ಇಬ್ಬರು ಹತ್ಯೆಕೋರರಿಗೆ ಪೊಲೀಸರ ಗುಂಡೇಟು

ಕಾರು ಚಾಲಕನನ್ನು ಹತ್ಯೆಗೈದು ಸುಟ್ಟುಹಾಕಿದ್ದರು • ಹಿಡಿಯಲು ಹೋದ ಪಿಎಸ್‌ಐಗೆ ಡ್ರ್ಯಾಗರ್‌ನಿಂದ ಹಲ್ಲೆ

Team Udayavani, May 22, 2019, 8:09 AM IST

br-tdy-1..

ನೆಲಮಂಗಲ ಹೊರವಲಯದಲ್ಲಿ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸುವ ವೇಳೆ ಗಾಯಗೊಂಡ ಸಬ್‌ಇನ್ಸ್‌ಪೆಕ್ಟರ್‌ ನವೀನ್‌ಕುಮಾರ್‌ರ ಆರೋಗ್ಯ ವಿಚಾರಿಸಿದ ಅಧಿಕಾರಿಗಳು.

ನೆಲಮಂಗಲ: ಕಾರು ಶೋಕಿಗಾಗಿ ಚಾಲಕನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನದ ವೇಳೆ ಪೊಲೀಸರ ಬಂದೂಕುಗಳು ಸದ್ದು ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳ್ಳಗ್ಗೆ ಸಂಭವಿಸಿದೆ.

ಜಕ್ಕಸಂದ್ರ ಗ್ರಾಮದ ವಿನೋದ್‌ಕುಮಾರ್‌ (24)ಮತ್ತು ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿಯ ಹೇಮಂತ್‌ಸಾಗರ್‌(24)ಗೆ ಪೊಲೀಸರ ಗುಂಡೇಟು ಬಂದಿದೆ.

ಇಬ್ಬರ ಬಂಧನದ ವೇಳೆ ವೃತ್ತ ನಿರೀಕ್ಷಕ ಅನಿಲ್ಕುಮಾರ್‌ ಅವರ ತಂಡದಲ್ಲಿದ್ದ ಪಟ್ಟಣ ಪೊಲೀಸ್‌ ಠಾಣೆ ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌ ಘಟನೆ ವೇಳೆ ಗಾಯಗೊಂಡಿದ್ದಾರೆ.

ಘಟನೆ ವಿವರ: ವಿನೋದ್‌ಕುಮಾರ್‌ ಮತ್ತು ಹೇಮಂತ್‌ಸಾಗರ್‌ ಎಂಬ ಬಂಧಿತ ಆರೋಪಿಗಳು ಮೂಲತಃ ಅಪರಾಧ ಹಿನ್ನಲೆಯುಳ್ಳವರಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರು ಎಲೆಕ್ಟ್ರಾನಿಕ್‌ ಸಿಟಿಯಲ್ಲಿಯಲ್ಲಿ ಕ್ಯಾಬ್‌ಚಾಲಕನಾಗಿದ್ದ ಆಂಧ್ರ ಮೂಲದ ಕೆಂಪೇಗೌಡ ಎಂಬುವವರ ಇನ್ನೋವಾ ಕಾರನ್ನು ಬಾಡಿಗೆಗೆ ಪಡೆದು ಮಾರ್ಗಮಧ್ಯೆ ಹತ್ಯೆಗೈದು ನಂತರ ಮೃತದೇಹವನ್ನು ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲರಬಾಣವಾಡಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟುಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರ ಮೂಲಗಳು ತಿಳಿಸಿವೆ.

