂದ 4300 ರೂಪಾಯಿಗಳಿಗೆ ಏರಿಕೆ ಕಂಡಿದೆ. ದೇವನಹಳ್ಳಿ ತಾಲೂಕಿನ ಬಹುತೇಕ ರೈತರು, ಬಿತ್ತನೆ ಆಲೂಗಡ್ಡೆ ತರಲಿಕ್ಕಾಗಿ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಗೆ ಹೋಗುತ್ತಿದ್ದು, ಅಲ್ಲಿನ ಬೆಲೆ ಕೇಳಿ ಸುಸ್ತಾಗುತ್ತಿದ್ದಾರೆ.

ರೈತರ ಅಸಮಾಧಾನ: ವ್ಯಾಪಾರಸ್ಥರು, ಪಂಜಾಬ್‌ನ ಜಲಂಧರ್‌ನಿಂದ ಚಿಪ್ರೋನಾ, ಚೆಂಬಲ್‌, ಪೆಪ್ಸಿ, ಜ್ಯೋತಿ ಸೇರಿದಂತೆ ಬಗೆ ಬಗೆಯ ಬಿತ್ತನೆ ಆಲೂಗಡ್ಡೆ ಯನ್ನು ಮಾರುಕಟ್ಟೆಗೆ ತರಿಸುತ್ತಾರೆ. ಬಿತ್ತನೆಗೆ ಅಕ್ಟೋ ಬರ್‌ ಬಳಿಕ ಸೂಕ್ತ ಸಮಯವಾಗಿರುವ ಕಾರಣ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ. ಆದರೆ, ಇತ್ತಿಚೆಗೆ ಸುರಿದ ಧಾರಾಕಾರ ಮಳೆಗೆ ಬಿತ್ತನೆಯ ಆಲೂಗಡ್ಡೆ ತೋಟದಲ್ಲಿ ಕೊಳೆತು ಹಾಳಾಗಿದ್ದು, ಹೊಸದಾಗಿ ಬಿತ್ತನೆ ಕೈಗೊಳ್ಳಲು ಬಯಸಿರುವ ರೈತರಿಗೆ ದರದ ಏರಿಕೆಯ ಬಿಸಿ ತಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃತಕ ಅಭಾವ ಸೃಷ್ಟಿ : ಕೆಲ ರೈತರು ಹೇಳುವ ಪ್ರಕಾರ, ಅಗತ್ಯ ದಾಸ್ತಾನಿ ದ್ದರೂ ಮಧ್ಯವರ್ತಿಗಳು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಬೆಲೆ ಇಳಿಕೆ, ರೈತರಿಗೆ ಅನುಕೂಲವಾಗುವ ವಿಚಾರವಾಗಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರು ವುದು ಬೆಳೆಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ದೇವನಹಳ್ಳಿ ಭಾಗದಲ್ಲಿ 80ರಿಂದ 120 ಹೆಕ್ಟೇರ್‌ ಪ್ರದೇಶದಲ್ಲಿ ಆಲೂ ಗಡ್ಡೆ ಬಿತ್ತನೆ ಮಾಡ್ತಾರೆ. ಇವರೆಲ್ಲರೂ ಚಿಕ್ಕಬಳ್ಳಾಪುರದ ಎಪಿಎಂಸಿ.ಮಾರುಕಟ್ಟೆಗೆ ಹೋಗಿ ಬಿತ್ತನೆಗಡ್ಡೆ ತರುತ್ತಾರೆ. ಚಿಕ್ಕಬಳ್ಳಾ ಪುರ ಜಿಲ್ಲೆಯ ಉಪನಿರ್ದೇಶಕರನ್ನು ಸಂಪರ್ಕ ಮಾಡಿದ್ದೇವೆ. ಅವರು ಜಿಲ್ಲಾಧಿ ಕಾರಿ ಸಂಪರ್ಕ ಮಾಡುತ್ತಿದ್ದಾರೆ. ನಾವು ಕೂಡಾ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸುತ್ತೇವೆ. ಗುಣವಂತ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ

ಬೆಲೆಯು ದಿಢೀರನೇ ಏರಿಕೆ ಆಗಿರುವುದರಿಂದ ರೈತರು ತೊಂದರೆ ಅನುಭವಿಸು ವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ. ಕಳೆದ ಹತ್ತು ವರ್ಷಗಳಿಂದ ಆಲೂಗೆಡ್ಡೆ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದೇವೆ. 4,300 ರೂ. ಕೊಟ್ಟು ಆಲೂಗಡ್ಡೆ ಬಿತ್ತನೆ ಬೀಜ ತರುತ್ತಿದ್ದೇವೆ. ಸರಿಯಾದ ರೀತಿ ಬಿತ್ತನೆ ಬೀಜ ಸಿಗುತ್ತಿಲ್ಲ. ಪುರುಷೋತ್ತಮ್‌ಕುಮಾರ್‌, ಆಲೂಗಡ್ಡೆ ರೈತ ಬೈಚಾಪುರ

 

ಎಸ್‌. ಮಹೇಶ್‌

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.