Old taluk office: ಶಿಥಿಲಾವಸ್ಥೆಗೆ ತಲುಪಿದ ಹಳೇ ತಾಲೂಕು ಕಚೇರಿ


Team Udayavani, Aug 14, 2023, 10:31 AM IST

Old taluk office: ಶಿಥಿಲಾವಸ್ಥೆಗೆ ತಲುಪಿದ ಹಳೇ ತಾಲೂಕು ಕಚೇರಿ

ದೇವನಹಳ್ಳಿ: 1880ರಲ್ಲಿ ಬ್ರಿಟೀಷರ ಆಡಳಿತಾ ವಧಿಯಲ್ಲಿ ನಿರ್ಮಾಣವಾದ ಹಳೆ ತಾಲೂಕು ಕಚೇರಿ ಬಳಕೆಯಾಗದೆ ಗಿಡಗೆಂಟಿ ಬೆಳೆದು ಶಿಥಿಲಾವಸ್ಥೆಗೆ ತಲುಪುತ್ತಿದ್ದು ಇದೊ ಂದು ಪಾರಂಪರಿಕ ಸ್ಮಾರಕ ವಾಗಿದ್ದು, ಇದು ತಾಲೂಕಿನ ಇತಿಹಾಸ, ಪರಂಪರೆ, ಸಂಸ್ಕೃತಿ, ಹಾಗೂ ಹಿರಿಮೆಯನ್ನು ಪ್ರತಿ ಬಿಂಬಿಸುವ ಸಂಗ್ರಹಾಲಯವನ್ನಾಗಿ ಮಾಡುವಂತೆ ಅನೇಕರ ಅಭಿಪ್ರಾಯವಾಗಿದೆ.

ಪತ್ರ ವ್ಯವಹಾರ: ಹಳೆ ತಾಲೂಕು ಕಚೇರಿ ಕಟ್ಟಡವನ್ನು ವಸ್ತು ಸಂಗ್ರಾಹಲಯವನ್ನಾಗಿ ಮಾರ್ಪಡಿಸಲು ಬಿಟ್ಟಸಂದ್ರ ಗುರುಸಿದ್ದಯ್ಯ 14-07-2022ರಂದು  2 ಸಾವಿರ ಸಾರ್ವಜನಿಕರ ಸಹಿ ಸಂಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಹಾಗೂ ಪ್ರವಾಸೋದ್ಯಮ ಇಲಾಖೆ ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಪುರಾತತ್ವ ಇಲಾಖೆಗೆ ಸಲ್ಲಿಸಿದ್ದು  15-09-2022 ರಂದು ಮೈಸೂರಿನ ಪುರಾ ತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ನೀಲಿನಕ್ಷೆ ಸಿದ್ಧಪಡಿಸಿ ವರದಿ ನೀಡಿ ದ್ದಾರೆ. 23-11-2022ರಂದು ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ವಸ್ತು ಸಂಗ್ರಹಾಲ ಯವನ್ನಾಗಿ ಮಾರ್ಪಡಿಸಲು 1 ಕೋಟಿ 61 ಲಕ್ಷ ಪ್ರಸ್ತಾವನೆ ಹಾಗೂ ಕಟ್ಟಡವನ್ನು ಹಸ್ತಾಂತರಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಆದರೆ ಇದುವರೆಗೆ ಕಟ್ಟಡ ಹಸ್ತಾಂತರವಾಗಿಲ್ಲ. ದಿನೆ ದಿನೇ ಕಟ್ಟಡ ಮಾತ್ರ ಮಳೆಯಿಂದಾಗಿ ಹಾಳಾಗುತ್ತಿದೆ.

ಸಾರ್ವಜನಿಕರಿಂದ ಸಹಿ ಸಂಗ್ರಹ: ಬಿಟ್ಟಸಂದ್ರ ಗುರುಸಿದ್ದಯ್ಯ ತಾಲೂಕಿನ 2 ಸಾವಿರಕ್ಕೂ  ಹೆಚ್ಚು ಸಾರ್ವ ಜನಿಕರ ಸಹಿ ಸಂಗ್ರಹಿಸಿ ಹಳೆ ತಾಲೂಕು ಕಚೇರಿಯನ್ನು ಪ್ರಾಚ್ಯವಸ್ತು ಇಲಾಖೆಗೆ ಕಟ್ಟಡವನ್ನು ಹಸ್ತಾಂತರಿಸಿ ಕಟ್ಟಡ ದುರಸ್ತಿ ಮಾಡಿ ಯತಾಸ್ಥಿತಿ ಕಾಪಾಡಿ ವಸ್ತು ಸಂಗ್ರಹಾ ಲಯವನ್ನಾಗಿ ಮಾರ್ಪ ಡಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್‌, ಸಚಿವರು, ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ ಅದರೆ ಅದು ಇದುವರೆಗೂ ಕಾರ್ಯಗತವಾಗಿಲ್ಲ.

