ರಘುನಾಥ ರಾವ್‌ ಮಲ್ಕಾಪುರೆಗೆ ಪ್ರಮುಖರ ಸಾಂತ್ವನ


Team Udayavani, Dec 22, 2022, 1:18 AM IST

ರಘುನಾಥ ರಾವ್‌ ಮಲ್ಕಾಪುರೆಗೆ ಪ್ರಮುಖರ ಸಾಂತ್ವನ

ಬೆಳಗಾವಿ: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ  ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಸ್ಥಾನದಿಂದ ಕೆಳಗಿಳಿದ ಬಿಜೆಪಿಯ ರಘುನಾಥ ರಾವ್‌ ಮಲ್ಕಾಪುರೆ  ಅವರಿಗೆ ಪ್ರಮುಖ ನಾಯಕರು ಸಮಾಧಾನ ಹೇಳಿದರು.  ಹೊರಟ್ಟಿ  ಆಯ್ಕೆ ಬಳಿಕ ಸದನದಲ್ಲಿ ಮಾತನಾಡಿದ ಬಿಜೆಪಿಯ ಆಯನೂರು ಮಂಜುನಾಥ್‌, ರಘುನಾಥ ರಾವ್‌ ಮಲ್ಕಾಪುರೆ  ಸಭಾಪತಿ ಸ್ಥಾನದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ಯೋಗ್ಯತೆಯಿದೆ, ಆದರೆ ಯೋಗವಿಲ್ಲ. ಹೀಗಾಗಿ ಅವರು ಸಭಾಪತಿ ಸ್ಥಾನದಲ್ಲಿ ಮುಂದುವರಿ ಯಲು ಸಾಧ್ಯವಾಗಲಿಲ್ಲ ಎಂದರು.

ಬಳಿಕ  ಮಾತನಾಡಿದ  ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್‌ ಗಾಯದ ಮೇಲೆ ಬೆರಳಿಡುವ ಕೆಲಸ ಮಾಡುತ್ತಾರೆ, ಅದು ಸರಿಯಲ್ಲ.  ಮಲ್ಕಾಪುರೆ ಅವರಿಗೆ ಉಜ್ವಲ ಭವಿಷ್ಯವಿದೆ. ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳುವುದು ಬೇಡ. ಪಕ್ಷ ಅವರಿಗೆ ಎಲ್ಲವನ್ನೂ ನೀಡಲಿದೆ ಎಂದು ಹೇಳುವ ಮೂಲಕ ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ ಮುನಿಸನ್ನು ಶಮನ ಮಾಡಲು ಯತ್ನಿಸಿದರು.

ಯಜಮಾನರು ಕರೆಸುತ್ತಾರೆ
ಜೆಡಿಎಸ್‌ನ ಭೋಜೇಗೌಡ ಮಾತನಾಡಿ, ಬಸವರಾಜ ಹೊರಟ್ಟಿ  8 ಬಾರಿ ಎಂಎಲ್‌ಸಿ ಆಗಿದ್ದು, ಎರಡು ಬಾರಿ ಹೊರತುಪಡಿಸಿ ಉಳಿದ 6 ಬಾರಿ ಜೆಡಿಎಸ್‌ನಿಂದ ಗೆದ್ದಿದ್ದಾರೆ ಎಂದರು. ಆಗ ಮಧ್ಯಪ್ರವೇಶಿಸಿದ ಬಸವರಾಜ ಹೊರಟ್ಟಿ, ಮೊದಲು ಪಕ್ಷೇತರ, ಅನಂತರ ಜನತಾ ಪಕ್ಷ, ಜನತಾದಳ, ಲೋಕಶಕ್ತಿ, ಜೆಡಿಎಸ್‌, ಈಗ ಬಿಜೆಪಿಯಿಂದ ಆಯ್ಕೆಯಾಗಿದ್ದೇನೆ ಎಂದರು. ಅದಕ್ಕೆ ಭೋಜೆಗೌಡ ಬಿಜೆಪಿ ಬಿಟ್ಟು ಎಲ್ಲವೂ ನಮ್ಮ ಪಕ್ಷವೇ. ಹೊರಟ್ಟಿ ಅವರು ಬಿಜೆಪಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಇನ್ನೂ ಜೆಡಿಎಸ್‌ನಲ್ಲಿದೆ ಎಂದರು. ಆಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಲೋಕಶಕ್ತಿ ನಿಮ್ಮ ಪ ಕ್ಷ ಎಂದು ಹೇಳಬೇಡಿ. ಇದು ಯಜಮಾನ್ರಿಗೆ (ದೇವೇಗೌಡರಿಗೆ) ಗೊತ್ತಾದರೆ ನಿಮ್ಮನ್ನು ಮನೆಗೆ ಕರೆಸುತ್ತಾರೆ ಎಂದು ಹೇಳಿದರು.