ಅಕ್ರಮಹಣ ಸಂಪಾದನೆ:ಸರಗಳ್ಳತನ ಹಾಗೂ ಮತ್ತಿತರ ಪ್ರಕರಣಗಳಲ್ಲಿ ಜೈಲು ಸೇರಿದ್ದ ವಿನೋದ್‌ಕುಮಾರ್‌ ಹಾಗೂ ಹೇಮಂತ್‌ಸಾಗರ್‌ ಇಬ್ಬರೂ ಜೈಲಿನಲ್ಲಿದ್ದಾಗಲೇ ಪರಸ್ಪರ ಸ್ನೇಹ ಬೆಳೆಸಿಕೊಂಡಿದ್ದರು. ಜಾಮೀನಿನ ಮೇಲೆ ಹೊರಬಂದ ಇಬ್ಬರು ತಮ್ಮಲ್ಲಿರುವ ಅಪರಾಧ ಚಟುವಟಿಕೆ ಮನಸ್ಥಿತಿಯನ್ನೇ ಬಂಡವಾಳವನ್ನಾಗಿಸಿಕೊಂಡು ಅಕ್ರಮ ಹಣ ಸಂಪಾದನೆಗೆ ಮುಂದಾಗಿದ್ದರು. ಈ ಹಿಂದೆಯೇ ಪರಿಚಿತರಾಗಿದ್ದ ಕಾರು ಚಾಲಕನ ಕಾರನ್ನು ಪ್ರವಾಸಕ್ಕೆಂದು ಬಾಡಿಗೆ ಪಡೆದು ಮಂಡ್ಯ ಮತ್ತಿತರೆಡೆಗೆ ಪ್ರವಾಸಕ್ಕೆ ತೆರಳಿ ನಂತರ ಹಾಸನ ಮೂಲಕ ಸಾಗುವ ವೇಳೆ ಕಾರು ಚಾಲಕ ಮತ್ತು ಪ್ರವಾಸಿಗರಿಬ್ಬರ ನಡುವೆ ಮಾತಿನ ಚಕಮಕಿ ಸಂಭವಿಸಿ ನಂತರ ಇಬ್ಬರು ಆರೋಪಿಗಳು ಚಾಲಕ ಕೆಂಪೇಗೌಡನನ್ನು ಹತ್ಯೆಗೈದು ನಂತರ ಮಂಗಳೂರು ಬೆಂಗಳೂರು ಮಾರ್ಗದ ಮೂಲಕ ಸಾಗಿ ನೆಲಮಂಗಲ ಹೊರವಲಯದ ಮಲ್ಲರಬಾಣವಾಡಿ ಗ್ರಾಮದ ನಿರ್ಜನ ಪ್ರದೇಶಕ್ಕೆ ಶವ ತಂದು ಸುಟ್ಟುಹಾಕಿದ್ದರು. ಗ್ರಾಮಸ್ಥರಿಂದ ಬೆಳಕಿಗೆ ಬಂದಿದ್ದ ಹತ್ಯೆ ಪ್ರಕರಣವನ್ನು ಬೆನ್ನತ್ತಿದ್ದ ವೃತ್ತ ನಿರೀಕ್ಷಕ ಅನಿಲ್ಕುಮಾರ್‌ ಮತ್ತು ತಂಡ, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸಾಮಾನ್ಯರಲ್ಲ: ಬಂಧಿತರು ಸಿಲಿಕಾನ್‌ ಸಿಟಿ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವ ಟಿಕೆಗಳಲ್ಲಿ ಭಾಗಿಯಾದ್ದು ಪೊಲೀಸರಿಗೆ ತಲೆನೋವಾಗಿದ್ದರು.

ಚೇತರಿಕೆ: ಆರೋಪಿಗಳನ್ನು ಬಂಧಿಸುವ ವೇಳೆ ಗಾಯಗೊಂಡ ಪಿಎಸ್‌ಐ ಎಂ.ಬಿ.ನವೀನ್‌ಕುಮಾರ್‌ ಹಾಗೂ ಆರೋಪಿಗಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿದೆ. ನವೀನ್‌ಕುಮಾರ್‌ರ ಎಡಗೈಗೆ ತೀವ್ರವಾಗಿ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳ ಕಾಲಿಗೆ ಗುಂಡು:

ಸೋಮವಾರ ತಡರಾತ್ರಿ ಸೊಂಡೆಕೊಪ್ಪ ಕಡೆಯಿಂದ ಪಟ್ಟಣಕ್ಕೆ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸೊಂಡೆಕೊಪ್ಪರಸ್ತೆಯ ಬಯಲು ಉದ್ಬವ ಗಣಪತಿ ದೇವಸ್ಥಾನದ ಬಳಿ ಆರೋಪಿಗಳನ್ನು ಅಡ್ಡಗಟ್ಟಿ ಹಿಡಿಯಲು ಮುಂದಾದ ಸಬ್‌ಇನ್ಸ್‌ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌ರಿಗೆ ಆರೋಪಿಗಳು ಡ್ರಾಗರ್‌ನಿಂದ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ವೃತ್ತ್ತನಿರೀಕ್ಷಕ ಅನಿಲ್ಕುಮಾರ್‌ ಗಾಳಿಯಲ್ಲಿ ಗುಂಡುಹಾರಿಸಿ ಎಚ್ಚರಿಕೆ ನೀಡಿದರೂ ಲೆಕ್ಕಿಸದ ಆರೋಪಿ ಸಬ್‌ಇನ್ಸ್‌ಪೆಕ್ಟರ್‌ ನವೀನ್‌ಕುಮಾರ್‌ರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಆರೋಪಿಗಳ ಕಾಲಿಗೆ ಗುಂಡುಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.