ರಂಗಕಲೆಯತ್ತ ಯುವಕರ ಒಲವು ಹೆಮ್ಮೆ ವಿಚಾರ

ಕಲೆಗಳು ಮುಂಬರುವ ದಿನಗಳಲ್ಲಿ ಇತಿಹಾಸವಾಗಿ ಉಳಿಯುವುದರಲ್ಲಿ ಸಂಶಯವಿಲ್ಲ

Team Udayavani, May 3, 2022, 5:46 PM IST

ರಂಗಕಲೆಯತ್ತ ಯುವಕರ ಒಲವು ಹೆಮ್ಮೆ ವಿಚಾರ

ನೆಲಮಂಗಲ: ವಿದ್ಯಾರ್ಥಿಗಳು ಬೇಸಿಗೆ ರಜೆ ದಿನಗಳಲ್ಲಿ ನಡೆಯುವ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಅತ್ಯುತ್ತಮ ವೇದಿಕೆಯನ್ನು ಕಲ್ಪಿಸಿಕೊಂಡಂತ್ತಾಗುತ್ತದೆ ಎಂದು ರಂಗ ಕರ್ಮಿ ಡಾ.ಗೋವಿಂದಸ್ವಾಮಿ ಅಭಿಪ್ರಾಯಪಟ್ಟರು.

ಪಟ್ಟಣದ ಸದಾಶಿವ ನಗರದ ರಂಗಶಿಕ್ಷಣ ಕೇಂದ್ರದಲ್ಲಿ ನಡೆದ ಬೇಸಿಗೆ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಂಗ ಕಲೆಯೆಂಬುದು ಕಲೆಗಳಲ್ಲಿಯೇ ಅತ್ಯಂತ ಶ್ರೇಷ್ಠ ಕಲೆಯಾಗಿದೆ. ಮಕ್ಕಳು ಆಧುನಿಕತೆ ಮತ್ತು ತಾಂತ್ರಿಕತೆಯ ಅಬ್ಬರದ ನಡುವೆಯೂ ರಂಗ ಚಟುವಟಿಕೆ, ನೃತ್ಯದ ಕಡೆಗೆ ಗಮನವಹಿಸಿರುವುದು ಸಂತಸದ ವಿಚಾರ. ಇತ್ತೀಚಿನ ದಿನಗಳಲ್ಲಿ ಆಧುನಿಕ ಬೆಳ್ಳಿತೆರೆ ಮತ್ತು ಕಿರುತೆರೆಗಳ ಅಬ್ಬರದ ನಡುವೆ ಜೀವಂತ ಕಲೆಗಳ ಕಲಿಕೆಗೆ ಯುವಪೀಳಿಗೆ ಮುಂದಾಗಿರುವುದು ಹೆಮ್ಮೆಯನ್ನುಂಟು ಮಾಡಿದೆ.

ಪ್ರಸ್ತುತ ರಂಗಭೂಮಿ ಕಲಾವಿದರು ಮತ್ತು ಜಾನಪದ ಕಲಾವಿದರು ತಮ್ಮಲ್ಲಿರುವ ಕಲೆಯನ್ನು ಯುವಪೀಳಿಗೆಗೆ ಹಸ್ತಾಂತರಿಸುವ ಸಲುವಾಗಿ ಅವರನ್ನು ಪ್ರೇರೆಪಿಸಿ, ಕಲೆಯನ್ನು ಧಾರೆಯೆರೆಯ ಬೇಕಾಗಿದೆ. ಇಲ್ಲವಾದಲ್ಲಿ ಕಲೆಗಳು ಮುಂಬರುವ ದಿನಗಳಲ್ಲಿ ಇತಿಹಾಸವಾಗಿ ಉಳಿಯುವುದರಲ್ಲಿ ಸಂಶಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮತ್ತಷ್ಟು ಕಲಾ ಸೇವೆ ನಮ್ಮೆಲ್ಲರ ಹಂಬಲ: ರಂಗ ಶಿಕ್ಷಣ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಕೇಂದ್ರವತಿಯಿಂದ ತಾಲೂಕಿನ ವಿವಿಧ ಗ್ರಾಮಗಳ ಆಸಕ್ತ ಕಲಾವಿದರಿಗೆ ಸೂಕ್ತ ತರಬೇತಿ ಮತ್ತು ಪ್ರದರ್ಶನಕ್ಕೆ ಸೂಕ್ತ ಸಹಕಾರವನ್ನು ನೀಡುತ್ತಾ ಬಂದಿದೆ. ಸಂಸ್ಥೆಯು 27ನೇ ವರ್ಷಕ್ಕೆ ಕಾಲಿಟ್ಟಿರುವುದು ತಾಲೂಕಿನ ಕೀರ್ತಿಯಾಗಿದೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾ ಸ್ಪರ್ಧೆಗಳಲ್ಲಿ ಕೇಂದ್ರ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶನ ಮಾಡಿ, ಪ್ರಶಸ್ತಿಗಳಿಗೆ ಭಾಜನರಾಗಿರುವುದು ನಮ್ಮ ಕೇಂದ್ರದ ಶ್ರಮಕ್ಕೆ ಸಿಕ್ಕ ಪ್ರತಿಫ‌ಲವಾಗಿದೆ. ಮತ್ತಷ್ಟು ಕಲಾ ಸೇವೆ ಮಾಡಬೇಕೆಂಬುದು ನಮ್ಮೆಲ್ಲರ ಹಂಬಲವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಪರಿಸರ ಜಾಗೃತಿ ಮೂಡಿಸಲು ಕಾಡ್ಗಿಚ್ಚು ನಾಟಕ ಪ್ರದರ್ಶನ ಮಾಡಿದರು. ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.

ಲಂಬಾಣಿ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷೆ ವರಲಕ್ಷ್ಮೀ, ಉಪವಲಯ ಅರಣ್ಯಾಧಿಕಾರಿ ಗುರುಮೂರ್ತಿ, ರಂಗ ಶಿಕ್ಷಣ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕಿ ಮಂಜುಳ ಸಿದ್ದರಾಜು, ರಂಗಕರ್ಮಿ ದಿನೇಶ್‌ ಚಿಕ್ಕಮಾರನಹಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.