ಲೋಕಸಭೆ ಮಾದರಿಯಲ್ಲಿ ಪ್ರಶ್ನೋತ್ತರ ಕಲಾಪವಿರಲಿ
ಪ್ರಶ್ನೋತ್ತರ ಕಲಾಪ ಸಮರ್ಪಕವಾಗಿ ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿಯ ಎಚ್‌.ವಿಶ್ವನಾಥ್‌, ಲೋಕಸಭೆ, ರಾಜ್ಯಸಭೆಗಳಲ್ಲಿ 1 ಗಂಟೆ ಮಾತ್ರ ಪ್ರಶ್ನೋತ್ತರ ಕಲಾಪ ನಡೆಯಲಿದೆ. ಅದೇ ಮಾದರಿ ವಿಧಾನ ಪರಿಷತ್‌ನಲ್ಲೂ ಜಾರಿಯಾಗಬೇಕು ಎಂದರು. ಅದಕ್ಕೆ ಪೂರಕವಾಗಿ  ಮಾತನಾಡಿದ ಬಿಜೆಪಿಯ ಆಯನೂರು ಮಂಜುನಾಥ್‌, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಅವಧಿ 1 ಗಂಟೆಗೆ ನಿಗದಿ ಮಾಡಲಾಗಿದೆ. ಅದು ಮುಗಿದ ಬಳಿಕ ಸಚಿವರು ಉತ್ತರ ಹೇಳುತ್ತಿದ್ದರು. ಅದನ್ನು ತಡೆದು ಮುಂದಿನ ಕಲಾಪಕ್ಕೆ ಹೋಗಲಾಗುತ್ತದೆ. ಅದನ್ನು ಇಲ್ಲೂ ಅಳವಡಿಸಬೇಕು ಎಂದು ಹೇಳಿದರು.

ಹೊರಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಪ್ರಕ್ರಿಯೆಯು ಜನತಂತ್ರದ ಮೇಲಿನ ವಿಶ್ವಾಸ ಹೆಚ್ಚುವಂತಾಗಿದೆ. ಸದನದಲ್ಲಿ ಜನರ ಸಮಸ್ಯೆ ನಿವಾರಣೆಗೆ ಹೊರಟ್ಟಿ ಅವರ ಮಾರ್ಗದರ್ಶನ ಅತ್ಯಗತ್ಯ. ಆ ಕೆಲಸವನ್ನು ಅವರು ಮಾಡಲಿದ್ದಾರೆ.
-ಕೋಟ ಶ್ರೀನಿವಾಸ ಪೂಜಾರಿ, ಸಭಾನಾಯಕ

ಹೊರಟ್ಟಿ ಅವರು ರಾಮಕೃಷ್ಣ ಹೆಗ್ಗಡೆ ಅವರ ಗರಡಿಯಲ್ಲಿ ಬೆಳೆದವರು. ಅವರಂತೆಯೇ ಉತ್ತಮ ರಾಜಕಾರಣಿ. ಹೀಗಾಗಿಯೇ ವಿರೋಧ ಪಕ್ಷವಾದರೂ ಸಭಾಪತಿ ಆಯ್ಕೆಯಲ್ಲಿ ತಟಸ್ಥವಾಗಿ ಉಳಿದೆವು. ವಿಪಕ್ಷ ಹಾಗೂ ಆಡಳಿತ ಪಕ್ಷಗಳ ಬಗ್ಗೆ ಭೇದವಿಲ್ಲದೆ ಅವರು ಕೆಲಸ ಮಾಡಬೇಕು.
-ಬಿ.ಕೆ. ಹರಿಪ್ರಸಾದ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.