Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ
Team Udayavani, Sep 9, 2024, 10:04 AM IST
ಆನೇಕಲ್: ಅಂಗಡಿಯಿಂದ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ಯಲು ಯತ್ನಿಸಿದ ಮದ್ಯ ಸೇವಿಸಿದ್ದ ವ್ಯಕ್ತಿಯನ್ನು ಯುವಕರ ಗುಂಪೊಂದು ನಗ್ನಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದ ಮದ್ಯ ವ್ಯಸನಿ. ಈತ, ಹಲವು ವರ್ಷಗಳಿಂದ ಬನ್ನೇರುಘಟ್ಟ ರಸ್ತೆಯ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ. ಮಹಿಳೆಯೊಬ್ಬರು ಮನೆಯಿಂದ ಕೊಂಚ ದೂರವಿದ್ದ ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಕುಡಿದ ಅಮಲಿನಲ್ಲಿದ್ದ ರವಿಕುಮಾರ್, ಹಿಂದಿನಿಂದ ಬಂದು ಮಹಿಳೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯಲು ಯತ್ನಿಸಿದಾಗ ಜೋರಾಗಿ ಕಿರುಚುತ್ತ ಮಹಿಳೆ ತಪ್ಪಿಸಿಕೊಂಡು ಓಡುತ್ತಿದ್ದಳು. ಈ ದೃಶ್ಯವನ್ನು ಕಂಡ ಅಲ್ಲಿದ್ದ ಯುವಕರ ಗುಂಪು, ಕುಡುಕನನ್ನು ನಗ್ನಗೊಳಿಸಿ ಥಳಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.