ಗಗನಕ್ಕೇರಿದ ತರಕಾರಿ ಬೆಲೆ: ಸುಸ್ತಾದ ಗ್ರಾಹಕ


Team Udayavani, Apr 30, 2019, 3:00 AM IST

gagana

ದೇವನಹಳ್ಳಿ: ಬಿಸಿಲಿನ ಝಳಕ್ಕೆ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ತೋಟಗಳಲ್ಲಿ ತರಕಾರಿ ಬೆಳೆ ಸರಿಯಾಗಿ ಬಾರದ ಕಾರಣ ತರಕಾರಿ ಮತ್ತು ಸೊಪ್ಪುಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟುವಂತಾಗಿದೆ.

ದಿನೇ ದಿನೆ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಮಾರುಕಟ್ಟೆಯಲ್ಲಿ ತಾಜಾ ತರಕಾರಿಗಳು ಬರುತ್ತಿಲ್ಲ. ಬೆಲೆ ಏರುತ್ತಿರುವುದರಿಂದ ಗ್ರಾಹಕರಲ್ಲಿ ಖರೀದಿ ಆತಂಕ ಉಂಟಾಗಿದೆ. ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರು ಕೆ.ಜಿ.ಗಟ್ಟಲೇ ಖರೀದಿಸುವ ಬದಲಿಗೆ ಅರ್ಧ, ಕಾಲು ಕೆ.ಜಿ.ಗೆ ಇಳಿದಿದ್ದಾರೆ. ಕೆಲವರಂತೂ ಸೊಪ್ಪುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜನರು ಗಗನಕ್ಕೇರಿರುವ ಬೆಲೆಯ ಬಗ್ಗೆ ಲೆಕ್ಕಾಚಾರ ಹಾಕತೊಡಗಿದ್ದಾರೆ.

ಸಾಂಬರ್‌ಗೆ ತರಕಾರಿ ಬಳಕೆ ಕಡಿಮೆ: ತರಕಾರಿ ಬೆಲೆ ಏರಿಕೆಯಿಂದ ಮಹಿಳೆಯರಂತೂ ದಿನನಿತ್ಯ ಯಾವ ಅಡುಗೆ ಮಾಡುವುದು ಎಂಬ ಚಿಂತೆಗೀಡಾಗಿದ್ದಾರೆ. ತರಕಾರಿ ಬೆಲೆ ಎಷ್ಟೇ ಗಗನಕ್ಕೇರಿದರೂ ತಿನ್ನುವುದು ತಪ್ಪುವುದಿಲ್ಲ ಎಂದು ಮಹಿಳಾ ಗ್ರಾಹಕರ ವಾದವಾಗಿದೆ. ಕಾಯಿಪಲ್ಯ ಸವಿಯುತ್ತಿದ್ದವರು ಸೊಪ್ಪಿನ ಸಾರು ಮಾಡಲು ಮುಂದಾಗುತ್ತಿದ್ದಾರೆ.

ಅದರಲ್ಲೂ ಮದುವೆ ಸೀಜನ್‌ ಇರುವುದರಿಂದ ತರಕಾರಿ ಬೆಲೆ ಗಗನಕ್ಕೇರಿದ ಪರಿಣಾಮ ಬಡವರು ಹಾಗೂ ಮಧ್ಯಮ ವರ್ಗದವರು ಪಲ್ಯಗಳ ಬಗ್ಗೆ ಚಿಂತನೆ ಮಾಡುವಂತಾಗಿದೆ. ಹೀಗೆಯೇ ಬೆಲೆ ಹೆಚ್ಚಾಗುತ್ತಿದ್ದರೆ ಮದುವೆ ಊಟದ ಸಾಂಬರ್‌ಗೆ ತರಕಾರಿ ಬಳಕೆ ಕಡಿಮೆಯಾಗುವ ಸಾಧ್ಯತೆಯೂ ಇಲ್ಲದಿಲ್ಲ. ಅದರ ಬದಲಿಗೆ ತಿಳಿಸಾರು, ಅನ್ನ ಮಾಡಿ ಬಡಿಸುವುದು ಸೂಕ್ತ ಎಂದು ಅಡುಗೆ ಭಟ್ಟರ ಅಭಿಪ್ರಾಯವಾಗಿದೆ.

