ವಿಶ್ವಾಸ ದ್ರೋಹಿಗಳಿಗೆ ತಕ್ಕ ಪಾಠ ಕಲಿಸಿ


Team Udayavani, Nov 24, 2019, 3:00 AM IST

samasyegala

ಹೊಸಕೋಟೆ: ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರದ ಬಿಜೆಪಿ ಸರಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅಲ್ಲಂ ರಾಜು ಹೇಳಿದರು. ಅವರು ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಗೋಷ್ಠಿಯಲ್ಲಿ ಮಾತನಾಡಿದರು.

ಜಾರಿಗೊಳಿಸುತ್ತಿರುವ ಯೋಜನೆಗಳು ಕೇವಲ ಬಂಡವಾಳಶಾಹಿಗಳಿಗೆ ಅನುಕೂಲವಾಗಿದ್ದು ರಾಷ್ಟ್ರದ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳುತ್ತಿದ್ದು ಉದ್ಯೋಗ ಸೃಷ್ಟಿ ಬಗ್ಗೆ ನೀಡಿದ್ದ ಭರವಸೆಯನ್ನು ಇದುವರೆವಿಗೂ ಈಡೇರಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾಮಾನ್ಯ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಿಕೊಡಲು ವಿಫ‌ಲವಾಗಿದ್ದು ಆರ್ಥಿಕ ಬಿಕ್ಕಟ್ಟು ಸೃಷ್ಟಿಗೊಳಿಸಿರುವುದೇ ಪ್ರಮುಖ ಸಾಧನೆಯಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಮ್ಮಿಶ್ರ ಸರಕಾರವನ್ನು ಕುತಂತ್ರಗಳಿಂದಾಗಿ ಪದಚ್ಯುತಗೊಳಿಸಿ ಉಪಚುನಾವಣೆಗೆ ಬಿಜೆಪಿಯೇ ಕಾರಣವಾಗಿದೆ.

ರಾಜೀನಾಮೆ ನೀಡಿರುವ ಎಲ್ಲಾ 17 ಶಾಸಕರೂ ಸಹ ತಮ್ಮ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿದವರೇ ಆಗಿದ್ದು ಮತದಾರರು ಇಂತಹ ದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದರು. ಹೆಬ್ಬಾಳ ಶಾಸಕ ಬೈರತಿ ಸುರೇಶ್‌ ಮಾತನಾಡಿ ಚುನಾವಣೆ ನಂತರ ಎಂಟಿಬಿ ನಾಗರಾಜ್‌ ವಿರುದ್ಧ ದೂರು ದಾಖಲಿಸಲಾಗುವುದು.

ನಾಮಪತ್ರದೊಂದಿಗೆ ಸಲ್ಲಿಸಿರುವ ಮಾಹಿತಿಯಲ್ಲಿ ಸಾಲ ನೀಡಿರುವ ಬಗ್ಗೆ ಉಲ್ಲೇಖೀಸದೆ ಇದೀಗ ರಾಜಕಾರಣಿಗಳಿಗೆ ಕೋಟ್ಯಾಂತರ ರೂ.ಗಳನ್ನು ಕೊಟ್ಟಿರುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ತಾಲೂಕಿನಲ್ಲಿ ನ.24ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾಜಿ ಸಚಿವರುಗಳಾದ ಡಿ.ಕೆ.ಶಿವಕುಮಾರ್‌, ಜಮೀರ್‌ ಅಹಮದ್‌,

ಕೃಷ್ಣಬೈರೇಗೌಡ ಇನ್ನಿತರರು ಸೂಲಿಬೆಲೆ, ಅನುಗೊಂಡನಹಳ್ಳಿ, ನಂದಗುಡಿ ಹೋಬಳಿ ಹಾಗೂ ನಗರದಲ್ಲಿ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮಾಜಿ ಶಾಸಕರಾದ ಶ್ರೀನಿವಾಸ್‌, ರಾಘವೇಂದ್ರ ಹಿಟ್ನಾಳ್‌, ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಶಾಮಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.