ಯೋಗ-ಭೋಗದ ಸಮತೋಲನದಿಂದ ಆರೋಗ್ಯಕರ ಜೀವನ

ಸಂಸ್ಕಾರ ಕೃತಿ ಡಾ| ಮಹೇಶ ಜೋಶಿ ಅನಾವರಣ ; ಮನೆ-ಮನೆಗೆ ಆಯುರ್ವೇದ ಸಿದ್ಧಾಂತ ತಲುಪಿಸುವ ಗುರಿ: ಡಾ| ಕಜೆ

Team Udayavani, Sep 12, 2022, 4:56 PM IST

20

ಬೆಳಗಾವಿ: ಮನುಷ್ಯನ ಜೀವನ ಪರಿಪೂರ್ಣವಾಗಲು ಭೋಗವೂ ಬೇಕು, ಯೋಗವೂ ಬೇಕು. ಇವೆರಡರ ಸಮತೋಲನವೇ ಆರೋಗ್ಯಕರ ಜೀವನಕ್ಕೆ ಬುನಾದಿಯಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಹೇಳಿದರು.

ನಗರದ ಶಹಾಪುರದಲ್ಲಿರುವ ಕೆಎಲ್‌ಇ ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಖ್ಯಾತ ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ ಅವರ ಆಯುರ್ವೇದ ಜ್ಞಾನ ಯಾನ ಸರಣಿ ಪುಸ್ತಕಗಳ ಏಳನೇ ಕೃತಿಯಾದ ಸಂಸ್ಕಾರ ಪುಸ್ತಕವನ್ನು ರವಿವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯು ಯೋಗ ಮತ್ತು ಭೋಗದ ನಡುವೆ ಸಮತೋಲನ ಸಾಧಿಸುವ ಮೂಲಕ ಆರೋಗ್ಯಕ್ಕೆ ಮಹತ್ವ ನೀಡುತ್ತ ಬಂದಿದೆ. ಆಹಾರ ಹಿತ ಮತ್ತು ಮಿತವಾಗಿರಬೇಕು ಎಂಬುದನ್ನು ಆಯುರ್ವೇದದಲ್ಲಿ ಹೇಳಲಾಗಿದೆ ಎಂದರು.

ಡಾ. ಗಿರಿಧರ ಕಜೆ ಅವರು ನಮ್ಮ ಆಯುರ್ವೇದವನ್ನು ಕಾರ್ಪೋರೇಟ್‌ ಜಗತ್ತಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಅವರು ಕನ್ನಡದಲ್ಲಿ ಬರೆದಿರುವ ಆಯುರ್ವೇದ ಕುರಿತ ಪುಸ್ತಕಗಳನ್ನು ಖರೀದಿಸಿ ಓದುವ ಮೂಲಕ ಓದುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌ ಉದ್ಘಾಟಿಸಿ ಮಾತನಾಡಿ, ವೈದ್ಯರು ತಮ್ಮಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಧೈರ್ಯ ತುಂಬಬೇಕು. ಇಂದಿನ ದಿನಮಾನದಲ್ಲಿ ಹೆದರಿಸುವ ವೈದ್ಯರೇ ಹೆಚ್ಚಿರುವಾಗ ಡಾ. ಗಿರಿಧರ ಕಜೆ ಅವರು ರೋಗಿಗಳಲ್ಲಿ ಧೆ„ರ್ಯ ತುಂಬುವ ವೈದ್ಯರ ಸಾಲಿನಲ್ಲಿ ಶ್ರೇಷ್ಠರಾಗಿ ನಿಲ್ಲುತ್ತಾರೆ. ಅವರ ಬಳಿ ಚಿಕಿತ್ಸೆ ಪಡೆದು ಗುಣಮುಖನಾಗಿರುವ ನನ್ನ ಅನುಭವದ ಮಾತು ಇದಾಗಿದೆ ಎಂದರು.

ಆಯುರ್ವೇದ ಸಿದ್ಧಾಂತ ಪಸರಿಸಲಿ: ಆಶಯ ನುಡಿಗಳನ್ನಾಡಿದ ಕೃತಿಕಾರ ಡಾ. ಗಿರಿಧರ ಕಜೆ, ವಿಶ್ವ ಆರೋಗ್ಯ ಸಂಸ್ಥೆಯು 2000ನೇ ಇಸವಿಯ ಹೊತ್ತಿಗೆ ವಿಶ್ವದ ಪ್ರತಿಯೊಬ್ಬರಿಗೂ ಆರೋಗ್ಯ ಒದಗಿಸುವ ಗುರಿ ಹೊಂದಿತ್ತು. ಆದರೆ 2022ನೇ ಇಸ್ವಿ ಬಂದರೂ ವಿಶ್ವದ ಪ್ರತಿಯೊಬ್ಬರಿಗೂ ಆರೋಗ್ಯ ಒದಗಿಸುವ ಕನಸು ಈಡೇರಿಲ್ಲ. ಬದಲಿಗೆ ರೋಗಗಳು ಹೆಚ್ಚಾಗುತ್ತಲೇ ಇವೆ. ಮೊದಲಿದ್ದ ಸಣ್ಣ ಪುಟ್ಟ ಕಾಯಿಲೆಗಳ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಮೊದಲಾದ ಕಾಯಿಲೆಗಳ ಪ್ರಮಾಣ ಉಲ್ಬಣಗೊಂಡಿದೆ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯು ಉತ್ತಮ ಉದ್ದೇಶ ಹೊಂದಿದ್ದರೂ ಅದರ ಕಾರ್ಯ ವಿಧಾನದಲ್ಲಿ ಎಡವಿದ್ದರಿಂದ ಉದ್ದೇಶ ಈಡೇರದಂತಾಯಿತು. ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದ ಎಲ್ಲೆಡೆ ಔಷಧ ತಲುಪಿಸಿದರೆ ಎಲ್ಲರಿಗೂ ಆರೋಗ್ಯ ಲಭಿಸುತ್ತದೆ ಎಂಬ ತಪ್ಪು ಕಲ್ಪನೆಯೇ ಅದರ ಗುರಿ ಈಡೇರದಿರಲು ಕಾರಣವಾಯಿತು. ಎಲ್ಲೆಡೆ ಔಷಧ ತಲುಪಿಸಿದರೆ ಆರೋಗ್ಯ ಲಭಿಸುವುದಿಲ್ಲ. ಆಯುರ್ವೇದ ಸಿದ್ಧಾಂತದ ಜೀವನ ಶೆ„ಲಿಯಿಂದ ಮಾತ್ರ ವಿಶ್ವದಾದ್ಯಂತ ಪ್ರತಿಯೊಬ್ಬರಿಗೂ ಆರೋಗ್ಯ ಭಾಗ್ಯ ಸಾಧ್ಯ ಎಂದರು.