ಗ್ರಾಹಕರು ತರಕಾರಿ ಮತ್ತು ಸೊಪ್ಪು ಖರೀದಿ ಮಾಡಲು ಹೊರಟ ಸಂದರ್ಭದಲ್ಲಿ ಬೆಲೆ ಗಗನಕ್ಕೇರಿದೆ. ಬೇಸಿಗೆ ಮತ್ತು ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಯಾವುದೇ ಬೆಳೆ ಕೊಯ್ಲು ಹಾಗೂ ಇಳುವರಿಯಲ್ಲಿ ವ್ಯತ್ಯಯವಾಗಿದೆ. ಹಾಗಾಗಿ, ಮಾರುಕಟ್ಟೆಗೆ ತರಕಾರಿ ಸರಿಯಾದ ರೀತಿಯಲ್ಲಿ ಸರಬರಾಜು ಆಗುವಲ್ಲಿ ಅನಾನುಕೂಲವಾಗುತ್ತಿದೆ.

ಮಾರುಕಟ್ಟೆಯಲ್ಲಿ ಗ್ರಾಹಕರು ಈರುಳ್ಳಿ ಎಷ್ಟು ಬೆಲೆ, ಹುರುಳಿಕಾಯಿ ಎಷ್ಟು ದರ, ಹೀರೇಕಾಯಿ ಎಷ್ಟು ಬೆಲೆ, ಕ್ಯಾರೆಟ್‌ ಹೇಗೆ ಎಂದು ಕೇಳುತ್ತಿರುವುದು ಮಾರುಕಟ್ಟೆಯಲ್ಲಿ ಕಂಡುಬಂದಿತು. ಸೊಪ್ಪು, ತರಕಾರಿಗಳ ಬೆಲೆ ಕೇಳಿ ಗ್ರಾಹಕರಿಗೆ ಶಾಕ್‌ ಆಗಿದೆ. ಈಗಿನ ಮಾರುಕಟ್ಟೆಯಲ್ಲಿ ಈರುಳ್ಳಿ ಒಂದು ಕೆ.ಜಿ.ಗೆ 20ರೂ., ಆಲೂಗೆಡ್ಡೆ 20ರೂ., ಹುರುಳಿಕಾಯಿ ಕೆ.ಜಿ.ಗೆ ರೂ.120, ಕ್ಯಾರೆಟ್‌ 50ರೂ., ಟೊಮೆಟೋ 40ರೂ., ಕೊತ್ತುಂಬರಿ ಕೆ.ಜಿ.ಗೆ 100ರೂ., ಪುದೀನ ಕಟ್ಟು 20ರೂ., ಮೆಂತ್ಯೆ ಸೊಪ್ಪು 20ರೂ., ಸಬ್ಬಕ್ಕಿ 30ರೂ. ಮತ್ತು ದಂಟು, ಪಾಲಕ್‌, ಹರಿವೆ,

ಚೊಕ್ಕೊತ ಸೊಪ್ಪು ಕಟ್ಟಿಗೆ 10ರೂ., ಬೆಳುಳ್ಳಿ 80ರೂ., ಮೆಣಸಿನಕಾಯಿ 100ರೂ., ಬದನೆಕಾಯಿ 40ರೂ., ಬೆಂಡೆಕಾಯಿ 40ರೂ., ತೊಂಡೆಕಾಯಿ 40ರೂ., ನವಿಲುಕೋಸು 40ರೂ., ಹೂಕೋಸು 30ರೂ., ಎಲೆಕೋಸು 30ರೂ., ಸೌತೇಕಾಯಿ ಕೆ.ಜಿ.ಗೆ 40ರೂ., ಕ್ಯಾಪ್ಸಿಕಂ 60ರೂ., ಬಟಾಣಿ 120ರೂ., ಮೂಲಂಗಿ 40ರೂ., ಶುಂಟಿ 120ರೂ., ಬೀಟ್‌ರೂಟ್‌ 40ರೂ., ನುಗ್ಗೆಕಾಯಿ 50 ರೂ. ಹಾಗೂ ಬೇಸಿಗೆ ಇರುವುದರಿಂದ ಒಂದು ನಿಂಬೆಹಣ್ಣಿಗೆ 5ರೂ.ನಂತೆ ದರ ಹೆಚ್ಚಿಸಿಕೊಂಡಿವೆ.

