ರಕ್ತಸಿಕ್ತ ಹಸೇನ್‌ ಹುಸೇನ್‌ ಆಚರಣೆ


Team Udayavani, Sep 18, 2019, 3:00 AM IST

raktasikta

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ನಡೆದ ಹಸೇನ್‌ ಹುಸೇನ್‌ ಧಾರ್ಮಿಕ ವಿಧಿ ವಿಧಾನಗಳನ್ನು ಧರ್ಮಗುರುಗಳ ನೇತೃದಲ್ಲಿ ನೆರವೇರಿಸಲಾಯಿತು. ಮೊಹರಂ ಮುಗಿದ 7 ದಿನಕ್ಕೆ ನಡೆಯುವ ಈ ಆಚರಣೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಶಿಯಾ ಮುಸ್ಲಿಂ ಬಾಂಧವರು ಬ್ಲೇಡು, ಕತ್ತಿ ಮೊದಲಾದ ಹರಿತ ಆಯುಧಗಳಿಂದ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಸಿಕ್ತ ದೇಹವನ್ನು ಹುಸೇನ್‌ ದೇವರಿಗೆ ಅರ್ಪಿಸುವ ದೃಶ್ಯ ಮೈಜುಮ್ಮೆನಿಸುವಂತಿತ್ತು.

ದೊಡ್ಡಬಳ್ಳಾಪುರದಲ್ಲಿ ಇದನ್ನು ಸುಮಾರು 260 ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದ್ದು, ನೈತಿಕತೆಗಾಗಿ ಕರ್ಬಾಲಾದಲ್ಲಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ಪ್ರವಾದಿ ಮೊಹಮ್ಮದ್‌ ಅವರ ಮೊಮ್ಮಗ ಹಜ್ರತ್‌ ಇಮಾಮ್‌ ಹುಸೇನ್‌ ಮತ್ತು ಅವರ ಒಡನಾಡಿಗಳ ಹುತಾತ್ಮ ದಿನದ ಸ್ಮರಣಾರ್ಥ ಮೊಹರಂ ಆಚರಿಸಲಾಗುತ್ತದೆ. ಇದು ಮುಸಲ್ಮಾನರಿಗೆ ಶೋಕಾಚರಣೆಯ ಸಂದರ್ಭವಾಗಿದೆ.

ಹತ್ತು ದಿನಗಳ ಧಾರ್ಮಿಕ ಕೈಂಕರ್ಯಗಳು, ಉಪವಾಸ ಇತ್ಯಾದಿಗಳ ಅನುಷ್ಠಾನದ ಅಂತಿಮ ದಿನವಾಗಿ ಇಂದು ತಾಝಿಯಾ ಪ್ರದರ್ಶನಗಳು, ಮೆರವಣಿಗೆಗಳು ನಡೆಯುತ್ತಿವೆ. ಜೊತೆಗೆ ಕರ್ಬಾಲದಲ್ಲಿ ಹುತಾತ್ಮರಾದವರ ತ್ಯಾಗ, ಬಲಿದಾನಗಳನ್ನು ನೆನಪಿಸಿಕೊಳ್ಳುವ ಧಾರ್ಮಿಕ ಸಭೆ ಮಜಾಲಿಸ್‌ಗಳು ನಡೆಯುತ್ತವೆ. ಇಮಾಮ್‌ ಹುಸೇನ್‌ ತ್ಯಾಗ ಬಲಿದಾನಗಳನ್ನು ಅಂದು ಸ್ಮರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆ ನಡೆಯುವ ಪ್ರಮುಖ ಸ್ಥಳವಾಗಿದ್ದು, ದೇಶದ ವಿವಿಧ ಮೂಲೆಗಳಿಂದ ಹಾಗೂ ವಿದೇಶಗಳಿಂದ ಮುಸ್ಲಿಂಬಾಂಧ‌ವರು ಆಗಮಿಸಿ ಈ ಆಚರಣೆಯಲ್ಲಿ ಭಾಗವಹಿಸುವುದು ವಿಶೇಷ.

ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಅಂಜುಮನ್‌ ಎ ಹೈದರಿಯ ಸಂಘಟನೆ ಮತ್ತು ಹುಸೇನ್‌ ಕಮಿಟಿ ನೇತೃದಲ್ಲಿ ಮೊಹರಂ ಶೋಕಾಚರಣೆ ನಡೆಸಲಾಗುತ್ತದೆ. ನಂತರದ ದಿನಗಳಲ್ಲಿ ಕಿಲ್ಲಾ ಮಸೀದಿಯಲ್ಲಿ ನಡೆಯುವ ವಿವಿಧ ಪೂಜಾ ಕಾರ್ಯಗಳಲ್ಲಿ ಮುಸ್ಲಿಂ ಬಾಂಧವರಲ್ಲದೇ ಹಿಂದೂಗಳು ಸಹ ಪಾಲ್ಗೊಂಡು ಬಾಬಯ್ಯನಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸುತ್ತಾರೆ. ವ್ರತಾಚರಣೆ ಮಾಡಿ ಹೂವು ಸಮರ್ಪಿಸಿ, ಪ್ರಸಾದ ಹಂಚಲಾಗುತ್ತದೆ.

ಐತಿಹ್ಯ: ಪಾಪದ ಜೀವನಕ್ಕಿಂತ ಗೌರವದ ಸಾವು ಲೇಸು ಎಂದು ಸತ್ಯ, ಅಹಿಂಸೆ, ಧರ್ಮಕ್ಕಾಗಿ ತನ್ನ ಮತ್ತು ತನ್ನ ಕುಟುಂಬದವರ ಪ್ರಾಣ ಬಲಿದಾನದ ಐತಿಹ್ಯ ಸಾರುವ ಈ ಇಮಾಮ್‌ ಹುಸೇನ್‌ ತ್ಯಾಗ ಬಲಿದಾನದ ಸ್ಮರಣೆಗಾಗಿ ಆತನ ಜೀವನದ ಚರಿತ್ರೆಯಲ್ಲಿ ಬರುವ ಯುದ್ಧದ ಸನ್ನಿವೇಶದಲ್ಲಿ ಆದ ಅಚಾತುರ್ಯಕ್ಕೆ ಪಶ್ಚಾತ್ತಾಪ ಸಲ್ಲಿಸುವ ಸಲುವಾಗಿ ನಡೆಯುವ ಹಸೇನ್‌ ಹುಸೇನ್‌ ಆಚರಣೆ ಬೆಳೆದು ಬಂದಿದ್ದು, ಈ ಆಚರಣೆಗೆ 1400 ವರ್ಷಗಳ ಇತಿಹಾಸವಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.