ಶಿಥಿಲಗೊಂಡಿರುವ ಕಟ್ಟಡ: 150 ವರ್ಷ ಇತಿಹಾಸ ವಿರುವ ಪಾರಂಪರಿಕ ಕಟ್ಟಡ ಇದಾಗಿದ್ದು. ದೇವನ ಹಳ್ಳಿಗೆ ಪ್ರವೇಶಿಸುತ್ತಿದ್ದಂತೆ ಮೊದಲಿಗೆ ಕಾಣುವುದೇ ಹಳೆ ತಾಲೂಕು ಕಚೇರಿ ಕಟ್ಟಡ ಹಿಂದೆ ಇದೇ ಕಟ್ಟಡಲ್ಲಿ ತಾಲೂ ಕಿನ ಸಾರ್ವಜನಿಕರ ಕೆಲಸಗಳು ನಡೆಯುತ್ತಿದ್ದವು, ನೂತನವಾಗಿ ಮಿನಿ ವಿಧಾನ ಸೌಧ ನಿರ್ಮಾಣವಾದ ಮೇಲೆ ಆ ಕಟ್ಟಡಕ್ಕೆ ತಾಲೂಕು ಆಡಳಿತ ಸ್ಥಳಾಂತರ ಗೊಂಡ ಮೇಲೆ ಹಳೆ ಕಟ್ಟಡ ಬಳಕೆಯಾಗದೆ ನಿರ್ವಹಣೆ ಇಲ್ಲದೆ, ಕಟ್ಟಡದ ಗೋಡೆಗಳ ಮೇಲೆ ಗಿಡಗೆಂಟಿಗಳು ಬೆಳೆದು ನಿಂತಿದ್ದು ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಹಳೆ ಪಾರಂಪರಿಕ ಕಟ್ಟಡವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಒತ್ತಾಯ:

ಹಳೆಯ ತಾಲೂಕು ಕಚೇರಿ ಇದೊಂದು ಪಾರಂಪರಿಕ ಕಟ್ಟಡವಾಗಿದ್ದು, ಇದು ಬ್ರಿಟಿಷರ ಆಡಳಿತಾವಧಿಯಲ್ಲಿ ನಿರ್ಮಾಣವಾಗಿದ್ದು. ಅಂತಹ ಕಟ್ಟಡ ಬಳಕೆಯಾಗದೆ ನಿರ್ವಹಣೆಯಿಲ್ಲದೆ, ಗಿಡಗೆಂಟಿ ಬೆಳೆದು ಕಟ್ಟಡ ಶಿಥಿಲಾವಸ್ಥೆಗೆ ತಲುಪುತ್ತಿದೆ. ಬ್ರಿಟಿಷರ ಆಡಳಿತಾವಧಿಯಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಯಥಾಸ್ಥಿತಿ ಉಳಿಸಿ ವಸ್ತುಸಂಗ್ರಹಾಲಯವನ್ನಾಗಿ ಮಾರ್ಪಾಡು ಮಾಡಲು ತಾಲೂಕಿನಾದ್ಯಂತ 2 ಸಾವಿರಕ್ಕೂ ಹೆಚ್ಚು ಜನರ ಸಹಿಸಂಗ್ರಹಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಪತ್ರ ಬರೆದ ನಂತರ ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಟ್ಟಡ ಹಸ್ತಾಂತರಿಸುವ ಹಂತದಲ್ಲಿದೆ. ಈ ವಿಚಾರವಾಗಿ ನಾನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೂ ಸಹ ಮನವಿ ಮಾಡಿದ್ದೇನೆ. ಸಚಿವರು ಜಿಲ್ಲಾಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಿದ್ದಾರೆ. ಆದಷ್ಟು ಬೇಗ ಕಟ್ಟಡ ಪುರಾತತ್ವ ಇಲಾಖೆಗೆ ಹಸ್ತಾಂತರಿಸಿ ಹಳೆ ಪಾರಂಪರಿಕ ಕಟ್ಟಡವನ್ನು ವಸ್ತು ಸಂಗ್ರಾಹಲವನ್ನಾಗಿ ಪರಿವರ್ತಿಸಬೇಕಾಗಿದೆ ಎಂದು  ಇತಿಹಾಸ ಸಂಶೋಧಕ ಬಿಟ್ಟಸಂದ್ರ ಗುರುಸಿದ್ದಯ್ಯ ತಿಳಿಸಿದರು.

ದೇವನಹಳ್ಳಿ ಹಳೆ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಕಟ್ಟಡವನ್ನು ಇಲಾಖೆಗೆ ಹಸ್ತಾಂತರಿ ಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಇದುವರೆಗೂ ಹಸ್ತಾಂತರವಾಗಿಲ್ಲ. ಮತ್ತೂಂದು ಪತ್ರ ಬರೆಯುತ್ತೇವೆ. ಹಳೆ ತಾಲೂಕು ಕಚೇರಿ ಇತಿಹಾಸ ಪ್ರಸಿದ್ಧವಾಗಿರುವ ಕಟ್ಟಡವಾಗಿದೆ. ದೇವನಹಳ್ಳಿಗೆ ವಸ್ತುಸಂಗ್ರಹಾಲಯದ ಅವಶ್ಯಕತೆ ಇದೆ. ಕಟ್ಟಡ ಹಸ್ತಾಂತರಿಸಿದರೆ ಇಲಾಖೆಯ ಅನುದಾನದಿಂದ ವಸ್ತು ಸಂಗ್ರಹಾಲಯನ್ನಾಗಿ ಮಾಡುತ್ತೇವೆ.  -ದೇವರಾಜು.ಎ, ಆಯುಕ್ತರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.