![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 10, 2021, 6:52 PM IST
ಚಿಕ್ಕೋಡಿ: ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.
ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ಅಗತ್ಯ ಪರವಾನಗಿ ಪಡೆದು ಗಡಿಗ್ರಾಮ ಬೋರಗಾಂವದಲ್ಲಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದ ಇಚಲಕರಂಜಿ ಮೂಲದ ರಾಜು ಪಾಶ್ಚಾಪುರೆ ಅವರನ್ನು ಹೆದರಿಸಿದ್ದ ಪಿಎಸ್ಐ ಮತ್ತು ಪೇದೆಗಳು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಾರ್ಖಾನೆ ಮಾಲೀಕ ಎಸಿಬಿಗೆ ದೂರು ಸಲ್ಲಿಸಿದ್ದರು.
ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸರನ್ನು ಬಲೆಗೆ ಕೆಡವಿದ್ದಾರೆ. ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಜೆ.ಎಂ. ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಎಚ್ ಸುನೀಲಕುಮಾರ, ಎ.ಎಸ್.ಗುದಿಗೊಪ್ಪ, ಧಾರವಾಡದ ಅಲಿ ಶೇಖ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.