ಬೆಲೆಗಳು ಏರುತ್ತಲೇ ಇವೆ: ಒಂದು ತಿಂಗಳಿನಿಂದ ತರಕಾರಿ ಹಾಗೂ ಆಹಾರ ಧಾನ್ಯಗಳ ಬೆಲೆ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ನಿನ್ನೆ ಇದ್ದ ಬೆಲೆ ಇಂದು ಇರುವುದಿಲ್ಲ, ಇಂದು ಇದ್ದ ಬಲೆ ನಾಳೆ ಇರುವುದಿಲ್ಲ. ನಿತ್ಯ ತರಕಾರಿ ಹಾಗೂ ಆಹಾರ ಪದಾರ್ಥಗಳ ಬೆಲೆಗಳು ಏರುತ್ತಲೇ ಇವೆ ಎಂದು ಗ್ರಾಹಕರ ಅಭಿಪ್ರಾಯವಾಗಿದೆ.

ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಹೆಚ್ಚಾಗಿರುತ್ತದೆ. ತೋಟಗಳಲ್ಲಿ ನೀರಿನ ಕೊರತೆ ಇರುವುದರಿಂದ ಸರಿಯಾದ ರೀತಿ ತರಕಾರಿಗಳು ಮಾರುಕಟ್ಟೆಗೆ ಬರುವುದು ಕಷ್ಟವಾಗುತ್ತದೆ. ಮಳೆ ಇಲ್ಲ, ಬೆಳೆ ಇಲ್ಲ, ಕೂಲಿ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬೆಳೆಗಳ ಬೆಲೆಗಳು ಜಾಸ್ತಿಯಾದರೂ ತರಕಾರಿ ಖರೀದಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ತರಕಾರಿ ಬೆಲೆ ಹೆಚ್ಚಾಗಿರುವುದರಿಂದ ಎಷ್ಟೇ ಬೆಲೆ ಏರಿದರೂ ಖರೀದಿಸಲೇಬೇಕು.
-ಸೌಮ್ಯಾ, ಗೃಹಿಣಿ.

ಪ್ರತಿನಿತ್ಯ ಮಾರುಕಟ್ಟೆಯಲ್ಲಿ ಎಲ್ಲಾ ತರಕಾರಿಗಳನ್ನು ತಂದು ಮಾರುವುದೇ ನಮ್ಮ ಉದ್ಯೋಗ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸರಿಯಾದ ರೀತಿ ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ. ಹೆಚ್ಚು ಬೆಲೆ ಕೊಟ್ಟು ತರಕಾರಿ ತಂದು ಮಾರುತ್ತಿದ್ದೇವೆ. ಕೊತ್ತುಂಬರಿ ಸೊಪ್ಪನ್ನು ಕೇಳುವಹಾಗೇಯಿಲ್ಲ. ಸೊಪ್ಪಿನಲ್ಲಿ ಹೆಚ್ಚು ದುಬಾರಿ ಕೊತ್ತುಂಬರಿಯಾಗಿದೆ. ಬಟಾಣಿ ಒಂದು ಕೆ.ಜಿ.ಗೆ 120ರೂ., ಹುರುಳಿಕಾಯಿ ಕೆ.ಜಿ.ಗೆ 120ರೂ. ಇದೆ.
-ನೇತ್ರಾವತಿ, ತರಕಾರಿ ವ್ಯಾಪಾರಿ.

ಬಿಸಿಲು ಹೆಚ್ಚಾಗಿರುವುದರಿಂದ ಸೊಪ್ಪು³ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದಂಟಿನ ಸೊಪ್ಪು ಕಟ್ಟಿಗೆ 10ರೂ. ಇದೆ. ಸಬ್ಬಕ್ಕಿ 30ರೂ., ಮೆಂತೆ ಸೊಪ್ಪು 20ರೂ.ನಂತೆ ಮಾರಾಟವಾಗುತ್ತಿದೆ. ಕೊತ್ತಂಬರಿ ಸೊಪ್ಪು ಒಂದು ಕೆ.ಜಿ.ಗೆ 100ರೂ. ಆಗಿದೆ. ಕರಬೇವಿನ ಸೊಪ್ಪು ಒಂದು ಕಟ್ಟಿಗೆ 10ರೂ. ಇತ್ತು, ಈಗ ಕೆ.ಜಿ.ಗೆ 50-60ರೂ.ಆಗಿದೆ. ಸೊಪ್ಪಿನ ಬೆಲೆ ಏರಿಕೆಯಿಂದ ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ಸೊಪ್ಪುಗಳು ಒಣಗಿ ಹೋಗುತ್ತಿವೆ.
-ಲಕ್ಷ್ಮಮ್ಮ, ಸೊಪ್ಪು ವ್ಯಾಪಾರಿ.

* ಎಸ್‌.ಮಹೇಶ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.