ಆಯುರ್ವೇದ ವೈದ್ಯ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಬೇರೆ ವಿಧಾನಗಳನ್ನು ಪ್ರ್ಯಾಕ್ಟಿಸ್‌ ಮಾಡಬಾರದು ಎಂದು ಸಲಹೆ ನೀಡಿದ ಡಾ. ಗಿರಿಧರ ಕಜೆ, ನಮ್ಮ ಉದ್ದೇಶ ಮನೆ ಮನೆಗೆ ಆಯುರ್ವೇದ ಔಷಧಗಳನ್ನು ತಲುಪಿಸುವುದಲ್ಲ, ಬದಲಿಗೆ ಪ್ರತಿ ಮನಸ್ಸಿಗೆ ಆಯುರ್ವೇದ ಸಿದ್ಧಾಂತವನ್ನು ತಲುಪಿಸುವುದಾಗಿದೆ ಎಂದರು.

ಸೆಲ್ಕೋ ಸೋಲಾರ್‌ನ ಸಿಇಒ ಮೋಹನ ಭಾಸ್ಕರ ಹೆಗಡೆ ಮಾತನಾಡಿ, ಆಯುರ್ವೇದ ಕೇವಲ ರೋಗಕ್ಕೆ ಚಿಕಿತ್ಸೆ ನೀಡುವ ಶಾಸ್ತ್ರವಲ್ಲ. ಬದಲಿಗೆ ಅದು ರೋಗ ಬರದಂತೆ ತಡೆದು ಸ್ವಾಸ್ಥ್ಯ ಕಾಪಾಡುವ ಶಾಸ್ತ್ರವಾಗಿದೆ ಎಂದರು.

ಆಧುನಿಕ ಯುಗದಲ್ಲೂ ಆಯುರ್ವೇದ ಪ್ರಸ್ತುತ ಎಂಬುದನ್ನು ಡಾ. ಗಿರಿಧರ ಕಜೆ ಅವರು ಸಾಧಿಸಿ ತೋರಿಸಿದ್ದಾರೆ. ಋಷಿ ಸಂಸ್ಕೃತಿಯ ಬೇರನ್ನು ಹೊಸ ಸಂಸ್ಕೃತಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ ಅವರು ಡಾ. ಗಿರಿಧರ ಕಜೆ ಅವರಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ತಮ್ಮ ಅನುಭವವನ್ನು ವಿವರಿಸಿದರು. ಕಾಹೆರ್‌ ರಜಿಸ್ಟ್ರಾರ್‌ ಡಾ| ವಿ.ಎ. ಕೋಟಿವಾಲೆ ಅಧ್ಯಕ್ಷತೆ ವಹಿಸಿದ್ದರು. ಡಾ. ಗಿರಿಧರ ಕಜೆ, ಎಸ್‌. ಸುರೇಶ ಕುಮಾರ ಅವರನ್ನು ಸನ್ಮಾನಿಸಲಾಯಿತು.

ಎಸ್‌ಬಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಡಿವೇಶ ಅರಕೇರಿ, ಡಾ. ರವಿ ಪಾಟೀಲ, ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಕಿರಣ ಖೋತ ಪಾಟೀಲ, ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರು ಇದ್ದರು.

ಸೆಲ್ಕೋ ಸೋಲಾರ್‌ ಕಾರ್ಯಕ್ರಮ ಆಯೋಜಿಸಿತ್ತು. ವಿನಾಯಕ ಹೆಗಡೆ ಸ್ವಾಗತಿಸಿದರು. ಸುಬ್ರಮಣ್ಯ ಭಟ್‌ ನಿರೂಪಿಸಿದರು. ಬಿ.ಎಂ. ಕಂಕಣವಾಡಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ| ಸುಹಾಸ ಶೆಟ್ಟಿ ವಂದಿಸಿದರು.

ಎಲ್ಲೆಡೆ ಔಷಧ ತಲುಪಿಸಿದರೆ ಆರೋಗ್ಯ ಲಭಿಸುವುದಿಲ್ಲ. ಆಯುರ್ವೇದ ಸಿದ್ಧಾಂತದ ಜೀವನ ಶೈಲಿಯಿಂದ ಮಾತ್ರ ವಿಶ್ವದಾದ್ಯಂತ ಪ್ರತಿಯೊಬ್ಬರಿಗೂ ಆರೋಗ್ಯ ಭಾಗ್ಯ ಸಾಧ್ಯ. -ಗಿರಿಧರ ಕಜೆ, ಕೃತಿಕಾರ

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.